ಸುಲಲಿತ ಜೀವನ ಸಮೀಕ್ಷೆಯಲ್ಲಿ ಜಿಲ್ಲೆ ನಂ.1
ಸಮೀಕ್ಷೆಯಲ್ಲಿ ಗುರಿ ಮೀರಿ ನಗರದ ಜನತೆ ಭಾಗಿ
Team Udayavani, Feb 27, 2020, 11:31 AM IST
ದಾವಣಗೆರೆ: ಸ್ಮಾರ್ಟ್ಸಿಟಿ ಮಿಷನ್ ಫೆ.1 ರಿಂದ ಪ್ರಾರಂಭಿಸಿರುವ ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ದಾವಣಗೆರೆ ಜಿಲ್ಲಾವಾರು ನಂಬರ್ 1ನೇ ಸ್ಥಾನದಲ್ಲಿದೆ ಎಂದು ಸ್ಮಾರ್ಟ್ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಬಿ. ಮಲ್ಲಾಪುರ ತಿಳಿಸಿದ್ದಾರೆ.
ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ 4,615 ಜನರ ಗುರಿ ನಿಗದಿಪಡಿಸಲಾಗಿತ್ತು. ದಾವಣಗೆರೆಯಲ್ಲಿ 7,852(ಶೇ.170.14) ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಿಗದಿತ ಗುರಿ 90,266 ಜನರಿಗೆ45,083(ಶೇ.50.74) ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ಸರ್ಕಾರದ ಸ್ಮಾರ್ಟ್ಸಿಟಿ ಮಿಷನ್ ನಾಗರಿಕರಿಗೆ ಯೋಗ್ಯವಾದ ಜೀವನ ಮಟ್ಟ ನೀಡುವ ಉದ್ದೇಶದಿಂದ ಸ್ಮಾರ್ಟ್ಸಿಟಿ ಯೋಜನೆಯ ನಗರದಲ್ಲಿ ಶಿಕ್ಷಣ, ಆರೋಗ್ಯ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು, ಸುರಕ್ಷತೆ, ಘನತ್ಯಾಜ್ಯ ನಿರ್ವಹಣೆ ಇತರೆ ವಿಷಯಗಳ ಕುರಿತಾಗಿ ಫೆ.1 ರಿಂದ ಪ್ರಾರಂಭಿಸಿರುವ ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಆಯ್ಕೆಯಾಗಿರುವ ಸ್ಮಾರ್ಟ್ಸಿಟಿ ಯೋಜನೆಯ ಜಿಲ್ಲಾವಾರುನಲ್ಲಿ ಪ್ರಥಮ ಸ್ಥಾನ ಗಳಿಸಿದ್ದರೆ, ದೇಶದ 114 ನಗರಗಳಲ್ಲಿ 40ನೇ ಸ್ಥಾನ, ರಾಜ್ಯವಾರು ನೋಡಿದರೆ ಅರುಣಾಚಲ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 26ನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.
ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ಸಾರ್ವಜನಿಕರು ಫೆ.29ರ ವರೆಗೆ ಭಾಗವಹಿಸಿ, ಅತ್ಯಂತ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ಭಾಗವಹಿಸುವ ಮೂಲಕ ದಾವಣಗೆರೆಯನ್ನು ಮೊದಲನೇ ಸ್ಥಾನಕ್ಕೆ ತರಬೇಕು ಎಂದು ಮನವಿ ಮಾಡಿದರು.
ಸ್ಮಾರ್ಟ್ಸಿಟಿ ಯೋಜನೆ ಸಿಬ್ಬಂದಿ ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಗೆ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ವನಿತಾ ಮತ್ತು ಮಹಿಳಾ ಸಮಾಜ ಒಳಗೊಂಡಂತೆ ಸಾರ್ವಜನಿಕರು ಹೆಚ್ಚಾಗಿ ಸೇರುವ ಕಡೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗುತ್ತಿದೆ. ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದು. ಇಂತಹವರೇ ಭಾಗವಹಿಸಬೇಕು ಎಂದು ಇಲ್ಲ ಎಂದು ತಿಳಿಸಿದರು.
ದಾವಣಗೆರೆ ನಗರದ ಭವಿಷ್ಯವನ್ನು ಉನ್ನತ ಮಟ್ಟಕ್ಕೇರಿಸಲು ಸಾರ್ವಜನಿಕರು ಮುಕ್ತವಾಗಿ ಸುಲಲಿತ ಜೀವನ(ಇಸ್ ಆಫ್ ಲೀವಿಂಗ್) ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಆಯಾಯ ನಗರದ ಶೇ.1 ರಷ್ಟು ಜನರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅಗತ್ಯ ಇದೆ. ಆದರೆ, ನಮ್ಮಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು.
ಸ್ಮಾರ್ಟ್ಸಿಟಿ ಯೋಜನೆ ಮುಖ್ಯ ಅಭಿಯಂತರ ಸತೀಶ್, ಪ್ರಧಾನ ವ್ಯವಸ್ಥಾಪಕ(ಆಡಳಿತ) ಚಂದ್ರಶೇಖರ್, ಹಿರಿಯ ಸಹಾಯಕ ವಾರ್ತಾಧಿಕಾರಿ ಡಿ. ಅಶೋಕ್ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ