ಕೌಟುಂಬಿಕ ಕಲಹ : ಒಂದೇ ಕುಟುಂಬದ ಮೂವರು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ


Team Udayavani, Feb 27, 2020, 9:58 PM IST

suicide

ವಿಜಯಪುರ : ಕೌಟುಂಬಿಕ ಕಲಹದ ಕಾರಣಕ್ಕೆ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯಲ್ಲಿ ಅನಾಮಧೇಯ ಶವಗಳನ್ನು ಗುರುತು ಪತ್ತೆಯಾಗಿದೆ.

ಮೂವರೂ ವಿಜಯಪುರ ನಿವಾಸಿಯಾದ ಒಂದೇ ಕುಟುಂಬದ ತಾಯಿ-ಮಕ್ಕಳು ಎಂಬುದು ಪತ್ತೆಯಾಗಿದೆ.

ಫೆ.25 ರಂದು ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ಅನಾಮಧೇಯವಾಗಿ ಪತ್ತೆಯಾಗಿದ್ದ ಮೂವರ ಶವಗಗಳ ಗುರುತು ಪತ್ತೆಯಾಗಿದೆ. ವಿಜಯಪುರ ನಗರದ ನಿವಾಸಿ ಅಶೋಕ ಹವಾಲ್ದಾರ ಅವರ ಪತ್ನಿ 45 ವರ್ಷದ ರೇಣುಕಾ, ಮಕ್ಕಳಾದ 23 ವರ್ಷದ ಐಶ್ವರ್ಯ ಹಾಗೂ 18 ವರ್ಷದ ಮಗ ಅಖಿಲೇಶ ಎಂದು ಗುರುತಿಸಲಾಗಿದೆ.

ರೇಣುಕಾ ಅವರು ತಮ್ಮ ಅಕ್ಕನ ಮಗಳು ದೀಪಾ ಎಂಬವರ ವಿಜಯಪುರ ನಗರದ ಮನೆಯಲ್ಲಿ ವಾಸವಿದ್ದು, ಹೆತ್ತವರನ್ನು ಕಳೆದುಕೊಂಡಿದ್ದ ತನ್ನನ್ನು ಸಾಕಿ ಸಲಹಿದ ತಮ್ಮನ್ನು ದೀಪಾ ಮನೆಯಿಂದ ಹೊರ ಹೋಗಿ ಎಂದು ಹೇಳಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅತ್ಮಹತ್ಯೆಗೆ ಶರಣರಾಗಿದ್ದಾರೆ.

ಈ ಮೂವರು ಫೆ.25 ರಂದು ತಮ್ಮ ಮನೆಯಿಂದ ಕಾಣೆಯಾಗಿದ್ದ ಈ ಮೂವರ ಕುರಿತು ವಿಜಯಪುರ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಈ ಮೂವರನ್ನು ಹುಡುಕುತ್ತಿರುವಾಗಲೇ ಕೊಲ್ಹಾರ ಬಳಿ ನದಿಯಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಮೃತ ರೇಣುಕಾ ಅವರ ಪತಿ ಅಶೋಕ ಹವಾಲ್ದಾರ ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ತಮ್ಮ ಅಣ್ಣ ನಾರಾಯಣರಾವ, ಅತ್ತಿಗೆ ಉಷಾ ಇವರು ಅನಾರೋಗ್ಯದ ಕಾರಣ ಕಳೆದ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು.

ಪರಿಣಾಮ ಅಣ್ಣ-ಅತ್ತಿಗೆಯ ಮಗಳಾಗಿದ್ದ ದೀಪಾ ಸಣ್ಣವಳಿದ್ದ ಕಾರಣ ಆಕೆಯ ಆರೈಕೆಗಾಗಿ ತಮ್ಮ ಊರು ಮುಧೋಳ ತೊರೆದು ವಿಜಯಪುರಕ್ಕೆ ಆಗಮಿಸಿ ನೆಲೆಸಿದ್ದರು. ತಂದೆ ಮೃತರಾದ ಕಾರಣ ದೀಪಾ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ದೊರಕಿದ್ದು, ಜಿಲ್ಲಾಧಿಕಾರಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ದೀಪಾ ವಿವಾಹದ ನಂತರ ರೇಣುಕಾ-ಅಶೋಕ ದಂಪತಿ ಮುಧೋಳಕ್ಕೆ ಹೋಗಲು ನಿರ್ಧರಿಸಿದ್ದರು.

ಆದರೆ ಈಚೆಗೆ ದೀಪಾ ಹಾಗೂ ರೇಣುಕಾ ಅವರೊಂದಿಗೆ ಕೌಟುಂಬಿಕವಾಗಿ ಕಲಹ ಉಂಟಾಗಿದ್ದ ಸಂದರ್ಭದಲ್ಲಿ ಮನೆಯಿಂದ ಹೊರ ಹೋಗಿ ಎಂದು ದೀಪಾ ಹೇಳಿದ್ದಳು. ಇದರಿಂದ ನೊಂದು ಈ ಮೂವರು ಮನೆಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಅದರೆ ಆತ್ಮಹತ್ಯೆ ಮಾಡಿಕೊಂಡವರಲ್ಲಿ ಐಶ್ವರ್ಯ ಬರೆದಿರುವ ಪತ್ರ ಮೃತರ ಮನೆಯಲ್ಲಿ ಸಿಕ್ಕಿದೆ. ತಮ್ಮ ಮರಣಕ್ಕೆ ತಮ್ಮ ಪರಿವಾರದವರಾಗಲಿ ಅಥವಾ ಸಂಬಂಧಿಕರಾಗಲಿ ಯಾರೂ ಕಾರಣಿಕರ್ತರಲ್ಲ, ತಮ್ಮ ಮರಣಕ್ಕೆ ತಾವೇ ಕಾರಣ ಎಂದು ಬರೆದಿದ್ದಾರೆ.

ಈ ಕುರಿತು ಕೊಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.