ಮಕ್ಕಳಲ್ಲಿ ಬೆಳೆಸಿ ದೇಶಭಕ್ತಿ -ನೈತಿಕತೆ

ರಂಗಾಪುರ ಕ್ಯಾಂಪ್‌ನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ

Team Udayavani, Feb 24, 2020, 12:19 PM IST

24-February-08

ಗೊರೇಬಾಳ: ಕೆಲ ಸಂಘಟನೆಗಳು ಮಕ್ಕಳಿಗೆ ಪ್ರಚೋದನೆ ನೀಡಿ ದೇಶ, ಸಮಾಜದ್ರೋಹಿ ಕೆಲಸಗಳಲ್ಲಿ ತೊಡಗಿಸುತ್ತಿದ್ದಾರೆ. ಆದ್ದರಿಂದ ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ನೈತಿಕ ಮೌಲ್ಯ, ಸಂಸ್ಕೃತಿ, ಸಂಸ್ಕಾರ ಮತ್ತು ದೇಶಭಕ್ತಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಸಿಂಧನೂರು ತಾಲೂಕಿನ ರಂಗಾಪುರ ಕ್ಯಾಂಪ್‌ನಲ್ಲಿ ರವಿವಾರ ನಡೆದ ಅಮೃತ ಫೌಂಡೇಶನ್‌ ಬೆಂಗಳೂರು ಇವರ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಪಿಚ್ಚಿಕಲಾ ಶೇಷಮ್ಮ ಸೂರನ್ನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕೆಲ ಸಂಘಟನೆಗಳು ಪ್ರಚೋದನೆ ನೀಡಿ ಮಕ್ಕಳನ್ನು ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿದ್ದಾರೆ. ಮಕ್ಕಳು ಇಂತಹ ಚಟುವಟಿಕೆಯಿಂದ ದೂರ ಉಳಿಯಲು ಅವರಲ್ಲಿ ದೇಶಭಕ್ತಿ, ಸಂಸ್ಕೃತಿ, ಸಂಸ್ಕಾರ ಬೆಳೆಸುವ ಕೆಲಸವಾಗಬೇಕಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಕರ್ತವ್ಯ ನಿರ್ವಹಿಸದೇ ಶಾಲಾ-ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ನೈತಿಕ ಪಾಠ ಮಾಡಬೇಕು. ಅವರಲ್ಲಿ ದೇಶಭಕ್ತಿ ಬೆಳೆಸಿ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದರು.

ಮನುಷ್ಯ ತಾನು ಗಳಿಸಿದ್ದರಲ್ಲಿ ಅಲ್ಪ ಭಾಗವನ್ನಾದರೂ ಸಮಾಜ ಸೇವೆಗೆ ಬಳಸುವ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. 40 ವರ್ಷದ ಹಿಂದೆ ಗ್ರಾಮೀಣ ಭಾಗದಲ್ಲಿ ಜನಿಸಿ ಗುಡಿಸಲು ಶಾಲೆಯಲ್ಲಿ ಓದಿದ ಪಿ. ವೆಂಕಟೇಶ್ವರರಾವ್‌ ಅವರು ತಮ್ಮ ಅಮೃತ ಫೌಂಡೇಶನ್‌ ವತಿಯಿಂದ ತಾವು ಕಲಿತ ಶಾಲೆಯ ಕಟ್ಟಡವನ್ನು ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಮಾದರಿಯಾಗಿದೆ. ಗ್ರಾಮಕ್ಕೆ ಮಾದರಿ ಶಾಲೆ ನಿರ್ಮಿಸಿದ್ದಾರೆ. ಇಂತಹ ದಾನಿಗಳಿಂದಲೇ ದೇಶ, ಸಮಾಜ ಪ್ರಗತಿ ಆಗುತ್ತಿದೆ ಎಂದರು.

ಸಂಸದ ಕರಡಿ ಸಂಗಣ್ಣ ಮಾತನಾಡಿ, ಮಕ್ಕಳಿಗೆ ಜ್ಞಾನಾರ್ಜನೆ ಕೊಡುವ ದೇವಾಲಯ ನಿರ್ಮಿಸಿದ ಪಿ. ವೆಂಕಟೇಶ್ವರರಾವ್‌ ಅವರ ಜೀವನ ಸಾರ್ಥಕ. ಸರಕಾರ ಮಾಡದ ಕಾರ್ಯವನ್ನು ಪಿಚ್ಚಿಕಲಾ ವೆಂಕಟೇಶ್ವರರಾವ್‌ ಮಾಡಿದ್ದು, ಇದರ ಪ್ರಯೋಜನವನ್ನು ಮಕ್ಕಳು, ಗ್ರಾಮಸ್ಥರು ಪಡೆಯಬೇಕು ಎಂದರು.

ಶಾಸಕ ವೆಂಕಟರಾವ್‌ ನಾಡಗೌಡ ಮಾತನಾಡಿ, ಸರ್ಕಾರ ಎಲ್ಲ ಕೆಲಸ ಮಾಡಲು ಆಗುವುದಿಲ್ಲ. ದಾನಿಗಳು ಕೈ ಜೋಡಿಸಿದಾಗ ಉತ್ತಮ ಶಾಲೆಗಳ ನಿರ್ಮಾಣ ಸಾಧ್ಯ. ಅನ್ನದಾನಕ್ಕಿಂತಲೂ ಮಿಗಿಲಾದ ದಾನ ಜ್ಞಾನ ದಾನ. ಜ್ಞಾನ ಇದ್ದರೆ ಎಲ್ಲವನ್ನು ವ್ಯಕ್ತಿ ಪಡೆಯಬಲ್ಲ. ಮಕ್ಕಳಿಗೆ, ಗ್ರಾಮಕ್ಕೆ ಅನುಕೂಲವಾಗುವ ಬಹು ದೊಡ್ಡ ಕೆಲಸವನ್ನು ವೆಂಕಟೇಶ್ವರರಾವ್‌ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಕನಕಗಿರಿ ಶಾಸಕ ಬಸವರಾಜ ದಡೇಸುಗೂರ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯರಾದ ಅಮರೇಗೌಡ ವಿರುಪಾಪುರ, ಶಿವುನಗೌಡ ಗೊರೇಬಾಳ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಹಾಗೂ ತಾಲೂಕ ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಎಚ್‌.ಎಂ.ಮಲ್ಲಿಕಾರ್ಜುನಸ್ವಾಮಿ, ಇತರರು ಇದ್ದರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.