ಕಾಮನ್‌ವೆಲ್ತ್‌ ಗೇಮ್ಸ್‌ : ಭಾರತದ ಆತಿಥ್ಯದಲ್ಲಿ ಶೂಟಿಂಗ್‌, ಬಿಲ್ಗಾರಿಕೆ!


Team Udayavani, Feb 25, 2020, 6:45 AM IST

comenwealth

ಲಂಡನ್‌: ಭಾರತೀಯ ಒಲಿಂಪಿಕ್‌ ಸಂಸ್ಥೆಗೆ ಬಹುದೊಡ್ಡ ಜಯ ಲಭಿಸಿದೆ. 2022ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ರದ್ದಾಗಿದ್ದ ಶೂಟಿಂಗ್‌ ಮತ್ತು ಬಿಲ್ಗಾರಿಕೆ ಸ್ಪರ್ಧೆ ಗಳು, ಭಾರತದಲ್ಲಿ ಅದೇ ವರ್ಷ ಜನವರಿಯಲ್ಲಿ ನಡೆಯಲಿವೆ. ಇಲ್ಲಿ ಗೆದ್ದ ಪದಕಗಳನ್ನು ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ಪಟ್ಟಿಯಲ್ಲಿ ಸೇರಿಸಿ, ಶ್ರೇಯಾಂಕಗಳನ್ನು ನಿರ್ಧರಿಸಲಾಗುತ್ತದೆ.

ಇದಕ್ಕೂ ಮುನ್ನ ಈ ಎರಡು ಸ್ಪರ್ಧೆಗಳನ್ನು ಇಂಗ್ಲೆಂಡ್‌ನ‌ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಬೇಕಿರುವ 2022ರ ಕಾಮನ್‌ವೆಲ್ತ್‌ ಗೇಮ್ಸ್‌ ನಿಂದ ಕೈಬಿಡಲಾಗಿತ್ತು. ಆದರೆ ಭಾರತ ಒಲಿಂಪಿಕ್‌ ಸಂಸ್ಥೆ ತನಗೆ ಗರಿಷ್ಠ ಪದಕ ಬರುವ ಈ ಸ್ಪರ್ಧೆಗಳನ್ನು ಕೈಬಿಟ್ಟರೆ, ತಾನು ಕೂಟದಿಂದಲೇ ಹಿಂದೆ ಸರಿಯುವುದಾಗಿ ಬೆದರಿಸಿತ್ತು.

ಭಾರತದ ಬೆದರಿಕೆಯನ್ನು ಸಂಘ ಟನಾ ಸಮಿತಿ ಗಂಭೀರವಾಗಿ ಪರಿಗ ಣಿಸಿ, ಸಂಧಾನ ಮಾಡಿಕೊಂಡಿತ್ತು. ಕಳೆದ ತಿಂಗಳೇ ಈ 2 ಸ್ಪರ್ಧೆಗಳನ್ನು ಮಾತ್ರ ಭಾರತದಲ್ಲಿ ನಡೆಸುವ ಮಾತುಕತೆ ಯಾಗಿತ್ತು. ಆ ಪ್ರಕಾರ ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.

ಚಂಡೀಗಢದಲ್ಲಿ ಸ್ಪರ್ಧೆ
2022ರ ಶೂಟಿಂಗ್‌ ಮತ್ತು ಬಿಲ್ಗಾರಿಕೆ ಸ್ಪರ್ಧೆಗಳು ಜನವರಿಯಲ್ಲಿ ಚಂಡೀಗಢದಲ್ಲಿ ನಡೆಯಲಿವೆ. ಕಾಮನ್‌ವೆಲ್ತ್‌ ಗೇಮ್ಸ್‌ ಬರ್ಮಿಂಗ್‌ಹ್ಯಾಮ್‌ನಲ್ಲಿ 2022, ಜು. 27ರಿಂದ ಆ. 7ರ ವರೆಗೆ ನಡೆಯಲಿದೆ.

ಇಲ್ಲಿ ಗಮನಿಸಬೇಕಾದ ಸಂಗತಿ ಯೊಂದಿದೆ. ಗರಿಷ್ಠ ಪದಕ ವಿಜೇತ ತಂಡಗಳ ಶ್ರೇಯಾಂಕವನ್ನು ಭಾರತದಲ್ಲಿ ನಡೆಯುವ ಬಿಲ್ಗಾರಿಕೆ, ಶೂಟಿಂಗ್‌ ಪದಕ ಸೇರಿಸಿಯೇ ನಿರ್ಧರಿಸಲಾಗುವುದು. ಆದರೆ ಕಾಮನ್‌ವೆಲ್ತ್‌ ಗೇಮ್ಸ್‌ ಮುಗಿದು ಒಂದು ವಾರದ ಅನಂತರ ಈ ಸೇರ್ಪಡೆ ಮಾಡಲಾಗುವುದು. ಅಲ್ಲಿಯವರೆಗೆ ನೇರವಾಗಿ ಕೂಟದಲ್ಲಿ ನಡೆದ ಸ್ಪರ್ಧೆಗಳನ್ನು ಮಾತ್ರ ಪರಿಗಣಿಸಲಾಗುವುದು.

ಭಾರತಕ್ಕೆ ಮಹತ್ವದ ಜಯ
ಇದು ಭಾರತಕ್ಕೆ ಸಿಕ್ಕಿದ ಮಹ ತ್ವದ ಜಯವೆಂದೇ ಹೇಳಲಾಗಿದೆ. ವಿಶ್ವಮಟ್ಟದಲ್ಲಿ ಭಾರತ ಬಲಿಷ್ಠವಾಗಿರುವುದು, ರಾಜತಾಂತ್ರಿಕವಾಗಿ ಪ್ರಬಲವಾಗಿರುವುದರಿಂದ ಭಾರತದ ಬಹಿಷ್ಕಾರದ ಧ್ವನಿಗೆ ಮಹತ್ವ ಸಿಕ್ಕಿದೆ. ಇದಕ್ಕೆ ಮೊದಲು ಬರ್ಮಿಂಗ್‌ಹ್ಯಾಮ್‌ನಲ್ಲಿ ಶೂಟಿಂಗ್‌ ರೇಂಜ್‌ ಇಲ್ಲ ಎಂಬ ಕಾರಣಕ್ಕೆ ಶೂಟಿಂಗ್‌ ರದ್ದು ಮಾಡಲಾಗಿತ್ತು. ಈ ಕ್ರೀಡೆಯಲ್ಲೇ ಭಾರತಕ್ಕೆ ಬಹುತೇಕ ಪದಕ ಬರುವುದು, ಅದನ್ನೇ ರದ್ದು ಮಾಡಿರುವುದು ಪಿತೂರಿ ಎಂದು ಭಾರತ ಒಲಿಂಪಿಕ್‌ ಸಂಸ್ಥೆ ಮುಖ್ಯಸ್ಥ ನರೇಂದ್ರ ಬಾತ್ರಾ ಆರೋಪಿಸಿದ್ದರು.

ಟಾಪ್ ನ್ಯೂಸ್

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.