ಐಎಎಫ್ ವಿಮಾನಕ್ಕೆ ಸಿಗದ ಅನುಮತಿ
ಚೀನ ಕ್ಯಾತೆಗೆ ವುಹಾನ್ನಲ್ಲಿರುವ ಭಾರತೀಯರ ಆತಂಕ
Team Udayavani, Feb 23, 2020, 7:10 AM IST
ಹೊಸದಿಲ್ಲಿ: ಕೊರೊನಾ ವೈರಸ್ ಸೋಂಕು ಪೀಡಿತ ವುಹಾನ್ನಲ್ಲಿರುವ 100ಕ್ಕೂ ಹೆಚ್ಚು ಭಾರತೀಯರನ್ನು ವಾಪಸ್ ಕರೆತರುವ ಭಾರತದ ಪ್ರಯತ್ನಕ್ಕೆ ಚೀನದ ವಿಳಂಬ ಧೋರಣೆ ಅಡ್ಡಿಯಾಗಿದೆ.
ಭಾರತೀಯ ವಾಯುಸೇನೆಯ ವಿಶೇಷ ವಿಮಾನ ಚೀನಕ್ಕೆ ಹಾರಲು ಸಿದ್ಧವಾಗಿ ನಿಂತಿದೆ. ಅದರಲ್ಲಿ ಚೀನಕ್ಕೆ ಸಹಾಯವಾಗಿ ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು ಈ ವಿಮಾನದಲ್ಲಿ ಇರಿಸಲಾಗಿದೆ. ಆದರೆ ಸಮಸ್ಯೆಯಾಗಿರುವುದು ಚೀನವು ಅನುಮತಿ ನೀಡಲು ಎತ್ತಿರುವ ಕ್ಯಾತೆ.
ಈಗಾಗಲೇ ಫೆಬ್ರವರಿ ಆರಂಭದಲ್ಲಿ ಎರಡು ಏರ್ ಇಂಡಿಯಾ ವಿಶೇಷ ವಿಮಾನಗಳು ಅಲ್ಲಿಗೆ ತೆರಳಿ 647 ಭಾರತೀಯರನ್ನು ಸ್ವದೇಶಕ್ಕೆ ಕರೆತಂದಿದ್ದವು. ಅಲ್ಲಿ ಇನ್ನೂ 100 ಭಾರತೀಯರಿದ್ದಾರೆ. ಅವರನ್ನು ವಾಪಸ್ ಕರೆತರುವ ಸಲುವಾಗಿ ವಾಯುಪಡೆಯ ಅತಿದೊಡ್ಡ ವಿಮಾನ ಸಿ-17 ಹೊರಟಿದೆ.
ಚೀನ ಹೇಳುವುದೇನು?
ಚೀನೀ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುವಾಂಗ್ ಅವರು ವಿಮಾನಕ್ಕೆ ಅನುಮತಿ ನೀಡದೆ ಇರುವುದು ಉದ್ದೇಶಪೂರ್ವಕ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ಹ್ಯುಬೆ ಪ್ರಾಂತ್ಯದಲ್ಲಿ ಪ್ರಸ್ತುತ ಸ್ಥಿತಿ ಗಂಭೀರವಾಗಿದೆ. ಕೋವಿಡ್-19 ವೈರಸ್ನ ನಿಯಂತ್ರಣವು ಅತ್ಯಂತ ನಿರ್ಣಾಯಕ ಹಂತದಲ್ಲಿದೆ. ಹೀಗಿರುವಾಗ ನಾವು ಬೇಕೆಂದೇ ಅನುಮತಿ ವಿಳಂಬ ಮಾಡುತ್ತಿದ್ದೇವೆ ಎಂದು ಆರೋಪಿಸುವುದು ಸರಿಯಲ್ಲ ಎಂದಿದ್ದಾರೆ.
ಅನಗತ್ಯ ಪ್ರಯಾಣ ಬೇಡ
ಕೊರೊನಾ ವೈರಸ್ ಸೋಂಕಿನ ಭೀತಿಯಿಂದಾಗಿ ಕೇಂದ್ರ ಸರಕಾರವು ದೇಶದ ನಾಗರಿಕರಿಗೆ ಹೊಸ ಪ್ರಯಾಣ ಸಲಹೆಯನ್ನು ಹೊರಡಿಸಿದ್ದು, ಸಿಂಗಾಪುರಕ್ಕೆ ಅನಗತ್ಯವಾಗಿ ಭೇಟಿ ನೀಡದಂತೆ ಸೂಚಿಸಿದೆ. ಶನಿವಾರ ಕೇಂದ್ರ ಸಂಪುಟ ಕಾರ್ಯದರ್ಶಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೊನಾ ವೈರಸ್ ಹಾವಳಿಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ಅಲ್ಲದೆ ಇನ್ನು ಮುಂದೆ ನೇಪಾಲ, ಇಂಡೋನೇಷ್ಯಾ, ವಿಯೆಟ್ನಾಂ ಮತ್ತು ಮಲೇಷ್ಯಾಗಳಿಂದ ಆಗಮಿಸುವ ವಿಮಾನಗಳ ಪ್ರಯಾಣಿಕರನ್ನೂ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೊಳಪಡಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸ್ತುತ ಕೇವಲ ಚೀನ, ಹಾಂಕಾಂಗ್, ಥಾçಲಂಡ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಜಪಾನ್ಗಳಿಂದ ಆಗಮಿಸುವ ಪ್ರಯಾಣಿಕರನ್ನು ಮಾತ್ರವೇ ತಪಾಸಣೆಗೆ ಒಳಪಡಿಸಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ