ಅವಧಿಗೂ ಮುನ್ನ ತೆನೆ ಬಿಚ್ಚಿದ ಭತ್ತ

ರೈತರಿಗೆ ಗಾಯದ ಮೇಲೆ ಬರೆರೈತರ ನೆರವಿಗೆ ಧಾವಿಸಬೇಕಿದೆ ಸರಕಾರ

Team Udayavani, Feb 23, 2020, 4:45 PM IST

23-February-28

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಒಂದಿಲ್ಲೊಂದು ಸಂಕಷ್ಟ ಎದುರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ನಾಲ್ಕೈದು ವರ್ಷಗಳಿಂದ ಮಳೆ ಕೊರತೆ, ನೀರಿನ ಅವೈಜ್ಞಾನಿಕ ಬಳಕೆಯಿಂದ ಒಂದೇ ಬೆಳೆ ಪಡೆದ ರೈತರು, ಈ ಬಾರಿ ಬೇಸಿಗೆ ಭತ್ತದ ಬೆಳೆ ನಾಟಿ ಮಾಡಿದ 25 ದಿನಗಳಲ್ಲಿ ತೆನೆ ಬಿಚ್ಚುವ ಮೂಲಕ ರೈತರಲ್ಲಿ ಆತಂಕ ಸೃಷ್ಟಿಸಿದೆ.

ಮುಂಗಾರು ಸುಗ್ಗಿ ಬೆಳೆಗೆ ಸೂಕ್ತ ಬೆಲೆ ಸಿಗದೇ ಬಹುತೇಕ ರೈತರು ಇನ್ನೂ ಭತ್ತವನ್ನು ಮಾರಾಟ ಮಾಡದೇ ಸಂಗ್ರಹ ಮಾಡಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು 90-120 ದಿನಗಳಲ್ಲಿ ಕಟಾವಿಗೆ ಬರುವ ಭತ್ತವನ್ನು ನಾಟಿ ಮಾಡುತ್ತಾರೆ. ನಾಟಿ ಮಾಡಿದ 25 ದಿನಗಳು ಪೂರ್ಣಗೊಳ್ಳುವ ಮುನ್ನವೇ ಬಹುತೇಕ ಭತ್ತದ ಬೆಳೆ ತೆನೆ ಬಿಚ್ಚುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ.

ಬೇಸಿಗೆ ಹಂಗಾಮಿನ ಭತ್ತದ ಬೆಳೆ ನವೆಂಬರ್‌, ಡಿಸೆಂಬರ್‌ನಲ್ಲಿ ನಾಟಿ ಮಾಡಿ ಮಾರ್ಚ್‌ ಮತ್ತು ಏಪ್ರಿಲ್‌ ಮೊದಲ ವಾರದಲ್ಲಿ ಕಟಾವು ಮಾಡಲಾಗುತ್ತದೆ. ಈ ಭಾರಿ ಬೇಸಿಗೆ ಭತ್ತದ ನಾಟಿ ಜನವರಿ ಮಧ್ಯೆ ಭಾಗದವರೆಗೂ ನಾಟಿ ಕಾರ್ಯ ನಡೆದಿದೆ. ಇದೀಗ ಭತ್ತದ ಬೆಳೆ 20-25 ದಿನಗಳಾಗಿವೆ. ಕಲ್ಗುಡಿ, ಮರಳಿ, ಶ್ರೀರಾಮನಗರ, ಢಣಾಪೂರ, ಮುಸ್ಟೂರು, ಅಯೋಧ್ಯಾ, ಹೊಸಳ್ಳಿ, ಜಂತಗಲ್‌, ಕುಂಟೋಜಿ, ಬರಗೂರು, ಸಿದ್ದಾಪೂರ, ಶಾಲಿಗನೂರು, ಉಳೇನೂರು, ಬೆನ್ನೂರು, ಜಮಾಪೂರ, ಗುಂಡೂರು, ಸಿಂಗನಾಳ ಭಾಗದಲ್ಲಿ 25 ದಿನದ ಭತ್ತದ ಬೆಳೆ ತೆನೆ ಬಿಚ್ಚಿದ್ದು, ಕಾಳುಕಟ್ಟುವ ಸಂದರ್ಭದಲ್ಲಿ ಚಳಿ ವಾತಾವರಣದಿಂದ ಕಾಳು ಜೊಳ್ಳಾಗುವ ಸಂದರ್ಭವಿದೆ.

ಅವಧಿಗೂ ಮುನ್ನ ತೆನೆ ಬಿಚ್ಚುವ ಕುರಿತು ಕೃಷಿ ವಿಜ್ಞಾನಿಗಳು ಸಂಶೋಧನೆ ಮಾಡುವ ಅವಶ್ಯವಿದೆ. ತಾಲೂಕಿನ ಬಹುತೇಕ ಕಡೆ ಭತ್ತದ ಬೀಜ ತಯಾರಿಕಾ ಘಟಕಗಳು ತಲೆ ಎತ್ತಿದ್ದು, ಈ ಕುರಿತು ರೈತರು ದೂರು ನೀಡಿದರೂ ಕೃಷಿ ಇಲಾಖೆ ಅಧಿಕಾರಿಗಳು ಒತ್ತಡಕ್ಕೆ ಮಣಿದು ಬೀಜ ಮಾರಾಟ ಮಾಡಿದ ವ್ಯಕ್ತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಸರಕಾರ ಕೂಡಲೇ ನಕಲಿ ಭತ್ತದ ಬೀಜ ತಯಾರಿಸುವ ಘಟಕಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನಾ ಕೇಂದ್ರ ಬೇಗನೆ ತೆನೆ ಬಿಚ್ಚಿದ ಭತ್ತದ ಕುರಿತು ಸೂಕ್ತ ಸಂಶೋಧನೆ ಮಾಡಿ ರೈತರನ್ನು ರಕ್ಷಣೆ ಮಾಡಬೇಕಿದೆ.

ಬೇಸಿಗೆ ಭತ್ತದ ಬೆಳೆ ನಾಟಿ ಮಾಡಿದ 25 ದಿನಗಳಲ್ಲಿ ತೆನೆ ಬಿಚ್ಚಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಹವಾಮಾನ ವೈಪರಿತ್ಯ ಅಥವಾ ನಕಲಿ ಬೀಜ ಎಂಬ ಕಾರಣ ತಿಳಿಯದಾಗಿದೆ. ಕೂಡಲೇ ಕೃಷಿ ಇಲಾಖೆಯ ಕೃಷಿ ವಿವಿ ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಬೇಗನೆ ತೆನೆ ಬಿಚ್ಚಿದ ಕುರಿತು ಸಂಶೋಧನೆ ನಡೆಸಿ ಪರಿಹಾರ ಕಲ್ಪಿಸಬೇಕಾಗಿದೆ.
ವಿ. ಪ್ರಸಾದ,
ರೈತ ಕಲ್ಗುಡಿ ಗ್ರಾಮ

ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ರಾತ್ರಿ ಚಳಿ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಭತ್ತದ ಬೆಳೆ ಬೇಗ ತೆನೆ ಬಿಚ್ಚಿದೆ. ಹತ್ತು ವರ್ಷಗಳ ಹಿಂದೆ ಇಂತಹ ಪರಿಸ್ಥಿತಿಯುಂಟಾಗಿತ್ತು. ಈಗ ಪುನಃ ಇಂತಹ ಸ್ಥಿತಿಯುಂಟಾಗಿದೆ. ರಾತ್ರಿ-ಹಗಲಿನ ಅವ ಧಿಯಲ್ಲಿ 10-15 ನಿಮಿಷಗಳ ವ್ಯತ್ಯಾಸ ಹಾಗೂ ಫೆಬ್ರವರಿ ಮೊದಲ ವಾರ ಇಬ್ಬನ್ನಿ ಬಿದ್ದ ಪರಿಣಾಮ ಬೇಗನೆ ತೆನೆ ಬಿಚ್ಚಲು ಕಾರಣವಾಗಿದೆ. ರಾತ್ರಿ ವೇಳೆ 18 ಡಿಗ್ರಿ ಉಷ್ಣಾಂಶ ಹಗಲಿನಲ್ಲಿ 36 ಡಿಗ್ರಿ ಉಷ್ಣಾಂಶ ಇದ್ದ ಪರಿಣಾಮ ಬೇಗನೆ ತೆನೆ ಬಂದಿದೆ. ಭತ್ತದ ಇಳುವರಿ ಕಡಿಮೆ ಬರುವ ಸಾಧ್ಯತೆ ಇದೆ.
ಡಾ| ಮಹಾಂತ ಶಿವಯೋಗಿ,
ತಳಿ(ಭತ್ತ) ಕೃಷಿ ಸಂಶೋಧನಾ ಕೇಂದ್ರ

„ಕೆ. ನಿಂಗಜ್ಜ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.