ತರಕಾರಿಯಲ್ಲಿ ಭರಪೂರ ಲಾಭ ಕಂಡ ರೈತ

7 ಎಕರೆ ಭೂಮಿಯಲ್ಲಿ ಹನಿ ನೀರಾವರಿ ವ್ಯವಸ್ಥೆ ವರ್ಷಕ್ಕೆ 5ರಿಂದ 5.50 ಲಕ್ಷ ಆದಾಯ

Team Udayavani, Feb 23, 2020, 11:32 AM IST

23-February-08

ಬೀದರ: ತರಕಾರಿ ಬೆಳೆಯಿರಿ ಎಂದರೆ ಉಳುಮೆ ಮಾಡಬೇಕು, ನಾಟಿ ಮಾಡಬೇಕು, ಕಾಯಿ ಕಡಿಯಬೇಕು, ಮಾರುಕಟ್ಟೆಗೆ ಕಳಿಸಬೇಕು, ಬಾಗವಾನರಿಗೆ ಅಡ್ಡಾದಿಡ್ಡಿ ದರಕ್ಕೆ ತರಕಾರಿ ಕೊಟ್ಟು ಕೈ ಜಾಡಿಸಿಕೊಂಡು ಬರಬೇಕು. ಗಾಳಿಗಿ ಗುದ್ದಿ ಮೈ ನೋಯಿಸಿಕೊಂಡಂತೆ ಎಂದು ಹೇಳುವ ರೈತರೆ ಈಗಿನ ಕಾಲದಲ್ಲಿ ಹೆಚ್ಚು. ಆದರೆ, ಇವುಗಳನ್ನೆಲ್ಲ ನಿಭಾಯಿಸಿಯೂ ತರಹೇವಾರಿ ತರಕಾರಿ ಬೆಳೆದು ಇನ್ನೊಬ್ಬ ವೃದ್ಧ ರೈತ ಸೈ ಎನ್ನಿಸಿಕೊಂಡಿದ್ದಾರೆ.

ಹುಮನಾಬಾದ ತಾಲೂಕಿನ ಉಡಬಾಳ ಗ್ರಾಮದ ರೈತ ನಾರಾಯಣರಾವ್‌ ಭಂಗಿ ಐದು ವರ್ಷಗಳಿಂದ ಒಂದು ಎಕರೆಯಿಂದ ತರಕಾರಿ ಬೆಳೆಯಲು ಪ್ರಾರಂಭಿಸಿ ಇಂದು ಏಳು ಎಕರೆ ವರೆಗೆ ಬೆಳೆ ಬೆಳೆಯುತ್ತಿದ್ದಾರೆ. ತರಕಾರಿಗೆ ಹೇಳಿ ಮಾಡಿಸಿದಂಥ ಕಪ್ಪು ಮಣ್ಣಿನ ಜಮೀನು ಇದ್ದು, ಬಾವಿ ಮೂಲಕ ನೀರಾವರಿ ಮಾಡುತ್ತಿದ್ದಾರೆ.

ತರಕಾರಿ ಬೆಳೆಯುವ ಮೊದಲು ಕಬ್ಬು, ಜೋಳ, ಕಡಲೆಯಂಥ ಕೃಷಿ ಬೆಳೆಗಳನ್ನೇ ಬೆಳೆಯುತ್ತಿದ್ದೆ. ಖರ್ಚು ಲಾಭ ಅಷ್ಟಕ್ಕಷ್ಟೇ ಆಗುತ್ತಿತ್ತು. ಹೀಗಾದರೆ ಕುಟುಂಬ ನಿಭಾಯಿಸುವುದು, ಮಕ್ಕಳ ವಿದ್ಯಾಭ್ಯಾಸ, ಮಕ್ಕಳಿಗೆ ನೌಕರಿ ಕೊಡಿಸಲು ಆಗುವುದಿಲ್ಲ. ಇನ್ನೂ ಹೆಚ್ಚಿನ ಹಣ ಸಂಪಾದನೆ ಮಾಡಬೇಕೆಂಬ ಛಲದಿಂದ ಊರೂರು ಸುತ್ತಿ ತರ ತರಹದ ಬೆಳೆಗಳನ್ನು ಬೆಳೆದ ರೈತರ ತೋಟಗಳಿಗೆ ಹೋಗಿ ನೋಡಿ ಚರ್ಚಿಸಿ, ಲೆಕ್ಕ ಹಾಕಿ ನೋಡಿದಾಗ ತರಕಾರಿ ಬೆಳೆಯುವುದೇ ಸೂಕ್ತ ಎಂದು ನಿರ್ಧರಿಸಿದೆ ಎನ್ನುತ್ತಾರೆ ಭಂಗಿ.

ಚಿಟಗುಪ್ಪಾ, ಮನ್ನಾಏಖೆಳ್ಳಿ, ಕಲಬುರಗಿ, ಹೈದ್ರಾಬಾದ್‌ಗೆ ತರಕಾರಿ ಕಳಿಸಿ ಮಾರಾಟ ಮಾಡಲಾಗುತ್ತಿದೆ. ತೋಟಗಾರಿಕೆ ಇಲಾಖೆಯಿಂದ
7 ಎಕರೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಹನಿ ನೀರಾವರಿಗೆ ಮತ್ತು ಮಲ್ಚಿಂಗ್‌ ಗೆ ಸಹಾಯಧನ ಪಡೆದಿದ್ದೇನೆ. ಬೆಳೆಗೆ ಮಲ್ಚಿಂ ಗ್‌, ಡ್ರಿಪ್‌ ಮಾಡಿಸಿದ್ದರಿಂದ ಖರ್ಚು ಕಡಿಮೆಯಾಗಿ ಬಹು ಬೆಳೆ ಪದ್ಧತಿಯಿಂದ ಉತ್ಪನ್ನ ಜಾಸ್ತಿಯಾಗುತ್ತಿದೆ ಎನ್ನುತ್ತಾರೆ ಅವರು. ಹೆಚ್ಚಿನ ಮಾಹಿತಿಗೆ ನಾರಾಯಣರಾವ್‌ ಭಂಗಿ ಮೊ: 9448584932ಗೆ ಸಂಪರ್ಕಿಸಬಹುದು.

5 ವರ್ಷದಿಂದ ಕಲ್ಲಂಗಡಿ, ಗೋಬಿ, ಟೊಮ್ಯಾಟೊ, ಬದನೆ, ಹೀರೆಕಾಯಿ, ಹಾಗಲ ತರಕಾರಿ ಬೆಳೆಯುತ್ತಿದ್ದೇನೆ. ಇದರಲ್ಲೇ ನನಗೆ ಲಾಭ ಎನಿಸಿದೆ. ದಿನಕ್ಕೆ 1500ರಿಂದ 2000 ರೂ. ವರ್ಷಕ್ಕೆ 5 ರಿಂದ 5.50 ಲಕ್ಷಗಳ ವರೆಗೆ ಆದಾಯ ಬರುತ್ತಿದೆ. ಖರ್ಚು ವರ್ಷಕ್ಕೆ 2-3 ಲಕ್ಷ ರೂಪಾಯಿ ಬರುತ್ತಿದೆ. ನೌಕರದಾರರಿಗೆ ವೇತನ ಬಂದಂತೆ ನನಗೂ ಕೃಷಿಯಿಂದ ವೇತನ ಬರುತ್ತಿದೆ. ಇದಕ್ಕೆಲ್ಲ ಅಧಿಕಾರಿಗಳು ಮತ್ತು ಪ್ರಗತಿಪರ ರೈತರರೇ ನನಗೆ ಪ್ರೇರಣೆ. “ಆಕಳು, ಎಮ್ಮೆಗಳಿಂದ ಹೊಲಕ್ಕೆ ಗೊಬ್ಬರ, ಮನೆಗೆ ಹಾಲು ಆಗುತ್ತದೆ.
ನಾರಾಯಣರಾವ್‌ ಭಂಗಿ, ರೈತ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.