ತಾಳಿ ಲೆಕ್ಕ ಕೇಳಿದರೆ ದೇವಸ್ಥಾನದ ಬಾಗಿಲೇ ಬಂದ್‌


Team Udayavani, Feb 24, 2020, 3:00 AM IST

taali-leka

ನಂಜನಗೂಡು: ಸಮೀಪದ ತಗಡೂರಿನ ಕುರುಬರ ಸಮುದಾಯದಲ್ಲೊಂದು ವಿಚಿತ್ರ ಸಂಪ್ರದಾಯವಿದ್ದು, ಹೊಸದಾಗಿ ಮದುವೆಯಾದ ಹೆಣ್ಣುಮಗಳು ಪತಿ ಕಟ್ಟಿದ ತಾಳಿಯನ್ನು ವರ್ಷದೊಳಗಾಗಿ ದೇವಸ್ಥಾನದ ಹುಂಡಿಗೆ ಹಾಕಬೇಕು. ಹೀಗೆ ಇಲ್ಲಿವರೆಗೂ ಸಹಸ್ರಾರು ಹೆಣ್ಣು ಮಕ್ಕಳು ತಮ್ಮ ಪತಿ ಕಟ್ಟಿದ ತಾಳಿಯನ್ನು ಹೀಗೆ ಹುಂಡಿಯೊಳಗೆ ಹಾಕಿದ್ದಾರೆ.

ಆದರೆ ಈ ವರೆಗೂ ತಾಳಿಗಳ ಲೆಕ್ಕ ಕೇಳದ ಕುರುಬ ಸಮುದಾಯದವರು ಎಚ್ಚೆತ್ತುಕೊಂಡು, ಭಾನುವಾರ ದೇವಸ್ಥಾನದ ಅರ್ಚಕರನ್ನು ತಾಳಿಗಳ ಲೆಕ್ಕ ಕೇಳಿದ್ದಾರೆ. ಹೀಗೆ ತಾಳಿಗಳ ಲೆಕ್ಕ ಕೇಳಿದ ತಕ್ಷಣವೇ ಅರ್ಚಕರು, ದೇವಸ್ಥಾನ ಬೀಗ ಜಡಿದು ಬಾಗಿಲು ಬಂದ್‌ ಮಾಡಿಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದಿರುವ ಸಮುದಾಯದವರು, ಅರ್ಚಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಸಂಪ್ರದಾಯ?: ಗ್ರಾಮದಲ್ಲಿ ಸುಮಾರು ನೂರಾರು ವರ್ಷಗಳಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಅಲ್ಲಿಂದ ಇಲ್ಲಿವರೆಗೂ ಸುಮಾರು ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳು, ತಮ್ಮ ತಾಳಿಗಳನ್ನು ಹುಂಡಿಗೆ ಹಾಕಿದ್ದಾರೆ. ಭಾನುವಾ ಭಕ್ತರು ಹುಂಡಿಯಲ್ಲಿರುವ ತಾಳಿಗಳ ಲೆಕ್ಕ ಕೇಳಿರುವುದು ಗ್ರಾಮದಲ್ಲಿ ಭಕ್ತರು ಹಾಗೂ ಅರ್ಚಕರು ಗುಂಪಿನ ನಡುವೆ ವಿವಾದಕ್ಕೆ ಕಾರಣವಾಗಿದೆ.

ದೇವಸ್ಥಾನದ ಆಡಳಿತವನ್ನು ಟ್ರಸ್ಟ್‌ಗೆ ವಹಿಸಿ: ಧರೆಗೆ ದೊಡ್ಡವರು, ಮಂಟೇಸ್ವಾಮಿ, ಮಲ್ಲೇಶ್ವರ, ಹಿರಿತಂದಮ್ಮ, ದೊಡ್ಡಮಾರಮ್ಮ, ಮೂಗೂ ಮಾರಮ್ಮ , ಸೋಣಮಸಣಮ್ಮ, ಪಣಿಕೇರಿ ಮಸಣಿ ದೇವಾಲಯಗಳ ಅಭಿವೃದ್ಧಿಗೆ ಟ್ರಸ್ಟ್‌ ರಚಿಸಲಾಗಿದೆ. ಆದರೆ ಈವರೆಗೂ ದೇವಸ್ಥಾನಗಳ ಆಡಳಿತವನ್ನು ಟ್ರಸ್ಟ್‌ಗೆ ನೀಡಿಲ್ಲ. ಇಲ್ಲಿ ಎರಡು ಗುಂಪುಗಳಿದ್ದು, ಒಂದು ದೇವಸ್ಥಾನದ ಆಡಳಿತ ಟ್ರಸ್ಟ್‌ಗೆ ನೀಡಬೇಕು ಎಂದು ಬಯಸಿದರೆ, ಇನ್ನೊಂದು ಗುಂಪು ಇದನ್ನು ವಿರೋಧಿಸುತ್ತದೆ.

ಬಾಗಿಲು ತೆರೆಯದ್ದರಿಂದ ಭಕ್ತರ ಆಕ್ರೋಶ: ಶಿವರಾತ್ರಿ ಮಾರನೇ ದಿನವೇ ವಿವಾದ ಉಂಟಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಭಕ್ತರಿಗೆ ದೇವಸ್ಥಾನದ ಬಾಗಿಲು ಮುಚ್ಚಿದ್ದರಿಂದ ನಿರಾಸೆಯುಂಟಾಗಿದೆ. ಕೆಲವರು ಬಾಗಿಲು ತೆರೆಸಲು ಯತ್ನಿಸಿದ್ದರಿಂದ, ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.

ಇದರಿಂದಾಗಿ ಭಕ್ತರು ಆಕ್ರೋಶ ವಕ್ತಪಡಿಸಿದ್ದಾರೆ. ಭಾನುವಾರವೂ ಅದೇ ವಾತಾವಾರಣ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಿದ್ದರಿಂದ ಎರಡೂ ಗುಂಪುಗಳನ್ನು ಚದರಿಸಿದ್ದಾರೆ. ಬಳಿಕ ವಿಷಯ ತಿಳಿದ ಅಧಿಕಾರಿಗಳಾದ ಡಿವೈಎಸ್‌ಪಿ ಪ್ರಭಾಕರ ಶಿಂಧೆ, ತಹಶೀಲ್ದಾರ್‌ ಮಹೇಶ್‌ಕುಮಾರ್‌ ಸೇರಿ ಹೆಚ್ಚಿನ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು.

ಲೆಕ್ಕ ಕೊಡಲೇಬೇಕು-ಶಾಂತಲಾ: ಸಪ್ತ ದೇವಸ್ಥಾನಗಳು ಅರ್ಚಕರು ಹಾಗೂ ಅವರ ಗುಂಪಿಗೆ ಸೇರಿದ ಆಸ್ತಿಯಲ್ಲ. ಇದು ನಮ್ಮ ಸಮಾಜ ಹಾಗೂ ಸಾರ್ವಜನಿಕರ ಸ್ವತ್ತಾಗಿದ್ದು, ನಮ್ಮ ಸಮುದಾಯದ ಪರಂಪರೆಯಂತೆ ಎಲ್ಲ ಹೆಣ್ಣುಮಕ್ಕಳು ಮದುವೆಯಾದ ವರ್ಷದೊಳಗೆ ತಮ್ಮ ಪತಿ ಕಟ್ಟಿದ ಮೊದಲ ತಾಳಿಯನ್ನು ದೇವಸ್ಥಾನದ ಹುಂಡಿಗೆ ಹಾಕುತ್ತಾರೆ. ಬಳಿಕ ಬೇರೆ ತಾಳಿ ಧರಿಸುತ್ತೇವೆ.

2ನೇ ಬಾರಿಗೆ ತಾಳಿ ಮಾಡಿಸಿಕೊಳ್ಳಲು ಶಕ್ತಿಯಿಲ್ಲದವರು, ದೇವಸ್ಥಾನಕ್ಕೆ ಅರ್ಪಿಸಿದ ತಾಳಿಯ ನೆನಪಲ್ಲೆ ಇದ್ದಾರೆ. ನಾವು ಭಕ್ತಿಯಿಂದ ಅರ್ಪಿಸಿದ ತಾಳಿ ದೇವರಿಗೆ ಹೊರತು ಗುಡ್ಡಪ್ಪಂದಿರಿಗಲ್ಲ. ಸಮಾಜದವರು ಸಪ್ತ ದೇವಾಲಯಗಳಿಗೆ ಅರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ನಗದಿಗೆ ಲೆಕ್ಕ ಒಪ್ಪಿಸಬೇಕು ಎಂದು ಗ್ರಾಮಸ್ಥೆ ಶಾಂತಲಾ ಆಗ್ರಹಿಸಿದ್ದಾರೆ.

ಸಪ್ತ ದೇವಸ್ಥಾನಗಳು ಸುಮಾರು 25,000 ಕುಟುಂಬಗಳಿಗೆ ಸೇರಿವೆ. ಹೀಗಾಗಿ ನಮ್ಮ ಸಮುದಾಯದ ಪ್ರಶ್ನಾತೀತ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಡಾ ಯತೀಂದ್ರ ಸಿದ್ಧರಾಮಯ್ಯ ಮಧ್ಯೆ ಪ್ರವೇಶಿಸಿ ಸಪ್ತ ದೇವಾಲಯಗಳನ್ನು ಕುಟುಂಬದ ಹಿಡಿತದಿಂದ ತಪ್ಪಿಸಿ ಸಮುದಾಯದ ಆಡಳಿತಕ್ಕೆ ಒಪ್ಪಿಸಬೇಕು.
-ಕರಿ ಬಸವೇಗೌಡ, ಸಪ್ತ ದೇವಸ್ಥಾನಗಳ ಅಭಿವೃದ್ಧಿ ಟ್ರಸ್ಟ್‌ನ ಖಜಾಂಚಿ

ಟಾಪ್ ನ್ಯೂಸ್

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.