ಕಾಲಮಿತಿಯೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಶಾಸಕ ಕೆ.ಜಿ. ಬೋಪಯ್ಯ
Team Udayavani, Feb 27, 2020, 5:06 AM IST
ಮಡಿಕೇರಿ: ಜಿಲ್ಲೆಯ ಗಡಿ ಭಾಗವಾದ ಕರಿಕೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ರಸ್ತೆ ಕಾಮಗಾರಿಗಳಿಗೆ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ 2019-20ನೇ ಸಾಲಿನ ಹಾನಿಯಾಗಿರುವ ರಸ್ತೆಗಳಾದ ಮಡಿಕೇರಿ ತಾಲೂಕಿನ ಭಾಗಮಂಡಲ-ಕರಿಕೆ ರಸ್ತೆ 13.50 ಕಿ.ಮೀ ನಿಂದ 16 ಕಿ.ಮೀ ವರೆಗೆ 60 ಲಕ್ಷ ರೂ. ವೆಚ್ಚದಲ್ಲಿ 2 ಕಿ.ಮೀ. ಮರು ಡಾಮರೀಕರಣ ಕಾಮಗಾರಿ. 2018-19 ನೇ ಸಾಲಿನ ಅಪೆಂಡಿಕ್ಸ್-ಇ ಅಡಿಯಲ್ಲಿ ಮಡಿಕೇರಿ ತಾಲೂಕು ಭಾಗಮಂಡಲ-ಕರಿಕೆ ರಸ್ತೆ ಸರಪಳಿ 28 ಕಿ.ಮೀ ನಿಂದ 30.30 ಕಿ.ಮೀ. ವರೆಗೆ 2 ಕೋಟಿ ರೂ. ವೆಚ್ಚದಲ್ಲಿ 2 ಕಿ.ಮೀ.ಗಳ ರಸ್ತೆ ಸರಪಳಿ ಅಭಿವೃದ್ಧಿ ಕಾಮಗಾರಿ, 2019-20ನೇ ಸಾಲಿನಲ್ಲಿ ಭಾಗಮಂಡಲ-ಕರಿಕೆ ನಡುವೆ 20 ಕಿ.ಮೀ. ನಿಂದ 23 ಕಿ.ಮೀ ವರೆಗೆ 75 ಲಕ್ಷ ರೂ. ವೆಚ್ಚದಲ್ಲಿ 2 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗಳು.
ಮಳೆ ಹಾನಿ ದುರಸ್ತಿಯಡಿ ಜಿಲ್ಲಾ ಮತ್ತು ಇತರೆ ರಸ್ತೆ ಕಾಮಗಾರಿಗಳಾದ ಮಡಿಕೇರಿ ತಾಲೂಕಿನ ಭಾಗಮಂಡಲ-ಕರಿಕೆ ರಸ್ತೆಯ 16 ಕಿ.ಮೀ.ನಿಂದ 18 ಕಿ.ಮೀ ವರೆಗೆ ಮತ್ತು 26 ಕಿ.ಮೀ ನಿಂದ 27 ಕಿ.ಮೀ ವರೆಗೆ 1 ಕೋಟಿ ರೂ. ವೆಚ್ಚದಲ್ಲಿ 3 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿ, ಭಾಗಮಂಡಲ-ಕರಿಕೆ ರಸ್ತೆ 23 ಕಿ.ಮೀ ನಿಂದ 25 ಕಿ.ಮೀ ವರೆಗೆ ಭಾರಿ ಮಳೆಯಿಂದಾಗಿ ಹಾಳಾಗಿರುವ ಭಾಗಗಳನ್ನು 75 ಲಕ್ಷ ರೂ. ವೆಚ್ಚದಲ್ಲಿ 2 ಕಿ.ಮೀ. ರಸ್ತೆ ದುರಸ್ತಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು 5.10 ಕೋಟಿ ರೂ. ವೆಚ್ಚದಲ್ಲಿ 11.30 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಕರಿಕೆಯು ಕೊಡಗು-ಕೇರಳ ಗಡಿ ಭಾಗದ ಗ್ರಾಮವಾಗಿದ್ದು ಸಕಾಲದಲ್ಲಿ ಅಭಿವೃದ್ಧಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯರಾದ ಹೊಸಮನೆ ಕವಿತಾ ಪ್ರಭಾಕರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಚ್.ಬಿ. ಶಿವರಾಂ, ಕಿರಿಯ ಅಭಿಯಂತರರಾದ ದೇವರಾಜ್, ಕರಿಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಬಿಪಿನ್ ಗ್ರಾಮಸ್ಥರಾದ ಹೊಸಮನೆ ಹರೀಶ್, ಆರ್.ಎಂ.ಸಿ. ಸದಸ್ಯರಾದ ಕೆ.ಎ. ನಾರಾಯಣ್ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?