ಕೇರಳದ ಕಾಲೇಜುಗಳಲ್ಲಿ ಪ್ರತಿಭಟನೆಗೆ ನಿಷೇಧ
Team Udayavani, Feb 27, 2020, 8:32 AM IST
ಕೊಚ್ಚಿ: ಕೇರಳ ಉಚ್ಚ ನ್ಯಾಯಾಲಯ ಐತಿಹಾಸಿಕ ಆದೇಶವೊಂದನ್ನು ನೀಡಿದೆ. ಕೇರಳದ ಯಾವುದೇ ಶಾಲಾ ಕಾಲೇಜುಗಳಲ್ಲಿ ಇನ್ನು ಧರಣಿ, ಮುಷ್ಕರ, ಬಹಿಷ್ಕಾರದಂತಹ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ನ್ಯಾಯಮೂರ್ತಿ ಪಿ.ಬಿ.ಸುರೇಶ್ ಕುಮಾರ್ ತೀರ್ಪು ನೀಡಿದ್ದಾರೆ.
ಶಾಲಾ ಕಾಲೇಜುಗಳು ಶೈಕ್ಷಣಿಕ ಕೇಂದ್ರಗಳು. ಇಲ್ಲಿ ಪ್ರತಿ ಭಟನೆಯಂತಹ ಕೃತ್ಯಗಳನ್ನು ನಡೆಸಿ, ಇನ್ನಿತರ ವಿದ್ಯಾರ್ಥಿಗಳ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅಧಿಕಾರವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಒಂದು ವೇಳೆ ತೀರ್ಪನ್ನು ಉಲ್ಲಂಘಿಸಿದರೆ ಶಿಕ್ಷೆ ಏನು ಎನ್ನುವುದು ತಿಳಿದುಬಂದಿಲ್ಲ. ಹಲವಾರು ಶಾಲಾಕಾಲೇಜುಗಳ ವ್ಯವಸ್ಥಾಪಕ ಮಂಡಳಿ ಸಲ್ಲಿಸಿದ ಅರ್ಜಿ ಪರಿಗಣಿಸಿ ಉಚ್ಚ ನ್ಯಾಯಾಲಯ ಈ ತೀರ್ಪು ನೀಡಿದೆ.