ಚಿತ್ತ ಶುದ್ಧಿಯಿಂದ ಅರಿಷಡ್ವರ್ಗಗಳನ್ನು ಗೆಲ್ಲಲು ಸಾಧ್ಯ


Team Udayavani, Feb 25, 2020, 6:58 PM IST

mumbai-tdy-1

ಮುಂಬಯಿ, ಫೆ. 24: ದೇವಾಲಯಗಳು ಮಾನವನ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾಗಿದ್ದು, ಸಂಸ್ಕೃತಿ, ಸಂಸ್ಕಾರಗಳನ್ನು ಬೋಧಿಸುವ ಗುರುಮಠವಾಗಿ ಬೆಳಗಬೇಕು. ಆರಾಧನೆಗಳು ಸುಪ್ತ ಮನಸ್ಸನ್ನು ಜಾಗೃತಗೊಳಿಸುತ್ತದೆ. ಚಿತ್ತ ಶುದ್ಧಿಯಿಂದ ಮಾತ್ರ ಅರಿಷಡ್ವರ್ಗಗಳನ್ನು ಗೆಲ್ಲಲು ಸಾಧ್ಯ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಾತಿಂಜ ಜನಾರ್ಧನ್‌ ಭಟ್‌ ನುಡಿದರು.

ಫೆ. 21ರಂದು ಮೀರಾರೋಡ್‌ ಪೂರ್ವದ ಮೀರಾಗಾಂವ್‌ ಮೀರಾ ಕೋ. ಆಪರೇಟಿವ್‌ ಹೌಸಿಂಗ್‌ ಸೊಸೈಟಿ ಲಿಮಿಟೆಡ್‌, ರಾಷ್ಟ್ರೀಯ ಹೆದ್ದಾರಿ ಸಮೀಪದ ಹೊಟೇಲ್‌ ಅಮರ್‌ ಪ್ಯಾಲೇಸ್‌ ಹಿಂದಿರುವ ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ಶಿವರಾತ್ರಿ ಮಹೋತ್ಸವ, ಭಜನೆ, ಸಾಂಸ್ಕೃತಿಕ ಮತ್ತು ಸಮ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ದಿನವಿಡೀಯ ಭಜನೆ ಸಂಕುಚಿತ ಭಾವನೆಯನ್ನು ದೂರಗೊಳಿಸಿ ಸಮಾನತೆಯ ವಾತಾವರಣ ಸೃಷ್ಠಿಸಿದೆ. ಗತ ಕಾಲದ ಪ್ರತಿ ಮನೆಗಳ ಸಂಜೆಯ ಭಜನೆ ಕ್ಷುಲಕ ಮನಃ ಸ್ತಾಪವನ್ನು ದೂರಗೊಳಿಸುವ ಮೂಲ ಮಂತ್ರವಾಗಿತ್ತು. ಅದನ್ನು ಪುನರ್‌ ಚೇತನದ ಮೂಲಕ ಅನುಷ್ಠಾನಗೊಳಿಸಿದರೆ ಉತ್ತಮ ಬಾಂಧವ್ಯ ವೃದ್ದಿಸಲು ಸಾಧ್ಯ ಎಂದು ಹೇಳಿದ ಅವರು ಭಕ್ತರಿಗೆ ಪ್ರಸಾದ ನೀಡಿ ಹರಸಿ ಮಹಾ ಶಿವರಾತ್ರಿಯ ಶುಭಾಶಯ ಕೋರಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಸಾಂತಿಂಜ ಮಾಧವ ಭಟ್‌ ಅವರ ಪೌರೋಹಿತ್ಯದಲ್ಲಿ ರುದ್ರಾಭಿಷೇಕ, ಕ್ಷೀರಾಭಿಷೇಕ ಮತ್ತು ಮಧ್ಯಾಹ್ನ ಮಹಾಪೂಜೆ ನಡೆಯಿತು. ದಿನ ಪೂರ್ತಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನ ಮಂಡಳಿ ಮೀರಾಗಾಂವ್‌, ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌, ಬಂಟ್ಸ್‌ ಫೋರಮ್‌ ಮೀರಾರೋಡ್‌, ಶ್ರೀ ವಿಠಲ ಭಜನ ಮಂಡಳಿ ಮೀರಾರೋಡ್‌, ಶ್ರೀ ಹನುಮಾನ್‌ ಚಿತ್ತ  ಶುದ್ಧಿ ಯಿಂದ ಅರಿಷಡ್ವರ್ಗಗಳನ್ನು  ಗೆಲ್ಲಲು ಸಾಧ್ಯ ಭಜನ ಮಂಡಳಿ ಭಾಯಂದರ್‌, ಶ್ರೀ ಹನುಮಾನ್‌ ಭಜನ ಮಂಡಳಿ ದಹಿಸರ್‌, ಬಂಟ್ಸ್‌ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿ, ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿ ಮೀರಾರೋಡ್‌, ಅಹಲ್ಯಾ ನಿಮ್ರಾಜ್‌ ಶಿಷ್ಯರ ಭಜನ ತಂಡಗಳು ಪಾಲ್ಗೊಂಡಿದ್ದವು.

ರಾತ್ರಿ  ಮಹಾ ರಂಗಪೂಜೆ, ಪರಿವಾರ ದೇವರ ವಿಶೇಷ ಪೂಜೆಯ ಬಳಿಕ ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ದೇವಾಲದ ಆಡಳಿತ ಮೊಕ್ತೇಸರ ಶಿಮಂತೂರು ಮಜಲಗುತ್ತು ಬಾಬಾ ರಂಜನ್‌ ಶೆಟ್ಟಿ, ಸ್ಥಾಪಕ ಕೃಷ್ಣ ಶೆಟ್ಟಿ, ಕಾರ್ಯದರ್ಶಿ ಪ್ರಮೋದ್‌ ವಿ. ಮಾತ್ರೆ, ಕೋಶಾಧಿಕಾರಿ ವೇಂಕಟೇಶ್‌ ಪಾಟೀಲ್‌ ಟ್ರಸ್ಟಿಗಳಾದ ಸುಂದರ ಶೆಟ್ಟಿಗಾರ್‌, ವೆಂಕಟೇಶ ಪಾಟೀಲ್‌, ಅನಿಲ್‌ ಶೆಟ್ಟಿ, ಪ್ರಸನ್ನ ಶೆಟ್ಟಿ ಕುರ್ಕಾಲ್‌, ಪ್ರಸನ್ನ ಶೆಟ್ಟಿ ಬೋಳ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಭಜನೆಯ ಗುರು ಶ್ರೀಧರ ಶೆಟ್ಟಿ ಮೀರಾರೋಡ್‌, ತಬಲಾ ವಾದಕ ಶ್ರೀಕಾಂತ್‌, ಭರತ ನಾಟ್ಯ ಪ್ರದರ್ಶಿಸಿದ ಖುಷಿ ಹರೀಶ್‌ ಶೆಟ್ಟಿ, ಮತ್ತು ಖುಷಿ ಅಜಿತ್‌ ಶೆಟ್ಟಿ, ವಿಶ್ವ ಡ್ಯಾನ್ಸ್‌ ಅಕಾಡೆಮಿಯ ಸಚಿನ್‌ ಜಾಧವ್‌, ಕಾರ್ಯಕ್ರಮ ನಿರೂಪಕ, ಚಲನಚಿತ್ರ, ರಂಗ ನಟ ಜಿ. ಕೆ. ಕೆಂಚನಕೆರೆ ಮತ್ತು ಲೇಖಕ ಅರುಣ್‌ ಕುಮಾರ್‌ ಶೆಟ್ಟಿ ಎರ್ಮಾಳ್‌ ಅವರನ್ನು ಗಣ್ಯರು ಗೌರವಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ಮತ್ತು ಪ್ರಾದೇಶಿಕ ನೃತ್ಯ ಪ್ರದರ್ಶನಗೊಂಡಿತು. ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‌ ಸದಸ್ಯರು ಮತ್ತು ಮೀರಾ ಸೊಸೈಟಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಭಕ್ತಾಭಿಮಾನಿಗಳು, ತುಳು ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಜಾತೀಯ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.

 

ಚಿತ್ರ-ವರದಿ: ರಮೇಶ ಅಮೀನ್

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.