ಮಳೆಹಾನಿ ಸಂತ್ರಸ್ತೆಯಿಂದ ಹಣ ಕಸಿದ ಆರೋಪ: ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ


Team Udayavani, Feb 27, 2020, 5:42 AM IST

Z-PROTEST

ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡ ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಂತ್ರಸ್ತ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಪರಿಹಾರದ ಹಣದಲ್ಲಿ ಸುಮಾರು 40 ಸಾವಿರ ರೂ.ಗಳನ್ನು ನಗರಸಭಾ ಸಿಬಂದಿಯೊಬ್ಬರು ಬೆದರಿಕೆವೊಡ್ಡಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರಸಭಾ ಕಚೇರಿ ಎದುರು ದಿಢೀರ್‌ ಧರಣಿ ಕುಳಿತ ವೇದಿಕೆಯ ಪ್ರಮುಖರು ಬಾಕಿ ಉಳಿಸಿಕೊಂಡಿರುವ ಪರಿಹಾರದ ಹಣವನ್ನು ತಕ್ಷಣ ನೀಡಬೇಕು ಮತ್ತು ತಪ್ಪಿತಸ್ಥ ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಸಂಘಟನೆಯ ಅಧ್ಯಕ್ಷ ಪವನ್‌ ಪೆಮ್ಮಯ್ಯ ಮಾತನಾಡಿ, ಚಾಮುಂಡೇಶ್ವರಿ ನಗರ ಬಡಾವಣೆಯ ನೂರ್‌ ಜಹಾನ್‌ ಎಂಬ ಸಂತ್ರಸ್ತ ಮಹಿಳೆಗೆ ಪರಿಹಾರವಾಗಿ ಒಟ್ಟು 1.40 ಲಕ್ಷ ರೂ. ನೀಡಲಾಗಿತ್ತು. ಆದರೆ ಪರಿಹಾರ ವಿತರಣೆಗೆ ಸಂಬಂಧಿಸಿದ ನಗರಸಭೆಯ ಅಧಿಕಾರಿಯೊಬ್ಬರು ಬೆದರಿಕೆಯೊಡ್ಡಿ 40 ಸಾವಿರ ರೂ. ಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು.

ಫ‌ಲಾನುಭವಿಗಳ ಆಯ್ಕೆಯಲ್ಲಿ ಗೊಂದಲಗಳಿದ್ದರೆ ಪರಿಶೀಲಿಸಿ ಪರಿಹಾರ ವಿತರಣೆಯಲ್ಲಿ ಲೋಪವಾಗಿದ್ದರೆ ಸರಿಪಡಿಸಬೇಕು. ಆದರೆ ಏಕಾಏಕಿ ನಗರಸಭೆಯ ಅಧಿಕಾರಿಯೊಬ್ಬರು ದೌರ್ಜನ್ಯದಿಂದ ಸರ್ಕಾರದ ಹಣವನ್ನು ಕಸಿದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ವಿಕಲಚೇತನ ಪುತ್ರನನ್ನು ಹೊಂದಿರುವ ಸಂತ್ರಸ್ತೆ ಅಸಹಾಯಕರಾಗಿದ್ದು, ತತ್‌ಕ್ಷಣ ಹಣವನ್ನು ಮರಳಿಸಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪೌರಾಯುಕ್ತ ರಮೇಶ್‌ ಅವರು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಇಲ್ಲ, ಸೂಕ್ತ ತನಿಖೆ ಕೈಗೊಂಡು ಸಂಬಂಧಿಸಿದ ಅಧಿಕಾರಿಗೆ ನೊಟೀಸ್‌ ನೀಡಲಾಗುವುದು. ನಂತರ ನಿಜಾಂಶ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನ್ಯಾಯ ಸಿಗದಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪವನ್‌ ಪೆಮ್ಮಯ್ಯ ತಿಳಿಸಿದರು.

ಖಜಾಂಚಿ ಉಮೇಶ್‌ ಗೌಡ, ನಿರ್ದೇಶಕ‌ ಪಾಪು ರವಿ, ವಿನು, ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ, ಮಡಿಕೇರಿ ನಗರ ಕಾಂಗ್ರೆಸ್‌ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ಸಂತ್ರಸ್ತೆ ನೂರ್‌ಜಹಾನ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.