ಭತ್ತದ ಸೆಲೆ; 20ಕ್ಕೂ ಹೆಚ್ಚು ದೇಶೀ ತಳಿ


Team Udayavani, Feb 24, 2020, 4:50 AM IST

20-bhattha-shivakumar-(1)-copy-copy

ಬೇಸಾಯ ಲಾಭದಾಯಕ ಅಲ್ಲ ಎನ್ನುವ ತೀರ್ಮಾನಕ್ಕೆ ಬಂದಿರುವ ರೈತರು ಪರ್ಯಾಯ ಉದ್ಯೋಗಗಳ ಹುಡುಕಾಟದಲ್ಲಿದ್ದಾರೆ. ಆದರೆ ಕೆಲವರು ಬೇಸಾಯದಲ್ಲೇ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಂಥವರಲ್ಲಿ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಕಾಮನಹಳ್ಳಿಯ ಯುವ ರೈತ ಮುತ್ತಣ್ಣ ಅವರೂ ಒಬ್ಬರು. ತಾಲೂಕು ಕೇಂದ್ರದಿಂದ 3 ಕಿ.ಮೀ ದೂರವನ್ನು ಮಂಥಗಿ ರಸ್ತೆಯಲ್ಲಿ ಕ್ರಮಿಸಿದರೆ, ರಸ್ತೆಯ ಎರಡು ಕಡೆಗಳಲ್ಲಿ ಸುಂದರ ತೋಟಗಳು ಗೋಚರಿಸುತ್ತವೆ. ಅಲ್ಲೇ “ಭೂಮಿ ಪುತ್ರ ಎಸ್ಟೇಟ್‌’ ಎಂಬ ನಾಮಫ‌ಲಕ ಕಣ್ಣಿಗೆ ಬೀಳುತ್ತದೆ.

ಪ್ರತಿ ವರ್ಷ ಯಾವುದಾದರೊಂದು ವಿಶೇಷ ಬೆಳೆಗಳನ್ನು ಬೆಳೆಯುವುದು ಮುತ್ತಣ್ಣರ ವೈಶಿಷ್ಟé. ಸುಮಾರು 20 ದೇಶಿ ತಳಿಯ ಭತ್ತವನ್ನು ಬೆಳೆದು ಕಟಾವಿನ ಖುಷಿಯಲ್ಲಿದ್ದಾರೆ. ಶಿವಮೊಗ್ಗದ ಸಾವಯವ ಕೃಷಿ ಸಂಶೋಧನಾ ಕೇಂದ್ರದಿಂದ ದೇಶಿ ತಳಿಯ ಭತ್ತದ ಬೀಜವನ್ನು ತಂದು ಪ್ರಾಯೋಗಿಕವಾಗಿ ತಮ್ಮ 20 ಗುಂಟೆ ಜಮೀನಿನಲ್ಲಿ ಶ್ರೀಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.

ಇಪ್ಪತ್ತು ತಳಿಗಳು
ಸಾಮಾನ್ಯವಾಗಿ ಭತ್ತದ ಪೈರು ಎಂದರೆ ಹಸಿರಿನಿಂದ ಕೂಡಿರುತ್ತದೆ. ಆದರೆ ಮುತ್ತಣ್ಣನ ಹೊಲದಲ್ಲಿ ಕಪ್ಪು ಭತ್ತದ ತಳಿ ನಳನಳಿಸುತ್ತಿದೆ. ಕಾಳಜೀರ, ಎಚ್‌ಎಂಟಿ, ಎಕ್ಸ್‌ಜ್ಯೋತಿ, ಸೇಲಂಸಣ್ಣ, ಮ್ಯಾಜಿಕ್‌ 100, ಜೆಜಿಕೆ- 2, ಸಹ್ಯಾದ್ರಿ ಮೇಘ, ಕೆಪಿಆರ್‌- 2ಎಕ್ಸ್‌, ಮೈಸೂರು ಮಲ್ಲಿಗೆ, ಸಿದ್ದಸಣ್ಣ, ರತ್ನಚೂಡಿ, ಚಿನ್ನಪೊನ್ನಿ, ವೆಲೈಪೊನ್ನಿ, ಡಾಂಬರ ಸಾಲೆ, ಮಂಜುಗುಣಿ ಸಣ್ಣಕ್ಕಿ, ನಜರ್‌ಬಾದ್‌, ಹೀಗೆ ಅನೇಕ ಭತ್ತದ ತಳಿಗಳು ಮುತ್ತಣ್ಣನ ಹೊಲದಲ್ಲಿವೆ.

ಹೈಬ್ರಿಡ್‌ ಭತ್ತದ ತಳಿಗೆ ಹೋಲಿಸಿದರೆ ದೇಶಿ ತಳಿಯ ಭತ್ತದ ಪೈರಿಗೆ ರೋಗ ಹಾಗೂ ಕೀಟಬಾಧೆ ಕಡಿಮೆ. ಅಷ್ಟೇ ಅಲ್ಲದೆ ನೀರಿನ ಪ್ರಮಾಣವೂ ಕಡಿಮೆ. ದೇಶಿ ಭತ್ತಕ್ಕೆ ಬೇಡಿಕೆ ಇದ್ದರೂ ಮಾರುಕಟ್ಟೆಯ ಕೊರತೆ ಇದೆ. ಇದರಿಂದ ದೇಶಿ ಭತ್ತವನ್ನು ಬೆಳೆಯುವ ರೈತರ ಸಂಖ್ಯೆ ಕಡಿಮೆ.

ಬ್ಲ್ಯಾಕ್‌ ಬ್ಯೂಟಿ ಭತ್ತ
ಕಪ್ಪು ಭತ್ತದ ತಳಿಗಳಿಂದ ಗದ್ದೆಯಲ್ಲಿ ಚಿತ್ರ ಬಿಡಿಸುವ ಕಲೆ ಜಪಾನ್‌ನಲ್ಲಿ ತುಂಬಾ ಪ್ರಸಿದ್ಧಿ. ಕಪ್ಪು ಭತ್ತದ ತಳಿಗಳು ಔಷಧೀಯ ಗುಣಗಳಿಂದ ಕೂಡಿವೆ. ಮುತ್ತಣ್ಣ ಅಡಕೆ ಸಸಿಗಳ ನರ್ಸರಿಯನ್ನೂ ನಡೆಸುತ್ತಿದ್ದಾರೆ. ಈಗ, ವರ್ಷಕ್ಕೆ ನರ್ಸರಿಯೊಂದರಿಂದಲೇ ಮುತ್ತಣ್ಣನಿಗೆ 1- 2 ಲಕ್ಷ ರೂ. ಆದಾಯ ಬರುತ್ತಿದೆ. ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ, ಮುಂಡಗೋಡು, ದಾವಣಗೆರೆಗಳಿಂದಲೂ ಮುತ್ತಣ್ಣನ ಅಡಕೆ ಸಸಿಗಳಿಗೆ ಬೇಡಿಕೆಯಿದೆ.

ಇವರ ತೋಟದಲ್ಲಿ ಗೆಣಸು, ಅಡಕೆ, ಬಾಳೆ, ಚಿಕ್ಕು, ಜೇನುಸಾಕಣಿಕೆ, ನಾಟಿಕೋಳಿ, ಮಾವು ಇನ್ನು ಅನೇಕ ತಳಿಯ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಎಲ್ಲವಕ್ಕೂ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಮುತ್ತಣ್ಣ, ಸರ್ಕಾರದಿಂದ ಕೃಷಿ ಪಂಡಿತ, ರಾಜ್ಯೋತ್ಸವ ಪ್ರಶಸ್ತಿಗಳಿಗೂ ಪಾತ್ರರಾಗಿದ್ದಾರೆ.

ಚಿತ್ರ-ಲೇಖನ: ಟಿ. ಶಿವಕುಮಾರ್‌

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.