ಮೀನುಗಾರ ಕುಟುಂಬಗಳಿಗೆ ಕೆರೆ ಹಸ್ತಾಂತರಿಸಿ ಆರ್ಥಿಕ ನೆರವು: ಶ್ರೀನಿವಾಸ ಪೂಜಾರಿ


Team Udayavani, Feb 23, 2020, 12:00 AM IST

ram-45

ಉಡುಪಿ: ಮೀನು ಸಾಕಾಣಿಕೆಗೆ ಕೆರೆಗಳನ್ನು ಮೀನುಗಾರ ಕುಟುಂಬಗಳಿಗೆ ನೀಡಿ ಮೀನುಗಾರಿಕೆಗೆ ನಡೆಸಲು ಮತ್ತು ಆರ್ಥಿಕ ಸಹಾಯಕ್ಕೆ ಸರಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿರಿಸುವ ಸಾಧ್ಯತೆಯಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ಜಿ.ಪಂ. ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಶನಿವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಮಾಹಿತಿ ಕಾರ್ಯಾಗಾರ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯರೂಪ ಹಂತದಲ್ಲಿ ಹಲವು ಯೋಜನೆ
ಕರಾವಳಿಯಲ್ಲಿ ಹಲವು ಮೀನುಗಾರಿಕೆ ಯೋಜನೆಗಳು ಕಾರ್ಯರೂಪ ಹಂತದ ಲ್ಲಿದೆ. ದಶಕಗಳ ಬೇಡಿಕೆಯಾಗಿದ್ದ ಗಂಗೊಳ್ಳಿ ಕಿರು ಬಂದರು ಅಭಿವೃದ್ಧಿಗೆ 12 ಕೋ.ರೂ. ವೆಚ್ಚದ ಮಂಜೂರಾತಿ ನೀಡಲಾ ಗಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ 34 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. 180.84 ಕೋ.ರೂ ವೆಚ್ಚದಲ್ಲಿ ಬಂದರು ಅಭಿವೃದ್ಧಿಗೆ ಸರಕಾರದಿಂದ‌ ಅನುಮೋದನೆ ದೊರಕಿದೆ. ಮೀನುಗಾರಿಕೆಯ ಅಭಿವೃದ್ಧಿಗೆ ಸರಕಾರ ಬದ್ಧತೆ ತೋರಿದೆ. ಮತ್ಸಗಂಧಿ ಯೋಜನೆ 11 ಕಡೆ ಜಾರಿಯಾಗಿದೆ ಇನ್ನು ಕೆಲವೆಡೆ ಆಗಬೇಕಿದೆ ಎಂದರು. ನೇಕಾರರು, ರೈತರು ಸಹಿತ ಇನ್ನಿತರ ವಲಯಗಳಿಗೆ ನೀಡಿದಂತೆ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರ ತಲಾ 50 ಸಾವಿರ ರೂ. ಸಾಲ ಮನ್ನಾ ನೀಡು ತ್ತಿದೆ. ಇದಕ್ಕಾಗಿ ಸರಕಾರ 60 ಕೋ.ರೂ. ಮೀಸಲಿರಿಸಿದೆ. ರಾಜ್ಯದಲ್ಲಿ 23 ಸಾವಿರ ಮೀನುಗಾರ ಮಹಿಳಾ ಫ‌ಲಾನುಭವಿ ಗಳಿದ್ದು, ಅದರಲ್ಲಿ 18ಸಾವಿರ ಮಹಿಳೆಯರು ಉಡುಪಿ ಜಿಲ್ಲೆಯವರೇ ಆಗಿದ್ದಾರೆ ಎಂದರು.

ಸಾಲಮನ್ನಾ; ಗೊಂದಲ ಬೇಡ
ಸಾಲ ಮನ್ನಾ ವಿಚಾರವಾಗಿ ಒಂದಷ್ಟು ಗೊಂದಲಗಳು ಏರ್ಪಟ್ಟಿದೆ. ಖಾತೆಗೆ ಹಣ ಜಮಾವಣೆ ವಿಚಾರವಾಗಿ ಇರುವ ಗೊಂದಲದಿಂದ ಸಮಸ್ಯೆಯಾಗಿದೆ. ಅದು ಶೀಘ್ರ ಬಗೆಹರಿಯಲಿದೆ. ಗೊಂದಲ ಬೇಡ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಧಿಕಾರಿಗಳು ಮೀನುಗಾರ ಮಹಿಳೆಯರಿಗೆ ಸಾಲ ಮನ್ನಾ ವಿಚಾರದಲ್ಲಿ ಸತಾಯಿಸುತ್ತಿರುವುದು ಕಂಡು ಬರುತ್ತಿದೆ. ರಾಜ್ಯ ಮಟ್ಟದಲ್ಲಿ ಎಲ್ಲ ಬ್ಯಾಂಕ್‌ ಅಧಿಕಾರಿಗಳ ಸಭೆ ಶೀಘ್ರ ಕರೆದು ಸಮಸ್ಯೆ ನಿವಾರಿಸಲಾಗುವುದು ಎಂದರು.

4 ಸಾವಿರ ಮಂದಿಗೆ ಕ್ರೆಡಿಟ್‌ ಕಾರ್ಡ್‌ ವಿತರಣೆ
ಯಾಂತ್ರೀಕೃತ, ಕಿರುದೋಣಿಗಾರಿಕೆ ನಡೆಸುವ ಮೀನುಗಾರರಿಗೆ ಕೇಂದ್ರ ಸರಕಾರ ಕ್ರೆಡಿಟ್‌ ಕಾರ್ಡ್‌ ವಿತರಿಸುತ್ತಿದೆ. ಗರಿಷ್ಠ 3 ಲ.ರೂ. ಹಾಗೂ ಕನಿಷ್ಠ 2 ಲ.ರೂ. ವ್ಯವಹಾರ ನಡೆಸಲು ಅನುಕೂಲವಾಗಿದೆ. ರಾಜ್ಯದಲ್ಲಿ 28 ಸಾವಿರ ಮಂದಿ ಹಾಗೂ ಜಿಲ್ಲೆಯಲ್ಲಿ 4 ಸಾವಿರ ಮಂದಿ ಮೀನುಗಾರರಿಗೆ ಕಾರ್ಡ್‌ ವಿತರಿಸಲಾಗಿದೆ ಎಂದರು.

ಶಾಸಕ ರಘುಪತಿ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ತಾ.ಪಂ. ಉಪಾಧ್ಯಕ್ಷ ಭುಜಂಗ ಶೆಟ್ಟಿ, ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾಕುಂದರ್‌, ತಾ.ಪಂ. ಸಿಇಒ ಮೋಹನ್‌ರಾಜ್‌, ತಾ.ಪಂ. ಸದಸ್ಯರಾದ ಸುಲೋಚನಾ, ವಸಂತಿ, ಕುಸುಮಾ ಪೂಜಾರಿ ಉಪಸ್ಥಿತರಿದ್ದರು. ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಣೇಶ್‌ ಕೆ.ಪ್ರಸ್ತಾವನೆಗೈದರು. ಹಿರಿಯ ಸಹಾಯಕ ನಿರ್ದೇಶಕ ಪಿ. ಪಾರ್ಶ್ವನಾಥ್‌ ಸ್ವಾಗತಿಸಿ, ಸಹಾಯಕ ನಿರ್ದೇಶಕ ಕಿರಣ್‌ ಬಿ.ಡಿ. ನಿರೂಪಿಸಿದರು. ಸರಕಾರದಿಂದ ಮೀನುಗಾ ರರಿಗೆ ದೊರಕುವ ವಿವಿಧ ಯೋಜನೆಗಳ ಧನಸಹಾಯ ಮಂಜೂ ರಾತಿ ಪತ್ರ ಸವಲತ್ತುಗಳನ್ನು ಫ‌ಲಾನುಭವಿಗಳಿಗೆ ವಿತರಿಸಲಾಯಿತು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.