ಮೇಲ್ಮನೆಗೆ ಜಟಾಪಟಿ ಆರಂಭ
Team Udayavani, Feb 24, 2020, 6:15 AM IST
ಬೆಂಗಳೂರು: ಜೂನ್ನಲ್ಲಿ ಖಾಲಿಯಾಗುವ ವಿಧಾನ ಪರಿಷತ್ ಸ್ಥಾನಗಳಿಗಾಗಿ ಮೂರು ಪಕ್ಷಗಳ ಆಕಾಂಕ್ಷಿಗಳು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಕಾಂಗ್ರೆಸ್ 10 ಸ್ಥಾನಗಳನ್ನು ಕಳೆದುಕೊಳ್ಳಲಿದ್ದು, ಬಿಜೆಪಿಗೆ 9 ಸ್ಥಾನಗಳು ಅನಾಯಾಸವಾಗಿ ಸಿಗಲಿರುವುದ ರಿಂದ ಜೂನ್ ಅನಂತರ ಮೇಲ್ಮನೆ ಲೆಕ್ಕಾಚಾರವೂ ಬದಲಾಗುವ ಸಾಧ್ಯತೆಯಿದೆ.
ಈ ವರ್ಷದ ಜೂನ್ ಮಾಸಾಂತ್ಯಕ್ಕೆ ವಿಧಾನ ಪರಿಷತ್ನಲ್ಲಿ 16 ಸ್ಥಾನಗಳು ಖಾಲಿಯಾಗಲಿವೆ. ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯ 7 ಸ್ಥಾನಗಳು, ರಾಜ್ಯಪಾಲರಿಂದ ನಾಮನಿರ್ದೇಶನಗೊಳ್ಳುವ 5 ಸ್ಥಾನಗಳು, ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳು ಖಾಲಿಯಾಗಲಿದ್ದು, ಜೂನ್ನಲ್ಲಿ ಚುನಾವಣೆ ನಡೆಯಲಿದೆ.
ಸದ್ಯದ ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲದ ಆಧಾರದಲ್ಲಿ ಏಳು ಸ್ಥಾನಗಳಲ್ಲಿ ಆಡಳಿತ ಪಕ್ಷ ಬಿಜೆಪಿಗೆ 4, ಕಾಂಗ್ರೆಸ್ಗೆ 2 ಮತ್ತು ಜೆಡಿಎಸ್ಗೆ ಒಂದು ಸ್ಥಾನ ಲಭಿಸಲಿವೆ. ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಪ್ರಮುಖವಾಗಿ ವಲಸಿಗರಾದ ಎಚ್. ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್ ಮತ್ತು ಆರ್. ಶಂಕರ್ ಕಣ್ಣಿಟ್ಟಿದ್ದಾರೆ.
ನಾಮನಿರ್ದೇಶನದ ಐದೂ ಸ್ಥಾನಗಳು ಆಡಳಿತ ಪಕ್ಷ ಬಿಜೆಪಿಗೆ ಲಭಿಸುವುದರಿಂದ ಜೂನ್ ವೇಳೆಗೆ ಅದು ಒಂಬತ್ತು ಸದಸ್ಯರನ್ನು ಹೆಚ್ಚುವರಿಯಾಗಿ ಹೊಂದಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ