ಶಿವಾಜಿ ಗೆಲುವಿಗೆ ರಮೇಶ್‌ ಖುಷಿ‌

ಎರಡನೇ ವಾರದತ್ತ ಸಕ್ಸಸ್‌ಫ‌ುಲ್‌ ರನ್ನಿಂಗ್‌

Team Udayavani, Feb 27, 2020, 7:03 AM IST

Shivaji-Surathkal

“ನಾವು ಇಷ್ಟಪಟ್ಟ ಕೆಲಸವನ್ನು, ಇಷ್ಟಪಡುವ ಜನರ ಜೊತೆ, ಇಷ್ಟಪಡುವ ಜಾಗದಲ್ಲಿ, ಇಷ್ಟಪಟ್ಟು ಮಾಡುವುದೇ ಯಶಸ್ಸು. ನಾವು ಇಷ್ಟಪಟ್ಟು ಮಾಡಿದ ಕೆಲಸವನ್ನು ಜನರೂ ಇಷ್ಟಪಟ್ಟರೆ ಅದು ದೊಡ್ಡ ಯಶಸ್ಸು…’ ಹೀಗೆ ಹೇಳಿದ್ದು ರಮೇಶ್‌ ಅರವಿಂದ್‌. ಅವರು ಹೀಗೆ ಹೇಳ್ಳೋಕೆ ಕಾರಣ, “ಶಿವಾಜಿ ಸುರತ್ಕಲ್‌’ ಚಿತ್ರ. ಹೌದು, ರಮೇಶ್‌ ನಟನೆಯ 101ನೇ ಚಿತ್ರ “ಶಿವಾಜಿ ಸುರತ್ಕಲ್‌’ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ಉತ್ತಮ ಪ್ರದರ್ಶನದ ಜೊತೆ ಪ್ರೇಕ್ಷಕರು, ವಿಮರ್ಶಕರಿಂದ ಮೆಚ್ಚುಗೆ ಪಡೆದು 2ನೇ ವಾರದತ್ತ ಮುನ್ನಡೆಯುತ್ತಿದೆ.

ಈ ಕುರಿತು ಸಂತಸ ಹಂಚಿಕೊಂಡ ರಮೇಶ್‌, ಯಶಸ್ಸನ್ನು ಹೇಳಿಕೊಂಡ ಪರಿ ಹೀಗಿತ್ತು. “ಇತ್ತೀಚಿನ ವರ್ಷಗಳಲ್ಲಿ ಕೃತಕವಲ್ಲದ ಒಂದು ಸಕ್ಸಸ್‌ ಬರಬೇಕು ಎಂದುಕೊಂಡಿದ್ದೆ. ಅದು ಈಗ “ಶಿವಾಜಿ ಸುರತ್ಕಲ್‌’ ಮೂಲಕ ಈಡೇರಿದೆ. ಥಿಯೇಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಿಯನ್ಸ್‌ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂದೆ ಇದಕ್ಕಿಂತಲೂ ಒಳ್ಳೆಯ ಸಿನಿಮಾ ಮಾಡಬೇಕೆಂಬ ಜವಬ್ದಾರಿ ಜಾಸ್ತಿ ಆಗಿದೆ. ಇನ್ನು ಸಿನಿಮಾವನ್ನು ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಮೆಚ್ಚಿಕೊಂಡಿದ್ದು ಖುಷಿಯಾಯ್ತು. ಟಿಕ್‌ಟಾಕ್‌ನಿಂದಲೂ ಸಿನಿಮಾಕ್ಕೆ ಒಂದಷ್ಟು ಪ್ರಚಾರ ಸಿಕ್ಕಿದೆ.

ಮುಂದೇ ಇಂಥ ಇನ್ನಷ್ಟು ಪಾತ್ರಗಳು ಬಂದರೂ ಬರಬಹುದು’ ಎನ್ನುವುದು ರಮೇಶ್‌ ಮಾತು. ಮೊದಲ ವಾರ ಸುಮಾರು 80 ಕೇಂದ್ರಗಳಲ್ಲಿ ಬಿಡುಗಡೆಯಾಗಿದ್ದ “ಶಿವಾಜಿ ಸುರತ್ಕಲ್‌’, 2ನೇ ವಾರದಿಂದ ಸುಮಾರು 120 ಕೇಂದ್ರಗಳಲ್ಲಿ ಪ್ರದರ್ಶನವಾಗುತ್ತಿದೆ. ಪರಭಾಷೆ ಚಿತ್ರಮಂದಿರವೆಂದು ಹೇಳುತ್ತಿದ್ದ ಊರ್ವಶಿ ಟಾಕೀಸ್‌ನಲ್ಲಿಯೂ ಚಿತ್ರ ಶೇ.80ರಷ್ಟು ಹೌಸ್‌ಫ‌ುಲ್‌ ಆಗಿ ಪ್ರದರ್ಶನವಾಗುತ್ತಿದೆ. ಆಸ್ಟ್ರೇಲಿಯಾ, ಯುಕೆಯಲ್ಲೂ 30 ಸೆಂಟರ್‌ಗಳಲ್ಲಿ ಬಿಡುಗಡೆಗೊಂಡಿದೆ ಎಂಬುದು ಚಿತ್ರತಂಡದ ಹೇಳಿಕೆ.

ಖುಷಿಯಲ್ಲಿರುವ ನಿರ್ದೇಶಕ ಆಕಾಶ್‌ ಶ್ರೀವತ್ಸ ಅವರು, “ಈಗಾಗಲೇ “ಬದ್ಮಾಶ್‌’ ಚಿತ್ರದ ನಿರ್ಮಾಪಕರು ಯಎಸ್‌ ಜನರಿಗೆ ತೋರಿಸಲು ಹಕ್ಕು ಪಡೆದಿದ್ದಾರೆ. ಬಾಲಿವುಡ್‌ ದೊಡ್ಡ ಸಂಸ್ಥೆಯೊಂದು ರಿಮೇಕ್‌ ಮಾಡಲು ಉತ್ಸುಕವಾಗಿದೆ. ಇದರ ಜೊತೆಗೆ ತೆಲುಗು, ತಮಿಳಿನಿಂದಲೂ ಈ ಚಿತ್ರ ರಿಮೇಕ್‌ ಮಾಡುವ ಬಗ್ಗೆ ಕರೆ ಬಂದಿದೆ. ಬಹುಶಃ ಅಲ್ಲಿಯೂ ನಿರ್ದೇಶನ ಮಾಡಬಹುದೇನೋ ಗೊತ್ತಿಲ್ಲ. ಸಣ್ಣ ಸಣ್ಣ ಪಾತ್ರ ಗುರುತಿಸಿ ಕೆಲಸ ಮಾಡಿದ್ದು ಸಾರ್ಥಕವಾಯಿತು’ ಎಂಬುದು ಅವರ ಮಾತು. ನಿರ್ಮಾಪಕ ಅನೂಪ್‌ ಗೌಡ, “ಇದೇ ರೀತಿ ಮುಂದೆ‌ಯೂ ಸಹಕಾರ ಇರಲಿ’ ಎಂಬ ಮನವಿ ಇಟ್ಟರು. ಅಂದು ಬಂದಿದ್ದ ಚಿತ್ರತಂಡದವರು ಸಿನಿಮಾಗೆ ಸಿಗುತ್ತಿರುವ ಮೆಚ್ಚುಗೆ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.