ಎಟಿಎಂ ಸ್ಕಿಮ್ಮಿಂಗ್‌ ಇರಲಿ ಎಚ್ಚರ


Team Udayavani, Feb 24, 2020, 5:42 AM IST

atm-skimming

ವರ್ಷಗಳ ಹಿಂದೆ ಪ್ರಮುಖ ಬ್ಯಾಂಕ್‌ಗಳ ಹಲವಾರು ಗ್ರಾಹಕರು ಎಟಿಎಂನಲ್ಲಿ ವಂಚನೆಗೊಳಗಾಗಿ ಲಕ್ಷಾಂತರ ಹಣ ಕಳೆದುಕೊಂಡ ಕುರಿತು ವರದಿಯಾಗಿತ್ತು. ತನಿಖೆ ನಡೆಸಿದಾಗ ಎಟಿಎಂನಲ್ಲಿ ಕಾರ್ಡ್‌ ಸ್ಕಿಮ್ಮಿಂಗ್‌ ತಂತ್ರಜ್ಞಾನ ಬಳಸಿರುವುದು ತಿಳಿದು ಬಂತು. ಇದೊಂದು ಹೈಟೆಕ್‌ ವಂಚನೆಯಾಗಿದ್ದು, ಈ ಕುರಿತು ತಿಳಿದುಕೊಂಡಿರುವುದು ಅಗತ್ಯ.

ಏನಿದು ಎಟಿಎಂ ಸ್ಕಿಮ್ಮಿಂಗ್‌?
ಯಂತ್ರವೊಂದನ್ನು ಬಳಸಿ ಎಟಿಎಂ ಕಾರ್ಡ್‌ನ ಮಾಹಿತಿಯನ್ನು ಕದ್ದು ನಡೆಸುವ ವಂಚನೆ ಇದಾಗಿದೆ. ಸ್ಕಿಮ್ಮರ್‌ ಎಂಬ ಹೆಸರಿನ ಚಿಕ್ಕ ಯಂತ್ರವೊಂದನ್ನು ಎಟಿಎಂ ಯಂತ್ರಕ್ಕೆ ಅಳವಡಿಸಲಾಗುತ್ತದೆ. ಇದು ಗ್ರಾಹಕರು ಎಟಿಎಂ ಕಾರ್ಡ್‌ನ್ನು ಸ್ವೆ„ಪ್‌ ಮಾಡುವಾಗ ಕಾರ್ಡ್‌ನ ಮ್ಯಾಗ್ನೆಟಿಕ್‌ ಸ್ಟ್ರಿಪ್‌ನಲ್ಲಿನ ಮಾಹಿತಿಯನ್ನು ಕದಿಯುತ್ತದೆ.ಹಾಗೆಂದು ಕೇವಲ ಸ್ಕಿಮ್ಮರ್‌ ಮಾತ್ರ ಸಾಲುವುದಿಲ್ಲ. ವಂಚಕರು ಗ್ರಾಹಕರ ಎಟಿಎಂ ಪಿನ್‌ ನಂಬರ್‌ ತಿಳಿಯಲು ಎಟಿಎಂ ಗೆ ಕೆಮರಾ ಅಳವಡಿಸುತ್ತಾರೆ ಅಥವಾ ಬ್ಯಾಂಕ್‌ನ ಕೆಮರಾ ಹ್ಯಾಕ್‌ ಮಾಡುತ್ತಾರೆ. ಇದಾದ ಬಳಿಕ ಪಿನ್‌ ನಂಬರ್‌ ತಿಳಿದುಕೊಂಡು ಆನ್‌ಲೈನ್‌ ಖರೀದಿಗಳನ್ನು ನಡೆಸುತ್ತಾರೆ ಅಥವಾ ತದ್ರೂಪಿ ಕಾರ್ಡ್‌ ತಯಾರಿಸುತ್ತಾರೆ.

ಪಾರಾಗುವುದು ಹೇಗೆ?
ಇವೆಲ್ಲ ಮುಂಜಾಗರೂಕತೆಗಳ ಹೊರತಾಗಿಯೂ ಗ್ರಾಹಕರು ಮೋಸ ಹೋಗುವ ಸಂಭಾವ್ಯತೆ ಅಲ್ಲಗಳೆಯಲಾಗದು. ಹಿಡನ್‌ ಕೆಮರಾ ಗ್ರಾಹಕರ ಪಿನ್‌ ನಂಬರ್‌ ನೋಟ್‌ ಮಾಡಿಕೊಂಡಿದ್ದರೆ, ದೋಚುವವರಿಗೆ ಬಲುದೊಡ್ಡ ಉಪಕಾರ ಆದೀತು.

ಆದ್ದರಿಂದ ಪಿನ್‌ ನಂಬರ್‌ ಬದಲಾಯಿಸಲು ಪಿನ್‌ ನಂಬರ್‌ ಎಂಟರ್‌ ಮಾಡುವಾಗ ಇನ್ನೊಂದು ಕೈಯಿಂದ ಮರೆ ಮಾಡಿಕೊಳ್ಳುವುದು ಉತ್ತಮ ಎನ್ನುವುದು ಬಲ್ಲವರ ಸಲಹೆ.
ಜತೆಗೆ ಬ್ಯಾಂಕ್‌ ಟ್ರಾನ್ಸಾéಕ್ಷನ್‌ ಸಂಬಂಧಿ ಎಸ್‌ ಎಂಎಸ್‌ ಅಲರ್ಟ್‌ ವ್ಯವಸ್ಥೆಗೆ ನೋಂದಣಿ ಮಾಡಿಕೊಳ್ಳುವುದು ಅಗತ್ಯ. ಬ್ಯಾಂಕ್‌ಗಳಲ್ಲಿ ಈಗ ಹೊಸ ಖಾತೆ ತೆರೆಯುವಾಗ ಈ ಆಯ್ಕೆ ಕೊಡುತ್ತಾರೆ. ಇಲ್ಲದೇ ಇದ್ದಲ್ಲಿ ಬ್ಯಾಂಕ್‌ನಲ್ಲಿ ಈ ಕುರಿತು ಮನವಿ ಸಲ್ಲಿಸಬಹುದು.

ಇದರಿಂದ ಪ್ರತಿ ಬಾರಿ ಎಟಿಎಂನಿಂದ ದುಡ್ಡು ತೆಗೆದಾಗ ಅಥವಾ ಖಾತೆಗೆ ಹಣ ಬಂದಾಗ ಎಸ್‌ಎಂಎಸ್‌ ಬರುತ್ತದೆ. ಎಟಿಎಂನಲ್ಲಿ ಒಂದು ವೇಳೆ ಸ್ಲಿಪ್‌ ಬರದೇ ಇದ್ದರೂ,ಬ್ಯಾಂಕ್‌ ಮೆಸೇಜ್‌ ಶಾಶ್ವತವಾಗಿರುವುದರಿಂದ ಗ್ರಾಹಕರಿಗೆ ಬಹಳ ಉಪಯುಕ್ತವಾಗುತ್ತದೆ.

ಸ್ಕಿಮ್ಮಿಂಗ್‌: ಪತ್ತೆ ಹೇಗೆ?
ಎಟಿಎಂ ಬಳಸುವ ಮುನ್ನ ಯಂತ್ರವನ್ನೊಮ್ಮೆ  ಪರಿಶೀಲಿಸುವುದು ಅಗತ್ಯ. ಕಾರ್ಡ್‌ ರೀಡರ್‌ ಸೆಕ್ಷನ್‌ (ಸ್ವೆ„ಪ್‌ಮಾಡುವ ಜಾಗ) ಸಾಮಾನ್ಯಕ್ಕಿಂತ ಸ್ವಲ್ಪ ಭಿನ್ನವಾಗಿ ಮುಂಚಾಚಿಕೊಂಡಿದ್ದರೆ, ಕೀಪ್ಯಾಡ್‌ ಮೇಲೆ ಬಂದಂತಿದ್ದರೆ, ಕಾರ್ಡ್‌ ರೀಡರ್‌ ಸಡಿಲವಾಗಿದ್ದರೆ, ವಂಚನೆಗೊಳಗಾಗುವ ಅಪಾಯ ಇದೆ ಎಂದು ಭಾವಿಸಬಹುದು.

ಮೋಸ ಹೋದರೆ?
ಒಂದು ವೇಳೆ ಸ್ಕಿಮ್ಮಿಂಗ್‌ ಯಂತ್ರದಿಂದ ಮೋಸ ಹೋದರೆ? ಆದಷ್ಟು ಬೇಗ ಬ್ಯಾಂಕ್‌ಗೆ ವಿಷಯ ತಿಳಿಸಬೇಕು. ಒಂದು ವೇಳೆ ಗ್ರಾಹಕರು ಬೇರೊಂದು ಬ್ಯಾಂಕ್‌ನ ಎಟಿಎಂ ಯಂತ್ರದಲ್ಲಿ ಹಣ ಕಳೆದುಕೊಂಡರೆ, ಆಗ ತಮ್ಮ ಖಾತೆ ಇರುವ ಬ್ಯಾಂಕ್‌ಗೆ ಮಾಹಿತಿ ನೀಡಬೇಕು. ಆರ್‌ಬಿಐ ಪ್ರಕಾರ, ತಡವಾದಷ್ಟು ರಿಸ್ಕ್ ಹೆಚ್ಚು. ಆದ್ದರಿಂದ ಮೋಸ ಹೋಗದಂತೆ ಎಚ್ಚರ ವಹಿಸಿ ವ್ಯಾವಹಾರ ನಡೆಸುವುದು ಉತ್ತಮ.

 -ಸಂದೇಶ್‌ ಸಲ್ಯಾನ್‌

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.