ಬೆಂಗಳೂರು -ವಾಸ್ಕೋ ರೈಲಿನ ದಿನಾಂಕ ಇಂದು ನಿರ್ಧಾರ?

ಇಂದಿನಿಂದ ವೇಳಾಪಟ್ಟಿ ಸಮಿತಿ ಸಭೆ

Team Udayavani, Feb 26, 2020, 7:00 AM IST

vasco

ಕುಂದಾಪುರ: ಬೆಂಗಳೂರು- ವಾಸ್ಕೋ ರೈಲು ಸಂಚಾರ ಆರಂಭ ಯಾವತ್ತು ಎಂಬ ಪ್ರಶ್ನೆಗೆ ಬುಧವಾರ ಬಹುತೇಕ ಉತ್ತರ ಸಿಗುವ ಸಾಧ್ಯತೆ ಗಳಿವೆ.

ಭಾರತೀಯ ರೈಲ್ವೇಯ ವೇಳಾ ಪಟ್ಟಿ ಸಮಿತಿ (ಐಆರ್‌ಟಿಸಿ)ಯ ಸಭೆ ಫೆ. 26, 27 ಮತ್ತು 28ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಇಲ್ಲಿ ವಾಸ್ಕೋ ರೈಲು ಓಡಾಟ ಆರಂಭ ದಿನಾಂಕ ನಿರ್ಧಾರ ಆಗಲಿದೆ.

ರೈಲಿನ ಕೋಚ್‌ಗಳು ಬೆಂಗಳೂರಿಗೆ ಆಗಮಿಸಿದ್ದು, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿದ್ದರೂ ರೈಲು ಓಡುತ್ತಿಲ್ಲ. ರೈಲ್ವೇ ಅಧಿಕಾರಿಗಳ ತೊಡರುಗಾಲೇ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ರಾಜಕೀಯ ಇಚ್ಛಾಶಕ್ತಿ ಮತ್ತು ಸಾಮಾಜಿಕ ಬದ್ಧತೆಯ ಮೂಲಕ ಒತ್ತಡ ಹೇರಲಾಗುತ್ತಿದೆ.

ಏನಿದು ಸಭೆ?
ಎಲ್ಲ ರೈಲ್ವೇ ವಿಭಾಗ ಮುಖ್ಯಸ್ಥರು, ಪ್ರತಿನಿಧಿಗಳು ಸಭೆಗೆ ಆಗಮಿಸುತ್ತಾರೆ. ವಿವಿಧ ವಲಯಗಳ ಮಾರ್ಗಗಳಲ್ಲಿ ಹೊಸ ರೈಲುಗಳ ಕುರಿತು ಮಾಹಿತಿ ವಿನಿಮಯ ನಡೆಸಿ, ಹಾಲಿ ರೈಲು, ಗೂಡ್ಸ್‌ ರೈಲುಗಳ ಸಮಯ ಹೊಂದಾಣಿಕೆ ಮಾಡಿ, ಹಳಿ ಬಿಟ್ಟು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತದೆ. ಬೆಂಗಳೂರು – ವಾಸ್ಕೊ ರೈಲಿನ ಬಗೆಗೂ ಚರ್ಚೆ ನಡೆಯಲಿದೆ. ಇಲ್ಲಿ ಒಪ್ಪಿಗೆ ದೊರೆತರೆ ಸಮಸ್ಯೆ ಸುಲಭ ವಾಗಿ ಬಗೆಹರಿದಂತೆ. ಇಲ್ಲದಿದ್ದರೆ ಮಾ. 2ರಂದು ಸಚಿವರ ಉಪಸ್ಥಿತಿಯಲ್ಲಿ ದಿಲ್ಲಿಯಲ್ಲಿ ನಡೆಯುವ ಸಭೆಯಲ್ಲಿ ಹಗ್ಗಜಗ್ಗಾಟ ನಡೆಯುತ್ತದೆ. ಹೀಗಾಗಿ ಈ ದಿನ ಮಹತ್ವದ್ದಾಗಿದೆ.

ಸಮಯ ಕೋರಿಕೆ: ಕೇಂದ್ರ ಸಚಿವರಲ್ಲಿ ರೈಲಿಗೆ ಚಾಲನೆಗೆ ದಿನ ನಿಗದಿಗೆ ಕೇಳಿಕೊಳ್ಳಲಾಗಿದೆ, ಉಡುಪಿ ಅಥವಾ ಬೆಂಗಳೂರಿನಲ್ಲಾದರೂ ಆಗಬಹುದು. ಶೀಘ್ರ ಚಾಲನೆ ನೀಡಲು ವಿನಂತಿಸಿದ್ದೇನೆ ಎಂದು ಸಂಸದೆ ಶೋಭಾ ಹೇಳಿದ್ದಾರೆ.

ರೈಲ್ವೇ ಹಿರಿಯ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಸಚಿವ ಸುರೇಶ್‌ ಅಂಗಡಿಯವರೂ ಭರವಸೆ ನೀಡಿದ್ದಾರೆ. ಹೊಸ ರೈಲು ಮಂಜೂರಾತಿ ಸಂದರ್ಭದ ಸಭೆಗಳಲ್ಲಿ ನಾನು ಭಾಗವಹಿಸಿದ್ದೆ.
– ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದ

ವೇಳಾಪಟ್ಟಿ ನಿಗದಿಯಾದ ಕಾರಣ ಶೀಘ್ರ ಚಾಲನೆ ನೀಡಲಿ. ಎಲ್ಲರಿಗೂ ಪ್ರಯೋಜನ ದೊರೆಯಲಿ.
– ಗಣೇಶ್‌ ಪುತ್ರನ್‌, ಅಧ್ಯಕ್ಷರು, ರೈಲು ಪ್ರ. ಹಿತರಕ್ಷಣ ಸಮಿತಿ, ಕುಂದಾಪುರ

ಆರಂಭಕ್ಕೆ ಇರುವ ಅಡ್ಡಿ
ಬೆಂಗಳೂರಿನಿಂದ ವಾಸ್ಕೋಗೆ ಚಲಿಸುವ ರೈಲು ದಕ್ಷಿಣ, ನೈಋತ್ಯ ಮತ್ತು ಕೊಂಕಣ ರೈಲು ಮಾರ್ಗಗಳನ್ನು ಬಳಸಬೇಕು. ಕೊಂಕಣ ರೈಲಿನ ಮಾರ್ಗದಲ್ಲಿ ಹೆಚ್ಚಾಗಿ ಗೂಡ್ಸ್‌ ರೈಲುಗಳು ಚಲಿಸುವುದರಿಂದ ಹಸಿರು ನಿಶಾನೆ ತೋರಿ ಸಿಲ್ಲ.

ಕೊಂಕಣ ಮಾರ್ಗದ ಮೂಲಕ 40ರಷ್ಟು ರೈಲುಗಳಲ್ಲಿ ಸುಮಾರು 33 ಕೇರಳ, ಉತ್ತರ ಭಾರತಕ್ಕೆ ತೆರಳುತ್ತವೆ. ಜನರ, ಸಂಘಟನೆಗಳ, ಜನಪ್ರತಿನಿಧಿಗಳ ಆಸಕ್ತಿಯಿಂದ ಪ್ರಯಾಣಿಕ ರೈಲು ದೊರೆ ತಿದೆಯೇ ವಿನಾ ನಿಗಮವು ಸ್ವ ಹಿತಾಸಕ್ತಿ ಯಿಂದ ಒಂದು ಪ್ರಯಾಣಿಕರ ರೈಲನ್ನೂ ಆರಂಭಿಸಿಲ್ಲ ಎಂಬ ಆರೋಪವಿದೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.