ಸಿಎಎ ವಿರುದ್ಧ ಹರಿಹಾಯ್ದ ನಾಯಕರು
Team Udayavani, Feb 25, 2020, 12:28 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೇಂದ್ರ ಸರ್ಕಾರ ಜನ ವಿರೋಧಿ ಪೌರತ್ವ ಕಾನೂನುಗಳನ್ನು ಹಿಂಪಡೆಯುವವರೆಗೆ, ಸರ್ಕಾರ ಬೆದರದ ಹೊರತು, ದೆಹಲಿ ಅಧಿಕಾರಸ್ತರ ಕುರ್ಚಿ ಅಲುಗಾಡದ ಹೊರತು, ಅಧಿಕಾರದಿಂದ ಅವರನ್ನು ಕೆಳಗಿಳಿಸಲು 2024ರವರೆಗೆ ಕಾಯಬೇಕಿಲ್ಲ. ಸಂವಿಧಾನ ಉಳಿಸಿ ಹೋರಾಟವನ್ನು ಗಾಂಧೀಜಿ ಮಾರ್ಗದಲ್ಲಿ, ಡಾ| ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಹಾದಿಯಲ್ಲೇ ಶಾಂತ ರೀತಿಯಲ್ಲಿ ನಿರಂತರ ಹೋರಾಟ ಮುಂದುವರಿಸೋಣ ಎಂದು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಮನವಿ ಮಾಡಿದರು.
ನಗರದ ಹೊರ ವಲಯದ ಜುಮನಾಳ ಕ್ರಾಸ್ ಬಳಿ ಬಿಜಾಪುರ ಜಂಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಸಂವಿಧಾನ ಉಳಿಸಿ ಆಂದೋಲನದಲ್ಲಿ ಮಾತನಾಡಿದ ಅವರು, ಎನ್ಪಿಆರ್, ಎನ್ಆರ್ಸಿ ಜಾರಿಯಿಂದ ದೇಶದಲ್ಲಿ ಇನ್ನೂ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು. ಈ ಹೋರಾಟದಲ್ಲಿ ಪಾಲ್ಗೊಂಡಿರುವ ನನ್ನನ್ನು ದೆಹಲಿಯಲ್ಲಿ ಅಧಿಕಾರದಲ್ಲಿರುವ ವ್ಯಕ್ತಿಗಳು ಹಾಗೂ ಅವರ ಪಕ್ಷಗಳ
ಮುಖಂಡರು ತುಕ್ಡೆ ಗ್ಯಾಂಗ್ ಸದಸ್ಯ ಖಾನ್ ಮಾರ್ಕೆಟ್, ಅರ್ಬನ್ ನಕ್ಸಲ್ ಗುಂಪು ಸೇರಿರುವ ದೇಶದ್ರೋಹಿ ಎನ್ನಲು ಹಿಂಜರಿಯರು. ನನ್ನನ್ನು ಕೂಡ ಪಾಕಿಸ್ತಾನಕ್ಕೆ ಹೋಗು ಎಂದರೂ ಅಚ್ಚರಿ ಇಲ್ಲ. ದೇಶ ದಿವಾಳಿತನದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ಮುಚ್ಚಿಕೊಳ್ಳಲು ಹಾಗೂ ಆಡಳಿತ ವೈಫಲ್ಯ ಮರೆ ಮಾಚಲು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದ ಜನರ ಮನಸ್ಥಿತಿಯ ದಿಕ್ಕನ್ನು ತಪ್ಪಿಸುವ ಕೆಲಸ ನಡೆಸಿದೆ ಎಂದು ವಾಗ್ಧಾಳಿ ನಡೆಸಿದರು.
ಸುಪ್ರೀಂ ಕೋರ್ಟ್ ಕೂಡ ಏನೂ ಮಾಡಲಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಈ ಪೌರತ್ವ ಕಾಯ್ದೆಗಳನ್ನು ವಿರೋಧಿಸಿ ನಾನು ಜನೆವರಿ 9ರಿಂದ ಆರಂಭಿಸಿದ್ದ ಯಾತ್ರೆ ಜ. 30ರಂದು ರಾಜಘಾಟದಲ್ಲಿ ಕೊನೆಗೊಂಡಿತ್ತು. 6 ಸಾವಿರ ಕಿಮೀ ನಡೆಸಿದ ನನ್ನ ಯಾತ್ರೆ ಸಂದರ್ಭದಲ್ಲಿ ದೇಶದ ಜನರು ಸಂಪೂರ್ಣ ಸಹಮತ ವ್ಯಕ್ತಪಡಿಸಿ ಸ್ಪಂದಿಸಿದ ರೀತಿ ದೆಹಲಿ ಆಡಳಿತಗಾರರನ್ನು ಎಚ್ಚರಿಸುವ ಕೆಲಸ ಮಾಡಿದೆ ಎಂದರು.
ಭಾರತಕ್ಕೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ ಕೃತಕ ಹಿಂದೂಸ್ಥಾನ ಸೃಷ್ಟಿಸಿ ದರ್ಶನ ಮಾಡಿಸಲಾಗುತ್ತಿದೆ. ಟ್ರಂಪ್ ವಿಜಯಪುರ ನಗರಕ್ಕೆ ಆಗಮಿಸಿದ್ದರೆ ಟ್ರಂಪ್ ಅವರ ಸ್ನೇಹಿತ (ಮೋದಿ) ಹೇಳುವ ಭಾರತ ಎಲ್ಲಿದೆ ಎನ್ನುವುದು ತಿಳಿಯುತ್ತಿತ್ತು ಎಂದು ಗೇಲಿ ಮಾಡಿದರು. ಸೈಯ್ಯದ್ ತನ್ವೀರಪೀರಾ ಹಾಶ್ಮಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ.ಇಬ್ರಾಹಿಂ, ರಮೇಶಕುಮಾರ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ