ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ನಂಟು


Team Udayavani, Feb 23, 2020, 3:07 AM IST

hindu

ಬೆಂಗಳೂರು: ಹಿಂದೂ ಆಧ್ಯಾತ್ಮಿಕತೆಗೂ ಸೂಫಿ ಚಿಂತನೆಗೂ ಹತ್ತಿರದ ನಂಟಿದೆ ಎಂದು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅಂಕಿತ ಪ್ರಕಾಶನ ಶನಿವಾರ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೂ ಆಧ್ಯಾತ್ಮಿಕ ಚಿಂತನೆಗಳು ಮತ್ತು ಸೂಫಿ ಸಂತರ ಚಿಂತನೆಗಳು ಸಂವಾದಿಯಾಗಿವೆ. ಪೂರ್ವಾಗ್ರಹ ಪೀಡಿತರಾಗದೆ ಅಧ್ಯಯನದಲ್ಲಿ ತೊಡಗಿದರೆ, ಎಲ್ಲ ಧರ್ಮಗಳು ಪರಸ್ಪರ ಸಂವಾದ ನಡೆಸಿರುವುದನ್ನು ನಾವು ಕಾಣಬಹುದಾಗಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಫ‌ಕೀರ್‌ ಮುಹಮ್ಮದ್‌ ಕಟಾಡಿ ಮಾತನಾಡಿ, ಗ್ರಂಥಗಳನ್ನು ಓದುವುದರಿಂದ ಸೂಫಿ ಸಂತರಿಗೆ ಜ್ಞಾನ ಬಂದಿಲ್ಲ. ಅವರು ಸದಾ ಪ್ರಯಾಣದಲ್ಲಿದ್ದು, ಜನರ ಸಂಪರ್ಕದಲ್ಲಿ ನಡೆಸಿದ ಮಾತುಕತೆಯ ಅನುಭವದ ಜ್ಞಾನ ಪಡೆದಿದ್ದರು ಎಂದು ಹೇಳಿದರು.

ಸೂಫಿ ಸಂತರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಚರಿಸುತ್ತಿದ್ದರು. ಹೀಗಾಗಿ ಸೂಫಿ ಚಿಂತನೆಯು ಖುರಾನ್‌, ಬೈಬಲ್‌, ವೇದಗಳನ್ನು ಒಳಗೊಂಡಂತೆ ಆಯಾ ಪ್ರದೇಶಗಳ ಆಧ್ಯಾತ್ಮಿಕತೆಯನ್ನು ತನ್ನದಾಗಿಸಿಕೊಂಡು ವಿಶಿಷ್ಟವಾದ ರೀತಿಯಲ್ಲಿ ಹಾಗೂ ಸರಳವಾಗಿ ಆಧ್ಯಾತ್ಮಿಕ ಚಿಂತನೆಯನ್ನು ಪ್ರಸಾರ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

ಲೇಖಕಿ ವಿನಯಾ ಒಕ್ಕುಂದ ಮಾತನಾಡಿ, ಕವಯತ್ರಿ ಪ್ರತಿಭಾ ನಂದಕುಮಾರ್‌ ನಾಲ್ಕು ದಶಕಗಳಲ್ಲಿ ಬರೆದಿರುವ ಕಾವ್ಯವು, ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ವಿಷಯಗಳನ್ನು ಕಾವ್ಯ ರೂಪಕ್ಕೆ ಇಳಿಸಿದ್ದಾರೆ. ವರ್ತಮಾನದ ತಲ್ಲಣಗಳನ್ನು ಕಾವ್ಯದ ಮೂಲಕ ಓದುಗರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿ ದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಫ‌ಕೀರ್‌ ಮುಹಮ್ಮದ್‌ ಕಟ್ಟಾಡಿ ಅವರು ರಚಿಸಿದ “ಸೂಫಿ ಅಧ್ಯಾತ್ಮ ಚಿಂತನೆಗಳು’, ಚ.ಹ. ರಘುನಾಥ ಅವರ “ಜಾಮೂನು ಪದ್ಯಗಳು’ ಮಕ್ಕಳ ಕವನ, ಪ್ರತಿಭಾ ನಂದಕುಮಾರ್‌ ಅವರ “ಕೌಬಾಯ್ಸ ಮತ್ತು ಕಾಮ ಪುರಾಣ’ “ಪ್ರತಿಭಾ ಕಾವ್ಯ’ ಕವಿತೆಗಳು ಹಾಗೂ “ಕಾಗದದ ಸಾಕ್ಷಿ’ ವಿಡಿಯೋ ಆಲ್ಬಂ ಅನ್ನು ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಬಿಡುಗಡೆಗೊಳಿಸಿದರು. ಪತ್ರಕರ್ತ ಎನ್‌.ಎ.ಎಂ.ಇಸ್ಮಾಯಿಲ್‌, ಪ್ರತಿಭಾ ನಂದಕುಮಾರ್‌, ಸೇರಿದಂತೆ ಹಲವರು ಉಪಸ್ಥಿತಿದ್ದರು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.