ಹೀರೇಕಾಯಿ ಸೇವಿಸಿ ಆರೋಗ್ಯ ವೃದ್ಧಿಸಿ


Team Udayavani, Feb 25, 2020, 3:08 AM IST

majji-22

ಆಹಾರ ತುಂಬಾ ರುಚಿಯಾಗಿದ್ದು ನಾಲಿಗೆ ಚಪಲ ತೀರಿದರೆ ಅಷ್ಟೇ ಸಾಕು ಎನ್ನುವುದು ಸಾಮಾನ್ಯ ಯೋಚನೆಯಾಗಿದೆ. ಆದರೆ ನಾವು ತಿನ್ನುವ ಎಷ್ಟೋ ಆಹಾರದಲ್ಲಿ ಅಗತ್ಯ ಪೋಷಕಾಂಶ ಇದೆಯೇ ಇಲ್ಲವೇ ಎನ್ನುವುದನ್ನು ಕೂಡ ಅರಿಯುವುದಿಲ್ಲ. ರುಚಿಗೂ ಆರೋಗ್ಯಕ್ಕೂ ಆದ್ಯತೆ ನೀಡುವ ನೆಲೆಯಲ್ಲಿ ಹೀರೇಕಾಯಿ ತರಕಾರಿ ಪ್ರಧಾನ ಪಾತ್ರವಹಿಸುತ್ತದೆ.

ದೇಹದ ತೂಕ ಇಳಿಕೆಗೆ
ಹೀರೇಕಾಯಿಯಲ್ಲಿ ಅಧಿಕ ಐರನ್‌, ಮ್ಯಾಗ್ನಿ ಷಿಯಂ, ವಿಟಮಿನ್‌ ಸಿ ಅಂಶವು ಹೇರಳವಾಗಿದ್ದು ಹಲವು ರೋಗಗಳಿಗೆ ಇದು ಮನೆಮದ್ದಾಗಿದೆ. ಇದರ ನಿಯಮಿತ ಸೇವನೆಯೂ ದೇಹದ ಅನಗತ್ಯ ಕೊಬ್ಬಿನಾಂಶವನ್ನು ಹೊರಹಾಕಿ ನಮ್ಮ ಫಿಟ್‌ನೆಸ್‌ ಕಾಪಾಡುತ್ತದೆ. ದೇಹದ ತೂಕ ಇಳಿಕೆಗೆ ಇದರ ಸೇವನೆ ಮಾಡುವುದು ಉತ್ತಮವಾಗಿದೆ. ಇದನ್ನು ಉಪ್ಪಿನಲ್ಲಿ ಬೇಯಿಸಿ ಇಲ್ಲವೇ ಜ್ಯೂಸ್‌ ರೂಪದಲ್ಲೂ ಸೇವಿಸಬಹುದು. ಆದರೆ ಪಲ್ಯ ಇನ್ನಿತರ ಖಾದ್ಯ ಮಾಡುವಾಗ ಎಣ್ಣೆಯ ಅಂಶವನ್ನು ಕಡಿಮೆ ಬಳಸುವುದನ್ನು ರೂಢಿಸಿಕೊಳ್ಳಬೇಕು.

ಉರಿ ಮೂತ್ರ ಸಮಸ್ಯೆ ನಿವಾರಿಸಲು
ದೇಹದಲ್ಲಿ ಕಡಿಮೆನೀರಿನಂಶಉರಿಮೂತ್ರ ಸಮಸ್ಯೆಗೆ ಕಾರಣವಾಗಿದ್ದು ಅಂತಹ ಸಂದರ್ಭದಲ್ಲಿ ಹೀರೇಕಾಯಿ ಸೇವನೆ ಒಳ್ಳೆಯದು. ಇದರಲ್ಲಿರುವ ವಿಟಮಿನ್‌, ನೀರಿನಂಶ ಉರಿಮೂತ್ರದ ನೋವಿನ ಬಾಧೆ ಕಡಿಮೆ ಮಾಡುತ್ತದೆ. ಇದನ್ನು ಜೀರಿಗೆ, ಕಲ್ಲು ಸಕ್ಕರೆ, ಗಸಗಸೆಯೊಂದಿಗೆ ಬೆರೆಸಿ ಅರೆದು ಸೇವಿಸುವುದರಿಂದ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗಿದೆ.

ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ
ಹೀರೇಕಾಯಿಯಲ್ಲಿ ಕೆರೋಟಿನ್‌ ಅಂಶವಿದ್ದು ಇದು ನಿಮ್ಮ ರಕ್ತ ಶುದ್ಧೀಕರಿಸಲು ನೆರವಾಗುತ್ತದೆ. ಮಾತ್ರವಲ್ಲದೆ ಇದರಲ್ಲಿರುವ ಅಧಿಕ ನೀರಿನಂಶ ವು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯ ಹೊಂದಿದೆ. ಇದನ್ನು ವಾರಕ್ಕೆ 3ರಿಂದ ನಾಲ್ಕು ಬಾರಿ ಕಡಿಮೆ ಮಸಾಲ ಅಂಶವನ್ನು ಉಪಯೋಗಿಸಿ ಅಡುಗೆ ಮಾಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಂಡಂತಾಗುತ್ತದೆ.

ಸಿಬ್ಬಿನ ನಿವಾರಣೆಗೆ
ಸಿಬ್ಬಿನ ಸಮಸ್ಯೆಗೆ ಇದೊಂದು ಉತ್ತಮ ಮದ್ದಿನಂತೆ ಕಾರ್ಯ ನಿರ್ವಹಿಸುತ್ತದೆ. ಹೀರೇಕಾಯಿ ಸಿಪ್ಪೆ ಅಧಿಕ ಪೋಷಕಾಂಶವನ್ನು ಹೊಂದಿದ್ದು ಅದನ್ನು ಬೆಳ್ಳುಳ್ಳಿ ಮತ್ತು ಚಿಟಿಕೆ ಉಪ್ಪಿನೊಂದಿಗೆ ಪೇಸ್ಟ್‌ ಮಾಡಿ ವಾರಕ್ಕೆ ನಾಲ್ಕು ಬಾರಿ ಲೇಪಿಸುವುದರಿಂದ ಸಿಬ್ಬಿನ ಒಣಾಂಶವು ಕಡಿಮೆಯಾಗಿ ತ್ವಚೆಯ ಹೊಳಪು ಹೆಚ್ಚಲು ಸಹಕಾರಿಯಾಗಿದೆ.

- ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.