ಕೇಂದ್ರ ಸರಕಾರದ ಜನಪರ ಯೋಜನೆಗಳ ಪರಿಣಾಮಕಾರಿ ಜಾರಿಗೆ ಕಾರ್ಯಪಡೆ


Team Udayavani, Feb 24, 2020, 6:00 AM IST

karyapade

ಉಡುಪಿ: ಸುಮಾರು ಮೂರು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯರಾಗಿರುವ ಕುಯಿಲಾಡಿ ಸುರೇಶ್‌ ನಾಯಕ್‌ ಅವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಫೆ. 24ರ ಅಪರಾಹ್ನ 4ಕ್ಕೆ ಹೊಟೇಲ್‌ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆಯುವ ಸಂಕಲ್ಪ ಸಮಾವೇಶದಲ್ಲಿ ಹುದ್ದೆ ಸ್ವೀಕರಿಸಲಿರುವ ಅವರು “ಉದಯವಾಣಿ’ಗೆ ನೀಡಿದ ಸಂದರ್ಶನದ ಭಾಗ ಇಂತಿದೆ:

– ನಿಮ್ಮ ಸಾಧನೆ ನೋಡಿ ರಾಜ್ಯ ಘಟಕದವರು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರಾ?
ಪಕ್ಷದ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವುದನ್ನು ನೋಡಿ. ಪಕ್ಷ ಚುನಾವಣೆಯಲ್ಲಿ ಸೋತಾಗ ಕಾಪು ಮಂಡಲಾಧ್ಯಕ್ಷನಾಗಿ ಜವಾಬ್ದಾರಿಯನ್ನು ಸ್ವೀಕರಿಸಿ ಬಂದ ಎಲ್ಲ ಚುನಾವಣೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೆ. ಇದು ನನ್ನ ಸಾಧನೆಯಲ್ಲ, ಎಲ್ಲರೂ ಜತೆಗೂಡಿ ರಥ ಎಳೆದರಷ್ಟೆ.

– ಮುಂದೆ ಯಾವ ಗುರಿಗಳನ್ನು ಇರಿಸಿಕೊಂಡಿದ್ದೀರಿ?
ಮುಂದೆ ಬರುವ ಗ್ರಾ.ಪಂ., ಜಿ.ಪಂ., ತಾ.ಪಂ. ಚುನಾವಣೆ, 2023ರ ವಿಧಾನಸಭಾ ಚುನಾವಣೆಗಳಲ್ಲಿ ಈಗಾಗಲೇ ಗೆದ್ದ, ಸೋತ ಎಲ್ಲ ಸ್ಥಾನಗಳಲ್ಲಿ ಗೆಲ್ಲುವ, ಎಲ್ಲ ಸಹಕಾರಿ ಕ್ಷೇತ್ರಗಳಲ್ಲಿಯೂ ಬಿಜೆಪಿ ಸದಸ್ಯರು ಗೆಲುವು ಸಾಧಿಸುವಂತೆ ಮಾಡುತ್ತೇವೆ. ಕೇಂದ್ರ ಸರಕಾರದ ಜನಪರ ಯೋಜನೆಗಳ ಫ‌ಲವನ್ನು ಜನರಿಗೆ ನೇರವಾಗಿ ತಲುಪಿಸುವ ಕುರಿತು ಕಾರ್ಯಕರ್ತರ ಒಂದು ಕಾರ್ಯಪಡೆಯನ್ನು ಮಾಡಬೇಕೆಂದಿದ್ದೇನೆ. ಸರಕಾರಿ ಕಚೇರಿಗಳಲ್ಲಿ ಜನರ ಕೆಲಸ ಶೀಘ್ರದಲ್ಲಿ ಆಗುವ ಕುರಿತು ಸಚಿವರು, ಶಾಸಕರು, ಸಂಸದರ ಜತೆ ಚರ್ಚಿಸುತ್ತೇನೆ.

– ಜಿಲ್ಲಾ ಸಮಿತಿ ರಚಿಸುವಾಗ ಯಾವ ಮಾನದಂಡವನ್ನು ಅನುಸರಿಸುತ್ತೀರಿ?
ಕ್ಷೇತ್ರವಾರು, ಸಮುದಾಯವಾರು ಪ್ರಾತಿನಿಧ್ಯವನ್ನು ನೀಡಲಾಗುತ್ತದೆ. ಹಿಂದಿನ ಅವಧಿಯಲ್ಲಿ ಪಕ್ಷದ ವಿವಿಧ ಘಟಕಗಳಲ್ಲಿ ನಿರ್ವಹಿಸಿದ ಕಾರ್ಯಕ್ಷಮತೆಯನ್ನು ಪರಿಗಣಿಸುತ್ತೇವೆ.

– ಕೇಂದ್ರ, ರಾಜ್ಯ ಸರಕಾರಗಳು ನಿಮ್ಮ ಪಕ್ಷದ್ದಾಗಿರುವಾಗ ಜಿಲ್ಲೆಯ ಅಭಿವೃದ್ಧಿಯಲ್ಲಿ ನಿಮ್ಮ ಪಾತ್ರ ಏನಿರುತ್ತದೆ?
ರಾ.ಹೆ., ಕುಡಿಯುವ ನೀರು ಸಹಿತ ವಿವಿಧ ಅಭಿವೃದ್ಧಿ ಕುರಿತಂತೆ ಸಚಿವರು, ಸಂಸದರು, ಶಾಸಕರೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುತ್ತೇನೆ ಮತ್ತು ಅವರ ಕಲ್ಪನೆಯ ಯೋಚನೆಗಳಿಗೆ ಸಹಕಾರ ಕೊಡುತ್ತೇವೆ. ಡಾ| ವಿ.ಎಸ್‌. ಆಚಾರ್ಯರು ಹಾಕಿದ ಅಭಿವೃದ್ಧಿಯ ಭದ್ರಬುನಾದಿಯನ್ನು ಮುಂದುವರಿಸುತ್ತೇವೆ.

– ನಿತ್ಯ ಸಂಜೆ ಕಚೇರಿಯಲ್ಲಿ ಲಭ್ಯ
ಕಾರ್ಯಕರ್ತರ ಜತೆ ಸೌಹಾರ್ದ ಸಂಬಂಧವನ್ನು ಕಾಯ್ದುಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ರವಿವಾರ ಮತ್ತು ನಿಗದಿತ ಕಾರ್ಯಕ್ರಮಗಳು ಇಲ್ಲದಿರುವ ದಿನಗಳನ್ನು ಹೊರತುಪಡಿಸಿ ಪ್ರತಿ ನಿತ್ಯ ಸಂಜೆ 4.30ರಿಂದ 6.30ರ ವರೆಗೆ ಪಕ್ಷದ ಕಾರ್ಯಾಲಯದಲ್ಲಿ ಸಿಗುತ್ತೇನೆ.
– ಕುಯಿಲಾಡಿ ಸುರೇಶ್‌ ನಾಯಕ್‌

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.