ಬಿಲ್ವಪತ್ರೆಯಲ್ಲಿದೆ ಹಲವು ಔಷಧ ಗುಣ


Team Udayavani, Feb 25, 2020, 4:37 AM IST

majji-25

ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಲ್ಲಿ ಅನೇಕ ಔಷಧ ಗುಣಗಳಿವೆ. ಬಿಲ್ವಪತ್ರೆ ಚರ್ಮರೋಗ, ಬಾಯಿಹುಣ್ಣು, ಕೂದಲು ಉದುರುವಿಕೆ ಮೊದಲಾದ ಅನೇಕ ಸಮಸ್ಯೆಗಳಿಗೆ ರಾಮಬಾಣ. ಬಿಲ್ವಪತ್ರೆಯ ಎಲೆ, ಕಾಯಿ, ತೊಗಟೆ, ಬೇರು ಎಲ್ಲವೂ ಔಷಧ ಗುಣಗಳನ್ನು ಹೊಂದಿದೆ.

ಆಯುರ್ವೇದದಲ್ಲಿ ಬಿಲ್ವಪತ್ರೆಯ ಪ್ರಯೋಜನಗಳನ್ನು ತಿಳಿಸಿದ್ದಾರೆ. ವಾತದ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಬೇರಿನಲ್ಲಿದೆ. ಬಿಲ್ವದ ಕಾಯಿ ಕಫ‌ ನಿವಾರಣೆಗೆ ಸಹಾಯಕ. ಜತೆಗೆ ಜೀರ್ಣಕ್ರೀಯೆಗೆ ಮತ್ತು ಹೊಟ್ಟೆ ನೋವು, ಭೇದಿ ಮೊದಲಾದ ಸಮಸ್ಯೆಗಳಿಗೂ ಇದು ಪರಿಹಾರ ನೀಡುತ್ತದೆ.

ಬಿಲ್ವಪತ್ರೆಯ ಪ್ರಯೋಜನಗಳು
1 ಚರ್ಮದ ಆರೋಗ್ಯಕ್ಕೆ ಬಿಲ್ವಪತ್ರೆ ಉತ್ತಮ. ದೇಹದಲ್ಲಿ ಕುರು ಎದ್ದರೆ ಬಿಲ್ವಪತ್ರೆ ಮರದ ಬೇರನ್ನು ಜಜ್ಜಿ ನಿಂಬೆ ರಸದೊಂದಿಗೆ ಹಚ್ಚಿದರೆ ಈ ಸಮಸ್ಯೆ ನಿವಾರಣೆಯಾಗುತ್ತದೆ.

2 ತಲೆನೋವಿನ ಸಮಸ್ಯೆಯಿದ್ದರೆ ಬಿಲ್ವಪತ್ರೆಯ ಒಣಬೇರನ್ನು ಅರೆದು ಹಣೆಗೆ ಹಚ್ಚಿದರೆ ತಲೆನೋವಿನ ಸಮಸ್ಯೆ ಪರಿಹಾರವಾಗುತ್ತದೆ.

3 ತಲೆಯಲ್ಲಿ ಹೊಟ್ಟು ಇದ್ದರೆ ಬಿಲ್ವಪತ್ರೆಯ ಕಾಯಿಯನ್ನು ಬೇಯಿಸಿ ಅದರ ತಿರುಳನ್ನು ಅರೆದು ತಲೆಗೆ ಹಚ್ಚಿದರೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.

4 ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವಪತ್ರೆಯ ಎಲೆಯನ್ನು ನೀರು ಸೇವಿಸದೆ ಅರೆದು ಹಣೆಗೆ ಹಚ್ಚಿಕೊಂಡರೆ ಒಳ್ಳೆಯ ನಿದ್ದೆ ಬರುತ್ತದೆ.

5 ಬಿಲ್ವಪತ್ರೆಯ ರಸವನ್ನು ಪ್ರತಿದಿನ 2 ಚಮಚ ಸೇವಿಸಿದರೆ ನಿಶ್ಯಕ್ತಿಯ ಸಮಸ್ಯೆ ಕಡಿಮೆಯಾಗುತ್ತದೆ.

6 ಕಣ್ಣು ಉರಿ, ತುರಿಕೆ ಇದ್ದರೆ ಇದನ್ನು ಚೆನ್ನಾಗಿ ಅರೆದು ಕಣ್ಣಿನ ಮೇಲೆ ಲೇಪಿಸಿಕೊಳ್ಳಬೇಕು.

7 ಬಾಯಿಯಲ್ಲಿ ಹುಣ್ಣಾದರೆ ಬಿಲ್ವಪತ್ರೆ ಹಣ್ಣಿನ ತಿರುಳನ್ನು ಬೆಲ್ಲದ ಜತೆಯಲ್ಲಿ ಸೇವಿಸುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.

8 ಬೊಜ್ಜು ಸಮಸ್ಯೆಗೆ ಬಿಲ್ವಪತ್ರೆ ಹೆಚ್ಚು ಪರಿಣಾಮ ಬೀರುತ್ತದೆ.

9 ಶ್ವಾಸಕೋಶದ ಹಲವು ಸಮಸ್ಯೆಗಳಿಗೆ ಬಿಲ್ವಪತ್ರೆ ರಾಮಬಾಣವಾಗಿದೆ.
ಹಲವಾರು ಸಂಶೋಧನೆಗಳ ಪ್ರಕಾರ ಬಿಲ್ವಪತ್ರೆ ರೋಗನಿರೋಧಕ ಶಕ್ತಿಗಳನ್ನು ಹೊಂದಿದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅತಿಯಾಗಿ ಬೆವರುವುದರಿಂದ ದೇಹ ದುರ್ಗಂಧದ ಸಮಸ್ಯೆ ಕಾಡುತ್ತಿದ್ದರೆ ಬಿಲ್ವಪತ್ರೆಯನ್ನು ಮೈಗೆ ಹಚ್ಚಿಕೊಳ್ಳಬಹುದು. ಇದರಿಂದ ದುರ್ಗಂಧದ ಸಮಸ್ಯೆ ನಿವಾರಣೆಯಾಗುತ್ತದೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.