ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ


Team Udayavani, Feb 27, 2020, 1:23 PM IST

bk-tdy-2

ಬೀಳಗಿ: ಎಲ್ಲ ಸರಕಾರಿ ಶಾಲೆಗಳ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ, ಮಳೆ ನೀರುಕೊಯ್ಲು ನಿರ್ಮಾಣ, ಅಡುಗೆಗೆ ಸಂಬಂ ಧಿಸಿದ ಸಸ್ಯ ಉದ್ಯಾನ ಸೇರಿದಂತೆ ಹಲವು ಮೂಲ ಸೌಕರ್ಯ ಕಡ್ಡಾಯಗೊಳಿಸುವ ಮೂಲಕ, ಸರಕಾರಿ ಶಾಲೆಗಳನ್ನು ಉತ್ತಮ ದರ್ಜೆಯಲ್ಲಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಯೋಜನೆ ಸಿದ್ಧಗೊಳಿಸುವುದಾಗಿ ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿದ ಅವರು, ಅಲ್ಲಿನ ಮಾದರಿ ಬಿಸಿಯೂಟದ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳಲ್ಲಿ ಮಕ್ಕಳ ಪೌಷ್ಟಿಕತೆಯ ದೃಷ್ಟಿಯಿಂದ ಗುಣಮಟ್ಟದ ಊಟ ಮತ್ತು ಉತ್ತಮ ಅಕ್ಷರಭ್ಯಾಸ ದೊರಕುವಂತಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವುದು ಸವಾಲಿನ ಕೆಲಸವಾಗಿದೆ. ಆದರೂ, ಸಂಬಂ ಧಿಸಿದ ಇಲಾಖೆಗಳು ಮತ್ತು ಶಿಕ್ಷಕ ವರ್ಗದವರು ಪ್ರಾಮಾಣಿಕ ಪ್ರಯತ್ನ ಮಾಡುವುದು ಅವಶ್ಯವಿದೆ ಎಂದರು.

ಖಾಸಗಿ ಶಾಲೆಗಳಿಗಿಂತ ಸರಕಾರಿ ಶಾಲೆಗಳೇನು ಕಡಿಮೆಯಿಲ್ಲ. ಶಿಸ್ತು ಬದ್ಧವಾದ ಸಮವಸ್ತ್ರ, ಇಂಗ್ಲಿಷ್‌ ಕಲಿಕೆಯ ವಾತಾವರಣಕ್ಕೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸಲು ಪಾಲಕರು ಮನಸೋಲುತ್ತಾರೆ. ಸರಕಾರಿ ಶಾಲೆಗಳಲ್ಲಿಯೂ ಕೂಡ ಶಿಸ್ತಿನ ಸಮವಸ್ತ್ರ, ಗುಣಮಟ್ಟದ ಶಿಕ್ಷಣ ನೀಡುವ ಮುಕ್ತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ಆಗಬೇಕಿದೆ. ಖಾಸಗಿ ಶಾಲೆಯಿಂದ, ಸರಕಾರಿ ಶಾಲೆಗಳಿಗೆ ಮಕ್ಕಳು ಮುಖ ಮಾಡುವಂತಾಗಬೇಕು. ಇದಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯ ನೀಡುವ ಮೂಲಕ ಸರಕಾರಿ ಶಾಲೆ ಸದೃಢಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಬಾಳೆಹಣ್ಣು ನೀಡಲು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಬುಧವಾರ ತಾಲೂಕಿನ ಎಲ್ಲ ಶಾಲೆಯ ಮಕ್ಕಳಿಗೆ ಒಂದುದಿನ ಬಾಳೆಹಣ್ಣು ನೀಡಲಾಗಿದೆ. ಇದರ ಖರ್ಚುವೆಚ್ಚದ ಕುರಿತು ತುಲನೆ ಮಾಡುವ ಮೂಲಕ, ಮುಂದೆ ಪ್ರತಿ ವಾರಕ್ಕೊಮ್ಮೆ ಮಕ್ಕಳಿಗೆ ಬಾಳೆಹಣ್ಣು ನೀಡಲು ಸಾಧ್ಯವೇ ಎನ್ನುವ ಚಿಂತನೆ ನಡೆದಿದೆ ಎಂದರು.

ತಾಪಂ ಇಒ ಎಂ.ಕೆ. ತೊದಲಬಾಗಿ, ಡಿಡಿಪಿಐ ಶ್ರೀಶೈಲ ಬಿರಾದಾರ, ಬಿಇಒ ಹನುಮಂತಗೌಡ ಮಿರ್ಜಿ, ಕ್ಷೇತ್ರ ಸಮನ್ವಯಾ ಧಿಕಾರಿ ರಮೇಶ ವಡವಾಣಿ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಎನ್‌.ವೈ. ಕುಂದರಗಿ, ವಿಷಯ ಪರಿವೀಕ್ಷಕ ಡಿ.ಎಂ.ಯಾವಗಲ್ಲ, ಮುಖ್ಯೋಪಾಧ್ಯಾಯ ಎಂ.ಎಸ್‌. ವಾಡೇದ ಇತರರಿದ್ದರು.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.