ಗರ್ಭಿಣಿಯಾದ ಸಮಯದಲ್ಲಿ ಮಹಿಳೆ ಹೇಗೆ ಬಟ್ಟೆ ಧರಿಸಬೇಕು: ಹೊಸ ಕೋರ್ಸ್ ಆರಂಭಿಸಿದ ಲಕ್ನೋ ವಿವಿ

"ಗರ್ಭ ಸಂಸ್ಕಾರ" ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿ

Team Udayavani, Feb 23, 2020, 9:07 AM IST

luckno

ಉತ್ತರಪ್ರದೇಶ: ಲಕ್ನೋ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ  “ಗರ್ಭ ಸಂಸ್ಕಾರ” ಕುರಿತು ಪ್ರಮಾಣಪತ್ರ ಮತ್ತು ಡಿಪ್ಲೊಮಾ ತರಗತಿಯನ್ನು ಪ್ರಾರಂಭಿಸಿದ್ದು ಈ  ಕೋರ್ಸ್ ಆರಂಭಿಸಿದ ದೇಶದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ  ಕೋರ್ಸ್ ಅಡಿಯಲ್ಲಿ ವಿದ್ಯಾರ್ಥಿಗಳು, ಗರ್ಭಿಣಿ ಮಹಿಳೆ ಯಾವ ರೀತಿಯ ಬಟ್ಟೆ ಧರಿಸಬೇಕು ಮತ್ತು ಆಹಾರ ತಿನ್ನಬೇಕು, ಆಕೆ ಹೇಗೆ ವರ್ತಿಸಬೇಕು ಮತ್ತು ತನ್ನನ್ನು ತಾನು ಹೇಗೆ ಸದೃಢವಾಗಿರಿಸಿಕೊಳ್ಳಬೇಕು ಹಾಗೂ ಗರ್ಭಿಣಿಯಾದ ಸಮಯದಲ್ಲಿ ಯಾವ ರೀತಿಯ ಸಂಗೀತವನ್ನು ಕೇಳಬಹುದು ಸೇರಿದಂತೆ ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ಕಲಿಸಲಾಗುತ್ತದೆ.

ಕೋರ್ಸ್ ಉದ್ಯೋಗವನ್ನು ಸೃಷ್ಟಿಸುವ ಮಾಧ್ಯಮವೆಂದೇ ಅಂದಾಜಿಸಲಾಗಿದೆ. ವಿಶ್ವವಿದ್ಯಾಲಯ ತನ್ನ ವರದಿಯಲ್ಲಿ ತಿಳಿಸಿರುವಂತೆಯೇ ಪುರುಷರು ಕೂಡ ಈ ಕೋರ್ಸ್ ಆನ್ನು ಆಯ್ದುಕೊಳ್ಳಬಹುದು.

ರಾಜ್ಯ ವಿಶ್ವವಿದ್ಯಾಲಯದ ಕುಲಪತಿಯೂ ಆದ ಉತ್ತರಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ವಿದ್ಯಾರ್ಥಿಗಳಿಗೆ ಮಾತೃತ್ವದ ಕುರಿತು ತರಭೇತಿ ನೀಡುವಂತೆ ಪ್ರಸ್ತಾಪಿಸಿದ್ದರು ಎಂದು ಲಕ್ನೋ ವಿಶ್ವವಿದ್ಯಾಲಯದ ವಕ್ತಾರ ದುರ್ಗೇಶ್ ಶ್ರೀವಾತ್ಸವ  ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಆನಂದಿಬೆನ್ ಪಟೇಲ್ ಕಳೆದ ವಾರ್ಷಿಕ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ, ತಾಯಿಯ ಗರ್ಭದಲ್ಲಿರುವಾಗಲೇ ಅಭಿಮನ್ಯು ಯುದ್ಧ ಕೌಶಲ್ಯಗಳಲ್ಲಿ ಪರಿಣಿತನಾದ. ಮಾತ್ರವಲ್ಲದೆ ಜರ್ಮನಿಯಲ್ಲೂ ಗರ್ಭ ಸಂಸ್ಕಾರದ ಕುರಿತು ಕೋರ್ಸ್ ಇರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಕೋರ್ಸ್ ಗಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು,  ಇದರಲ್ಲಿ ವಿದ್ಯಾರ್ಥಿಗಳು 16 ಮೌಲ್ಯಗಳ ಬಗ್ಗೆ ಕಲಿಯುತ್ತಾರೆ. ಮುಖ್ಯವಾಗಿ ಕುಟುಂಬ ಯೋಜನೆ ಮತ್ತು ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಸುರಕ್ಷತೆಯ ಮೌಲ್ಯವನ್ನು ಒತ್ತಿ ಹೇಳುತ್ತದೆ. ಈ ಹೊಸ ಕೋರ್ಸ್ ಅಡಿಯಲ್ಲಿ ವಿವಿಧ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ

ಹೊಸ ಕೋರ್ಸ್ ಅನ್ನು ವಿದ್ಯಾರ್ಥಿಗಳು ಕೂಡ ಸ್ವಾಗತಿಸಿದ್ದು, ವಿದ್ಯಾರ್ಥಿಗಳಿಗೆ ಮಾತೃತ್ವದ ಬಗ್ಗೆ ತರಬೇತಿ ನೀಡಿದರೆ, ಅದು ಆರೋಗ್ಯಕರ ಮಗುವನ್ನು ಹೊಂದಲು ದಂಪತಿಗಳಿಗೆ ಸಹಾಯ ಮಾಡುತ್ತದೆ … ಇದರರ್ಥ ನಮ್ಮ ದೇಶಕ್ಕೆ ಆರೋಗ್ಯಕರ ಭವಿಷ್ಯವಿದೆ “ಎಂದು ವಿದ್ಯಾರ್ಥಿಯಾದ ಸಂಜೀವ್ ಅಭಿಪ್ರಾಯಪಟ್ಟಿದ್ದಾರೆ.

ನಮ್ಮದೇಶವು ಶ್ರೀಮಂತ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಹೊಂದಿದೆ. ಮಹಿಳೆಯ ಭಾವನೆಗಳು ಮತ್ತು ಆಲೋಚನೆಗಳು ತನ್ನ ಮಗುವಿನ ಮೇಲೆ ಪ್ರತಿಫಲಿಸುತ್ತವೆ. ಗರ್ಭಾವಸ್ಥೆಯಲ್ಲಿ ಮಹಿಳೆಯರ ಚಟುವಟಿಕೆಗಳು, ಆಹಾರ ಮತ್ತು ಮಾನಸಿಕ ಶಾಂತಿಯನ್ನು ನೋಡಿಕೊಳ್ಳುವ ಅವಶ್ಯಕತೆಯಿದೆ. ಈ ಕೋರ್ಸ್ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ “ಎಂದು ಹಿರಿಯ ಸ್ತ್ರೀ ರೋಗ ತಜ್ಞೆ ಡಾ. ಮಧು ಗುಪ್ತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.