ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸದ ಬಿಎಂಟಿಸಿ
Team Udayavani, Feb 26, 2020, 3:05 AM IST
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅನುಮೋದಿಸಿ ದ್ದು, ಪ್ರಯಾಣದರ ಶೇ.12ರಷ್ಟು ಹೆಚ್ಚಾಗಿದೆ. ಆದರೆ, ಪ್ರಯಾಣಿಕರ ವಿರೋಧದ ಹಿನ್ನೆಲೆಯಲ್ಲಿ ಬಿಎಂಟಿಸಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿರಲಿಲ್ಲ ಎಂದು ತಿಳಿದುಬಂದಿದೆ.
ಪ್ರಯಾಣಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಬಿಎಂಟಿಸಿ ದರ ಏರಿಕೆಗಾಗಿ ಯಾವುದೇ ಪ್ರಸ್ತಾವನೆ ಸಲ್ಲಿಸಿರಲಿಲ್ಲ. ಹಾಗಾಗಿ, ಸರ್ಕಾರವೂ ಅದನ್ನು ಹೊರಗಿಟ್ಟಿದೆ. ಈಗ ಆರ್ಥಿಕ ಚೇತರಿಕೆಗಾಗಿ ಸಂಸ್ಥೆಯು ಬಜೆಟ್ನತ್ತ ಚಿತ್ತ ನೆಟ್ಟಿದೆ.
ಹೊಣೆಗಾರಿಕೆಗಳು, ಸಾಲಗಳು ಸೇರಿದಂತೆ ಬಿಎಂಟಿಸಿ ಮೇಲೆ ಸುಮಾರು 1,500 ಕೋಟಿ ರೂ. ಹೊರೆ ಇದೆ. ವಿಮೆ ಮೊತ್ತ, ತುಟ್ಟಿಭತ್ಯೆ ಮತ್ತಿತರ ಸೌಲಭ್ಯಗಳನ್ನು ನೌಕರರಿಗೆ ನೀಡಬೇಕಿದೆ. ಈ ಮಧ್ಯೆ ಪ್ರತಿ ದಿನ ನಷ್ಟದಲ್ಲಿ ಸಾಗುತ್ತಿದೆ. ಹೊಸ ಬಸ್ಗಳ ಖರೀದಿಯೂ ಆಗುತ್ತಿಲ್ಲ.
ಮತ್ತೂಂದೆಡೆ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕೆಗೆ ಸಂಸ್ಥೆಯು ಸರ್ಕಾರದ ಸಹಾಯ ಹಸ್ತ ಎದುರುನೋಡುತ್ತಿದೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಬಿಎಂಟಿಸಿ ಬಸ್ ದರ ಏರಿಕೆ ಮಾಡುವುದಿಲ್ಲ ಎಂದೂ ಹೇಳಿದ್ದರು.
ಇದರೊಂದಿಗೆ ನೇರ ನೆರವಿನ ಆಸೆ ಹುಸಿಯಾಗಿದೆ. ಪರೋಕ್ಷವಾಗಿ ಅಂದರೆ ತೆರಿಗೆ ವಿನಾಯ್ತಿ, ಬಸ್ ಖರೀದಿಗೆ ಅನುದಾನದಂತಹ ಕೊಡುಗೆಯನ್ನು ಬಜೆಟ್ನಲ್ಲಿ ನೀಡುವ ನಿರೀಕ್ಷೆ ಇದೆ. ಒಂದು ವೇಳೆ ಅದೂ ಇಲ್ಲದಿದ್ದರೆ, ಸಂಸ್ಥೆ ನಡೆಸುವುದು ಕಷ್ಟವಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ