ಬಾಳೆದಿಂಡಿನ ಸವಿರುಚಿ


Team Udayavani, Feb 26, 2020, 5:00 AM IST

cha-9

ಬಾಳೆದಿಂಡನ್ನು ಅಡುಗೆಯಲ್ಲಿ ಬಳಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿ ಅತ್ಯಧಿಕ ನಾರಿನಂಶವಿದ್ದು, ಮಲಬದ್ಧತೆ ನಿವಾರಣೆಗೆ ಸಹಕಾರಿ. ಬಾಳೆದಿಂಡಿನಲ್ಲಿ ವಿಟಮಿನ್‌ ಬಿ6 ಇರುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್‌ ಅನ್ನು ಹೆಚ್ಚಿಸುತ್ತದೆ. ದಿಂಡನ್ನು ಬಳಸಿ ಮೊಸರು ಬಜ್ಜಿ, ಕೋಸಂಬರಿ, ಪಲ್ಯ ಮುಂತಾದ ಅಡುಗೆಗಳನ್ನು ಮಾಡಬಹುದಾಗಿದೆ.

1. ಮೊಸರುಬಜ್ಜಿ
ಬೇಕಾಗುವ ಪದಾರ್ಥ: ಬಾಳೆದಿಂಡು ಹೆಚ್ಚಿದ್ದು- 1 ಕಪ್‌, ಮೊಸರು- 2 ಕಪ್‌, ಹಸಿಮೆಣಸಿನಕಾಯಿ- 3, ಉದ್ದಿನಬೇಳೆ- 1 ಚಮಚ, ಸಾಸಿವೆ- ಅರ್ಧ ಚಮಚ, ಕರಿಬೇವು- 6, ರುಚಿಗೆ ಉಪ್ಪು, ಒಗ್ಗರಣೆಗೆ ಎಣ್ಣೆ- 2 ಚಮಚ.

ಮಾಡುವ ವಿಧಾನ: ಬಾಳೆದಿಂಡಿನ ಸಿಪ್ಪೆ ತೆಗೆದು, ಸಣ್ಣಗೆ ಹೆಚ್ಚಿಕೊಳ್ಳಿ. ಇದನ್ನು ಮೊಸರಿಗೆ ಹಾಕಿಡಿ. ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಇದನ್ನು ಬಾಳೆದಿಂಡು ಹಾಕಿದ ಮೊಸರಿಗೆ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೂಡಿಸಿ.

2. ಪಲ್ಯ
ಬೇಕಾಗುವ ಪದಾರ್ಥ: ಹೆಚ್ಚಿದ ಬಾಳೆದಿಂಡು- 2 ಕಪ್‌, ಕೊತ್ತಂಬರಿ ಸೊಪ್ಪು- ಅರ್ಧ ಕಪ್‌, ಕರಿಬೇವು, ಕಾಯಿತುರಿ- ಅರ್ಧ ಕಪ್‌, ಸಾಸಿವೆ, ಉದ್ದಿನಬೇಳೆ, ಹಸಿಮೆಣಸಿನಕಾಯಿ- 5, ಅರಿಶಿಣ, ಎಣ್ಣೆ- 3 ಚಮಚ.

ಮಾಡುವ ವಿಧಾನ: ಬಾಳೆದಿಂಡಿನ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಂಡು ನೀರಿನಲ್ಲಿ ಹಾಕಿಡಿ. ಒಂದು ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಉದ್ದಿನಬೇಳೆ ಹಾಕಿ ಒಗ್ಗರಣೆ ಮಾಡಿ. ಇದಕ್ಕೆ ಹೆಚ್ಚಿದ ಹಸಿಮೆಣಸಿನಕಾಯಿ, ಬಾಳೆದಿಂಡು, ಅರಿಶಿನ ಹಾಕಿ ಕೂಡಿಸಿ. ಇದಕ್ಕೆ ಒಂದು ಕಪ್‌ ನೀರು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೂಡಿಸಿ ಹದವಾಗಿ ಬೇಯಿಸಿ. ಬೆಂದ ನಂತರ ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಕಿ 2 ನಿಮಿಷ ಬೇಯಿಸಿ.

3. ಗೊಜ್ಜು
ಬೇಕಾಗುವ ಪದಾರ್ಥ: ಬಾಳೆದಿಂಡು- 2 ಕಪ್‌, ಕಡಲೆಕಾಳು- 1 ಕಪ್‌, ಜೀರಿಗೆ- 1 ಚಮಚ, ಧನಿಯ- 2 ಚಮಚ, ಅಚ್ಚ ಖಾರದಪುಡಿ- 1 ಚಮಚ, ಈರುಳ್ಳಿ-2, ಕರಿಬೇವು, ಹಸಿಮೆಣಸಿನಕಾಯಿ-2, ಕೊತ್ತಂಬರಿ ಸೊಪ್ಪು, ರುಚಿಗೆ ಉಪ್ಪು. ಎಣ್ಣೆ- ಅರ್ಧ ಕಪ್‌.

ಮಾಡುವ ವಿಧಾನ: ರಾತ್ರಿ ಕಡಲೆಕಾಳನ್ನು ನೀರಿನಲ್ಲಿ ನೆನೆಸಿ, ಬೆಳಗ್ಗೆ ಕುಕ್ಕರ್‌ನಲ್ಲಿ 2 ವಿಷಲ್‌ ಕೂಗಿಸಿ. ಇದು ಆರಿದ ನಂತರ ಹೆಚ್ಚಿದ ಬಾಳೆದಿಂಡು, ಉಪ್ಪು ಹಾಕಿ ಮತ್ತೂಂದು ವಿಷಲ್‌ ಕೂಗಿಸಿ. ಒಂದು ಬಾಣಲೆಗೆ 2 ಚಮಚ ಎಣ್ಣೆ ಹಾಕಿ ಧನಿಯವನ್ನು ಘಮ್ಮೆನ್ನುವವರೆಗೆ ಹುರಿಯಿರಿ. ನಂತರ ಅದೇ ಬಾಣಲೆಗೆ ಜೀರಿಗೆ, ಕರಿಬೇವು ಹಾಕಿ ಹುರಿಯಿರಿ. ಹೆಚ್ಚಿದ ಈರುಳ್ಳಿ ಹಾಕಿ ಹೊಂಬಣ್ಣ ಬರುವವರೆಗೆ ಫ್ರೆç ಮಾಡಿ. ಮಿಕ್ಸಿ ಜಾರ್‌ನಲ್ಲಿ ಹುರಿದ ಧನಿಯ, ಜೀರಿಗೆ- ಕರಿಬೇವು, ಕಾಯಿತುರಿ ಹಾಕಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿ. ಇದನ್ನು ಕುಕ್ಕರ್‌ಗೆ ಹಾಕಿ ಕುದಿಯಲು ಇಡಿ. ಅಚ್ಚಖಾರದಪುಡಿ, ಉಪ್ಪು ಬೇಕಿದ್ದಲ್ಲಿ ಸೇರಿಸಿ ಕುದಿಸಿ. ಇದನ್ನು ಹೆಚ್ಚಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

4. ಚಾಟ್‌
ಬೇಕಾಗುವ ಪದಾರ್ಥ: ಬಾಳೆದಿಂಡು ಸಣ್ಣಗೆ ಹೆಚ್ಚಿದ್ದು- 2 ಕಪ್‌, ಹೆಚ್ಚಿದ ಈರುಳ್ಳಿ- 1 ಕಪ್‌, ಹೆಚ್ಚಿದ ಟೊಮೇಟೊ- ಅರ್ಧ ಕಪ್‌, ಕೊತ್ತಂಬರಿ ಸೊಪ್ಪು- ಅರ್ಧ ಕಪ್‌, ಗರಂ ಮಸಾಲ- ಅರ್ಧ ಚಮಚ, ಅಚ್ಚಖಾರದಪುಡಿ- 2 ಚಮಚ, ಚಾಟ್‌ ಮಸಾಲ- ಅರ್ಧ ಚಮಚ, ಉಪ್ಪು- ರುಚಿಗೆ, ಸೇವ್‌- ಅರ್ಧ ಕಪ್‌, ಕ್ಯಾರೆಟ್‌ ತುರಿ- ಅರ್ಧ ಕಪ್‌.

ಮಾಡುವ ವಿಧಾನ: ಹೆಚ್ಚಿದ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪನ್ನು ಕೂಡಿಸಿ. ಅದಕ್ಕೆ ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಸೇವ್‌ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸರ್ವ್‌ ಮಾಡಿ. ಸಂಜೆಗೆ ಕಾಫಿ ಜೊತೆಗೆ ಸವಿಯಲು ಚೆನ್ನಾಗಿರುತ್ತದೆ.

- ಶ್ರುತಿ ಕೆ. ಎಸ್‌.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.