ಅವಧಿಗೂ ಮುನ್ನವೇ ತೆನೆ ಬಿಚ್ಚಿದ ಭತ್ತ


Team Udayavani, Feb 23, 2020, 2:11 PM IST

kopala-tdy-1

ಸಾಂದರ್ಭಿಕ ಚಿತ್ರ

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಒಂದಿಲ್ಲೊಂದು ಸಂಕಷ್ಟ ಎದುರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ನಾಲ್ಕೈದು ವರ್ಷಗಳಿಂದ ಮಳೆ ಕೊರತೆ, ನೀರಿನ ಅವೈಜ್ಞಾನಿಕ ಬಳಕೆಯಿಂದ ಒಂದೇ ಬೆಳೆ ಪಡೆದ ರೈತರು, ಈ ಬಾರಿ ಬೇಸಿಗೆ ಭತ್ತದ ಬೆಳೆ ನಾಟಿ ಮಾಡಿದ 25 ದಿನಗಳಲ್ಲಿ ತೆನೆ ಬಿಚ್ಚುವ ಮೂಲಕ ರೈತರಲ್ಲಿ ಆತಂಕ ಸೃಷ್ಟಿಸಿದೆ.

ಮುಂಗಾರು ಸುಗ್ಗಿ ಬೆಳೆಗೆ ಸೂಕ್ತ ಬೆಲೆ ಸಿಗದೇ ಬಹುತೇಕ ರೈತರು ಇನ್ನೂ ಭತ್ತವನ್ನು ಮಾರಾಟ ಮಾಡದೇ ಸಂಗ್ರಹ ಮಾಡಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು 90-120 ದಿನಗಳಲ್ಲಿ ಕಟಾವಿಗೆ ಬರುವ ಭತ್ತವನ್ನು ನಾಟಿ ಮಾಡುತ್ತಾರೆ. ನಾಟಿ ಮಾಡಿದ 25 ದಿನಗಳು ಪೂರ್ಣಗೊಳ್ಳುವ ಮುನ್ನವೇ ಬಹುತೇಕ ಭತ್ತದ ಬೆಳೆ ತೆನೆ ಬಿಚ್ಚುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ. ಬೇಸಿಗೆ ಹಂಗಾಮಿನ ಭತ್ತದ ಬೆಳೆ ನವೆಂಬರ್‌, ಡಿಸೆಂಬರ್‌ನಲ್ಲಿ ನಾಟಿ ಮಾಡಿ ಮಾರ್ಚ್‌ ಮತ್ತು ಏಪ್ರಿಲ್‌ ಮೊದಲ ವಾರದಲ್ಲಿ ಕಟಾವು ಮಾಡಲಾಗುತ್ತದೆ. ಈ ಭಾರಿ ಬೇಸಿಗೆ ಭತ್ತದ ನಾಟಿ ಜನವರಿ ಮಧ್ಯೆ ಭಾಗದವರೆಗೂ ನಾಟಿ ಕಾರ್ಯ ನಡೆದಿದೆ.

ಇದೀಗ ಭತ್ತದ ಬೆಳೆ 20-25 ದಿನಗಳಾಗಿವೆ. ಕಲ್ಗುಡಿ, ಮರಳಿ, ಶ್ರೀರಾಮನಗರ, ಢಣಾಪೂರ, ಮುಸ್ಟೂರು, ಅಯೋಧ್ಯಾ, ಹೊಸಳ್ಳಿ, ಜಂತಗಲ್‌, ಕುಂಟೋಜಿ, ಬರಗೂರು, ಸಿದ್ದಾಪೂರ, ಶಾಲಿಗನೂರು, ಉಳೇನೂರು, ಬೆನ್ನೂರು, ಜಮಾಪೂರ, ಗುಂಡೂರು, ಸಿಂಗನಾಳ ಭಾಗದಲ್ಲಿ 25 ದಿನದ ಭತ್ತದ ಬೆಳೆ ತೆನೆ ಬಿಚ್ಚಿದ್ದು, ಕಾಳುಕಟ್ಟುವ ಸಂದರ್ಭದಲ್ಲಿ ಚಳಿ ವಾತಾವರಣದಿಂದ ಕಾಳು ಜೊಳ್ಳಾಗುವ ಸಂದರ್ಭವಿದೆ. ಅವಧಿಗೂ ಮುನ್ನ ತೆನೆ ಬಿಚ್ಚುವ ಕುರಿತು ಕೃಷಿ ವಿಜ್ಞಾನಿಗಳು ಸಂಶೋಧನೆ ಮಾಡುವ ಅವಶ್ಯವಿದೆ. ತಾಲೂಕಿನ ಬಹುತೇಕ ಕಡೆ ಭತ್ತದ ಬೀಜ ತಯಾರಿಕಾ ಘಟಕಗಳು ತಲೆ ಎತ್ತಿದ್ದು, ಈ ಕುರಿತು ರೈತರು ದೂರು ನೀಡಿದರೂ ಕೃಷಿ ಇಲಾಖೆ ಅಧಿ ಕಾರಿಗಳು ಒತ್ತಡಕ್ಕೆ ಮಣಿದು ಬೀಜ ಮಾರಾಟ ಮಾಡಿದ ವ್ಯಕ್ತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಸರಕಾರ ಕೂಡಲೇ ನಕಲಿ ಭತ್ತದ ಬೀಜ ತಯಾರಿಸುವ ಘಟಕಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನಾ ಕೇಂದ್ರ ಬೇಗನೆ ತೆನೆ ಬಿಚ್ಚಿದ ಭತ್ತದ ಕುರಿತು ಸೂಕ್ತ ಸಂಶೋಧನೆ ಮಾಡಿ ರೈತರನ್ನು ರಕ್ಷಣೆ ಮಾಡಬೇಕಿದೆ.

 

ಕೆ. ನಿಂಗಜ್ಜ

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.