ಸನಿಹ ಬರುವ ಸಮಯ

ರಾಜ್‌ ಮೊಮ್ಮಗಳ ರೊಮ್ಯಾಂಟಿಕ್‌ ಕಾಮಿಡಿ

Team Udayavani, Feb 28, 2020, 5:08 AM IST

ego-35

“ಮದರಂಗಿ’ ಕೃಷ್ಣ, “ದುನಿಯಾ’ ವಿಜಯ್‌ ಹೀಗೆ ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಹಲವು ನಾಯಕ ನಟರು ನಿಧಾನವಾಗಿ ನಿರ್ದೇಶನದತ್ತ ಮುಖ ಮಾಡುತ್ತಿದ್ದಾರೆ. ಈಗ ಈ ಸಾಲಿಗೆ , ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಸೂರಜ್‌ ಗೌಡ. “ಮದುವೆಯ ಮಮತೆಯ ಕರೆಯೋಲೆ’ ಮೂಲಕ ಚಿತ್ರರಂಗ ಪ್ರವೇಶಿಸಿದ ಸೂರಜ್‌ ಗೌಡ, ಈಗ ನಟನೆ ಜೊತೆಗೆ ನಿರ್ದೇಶಕನ ಕ್ಯಾಪ್‌ ತೊಟ್ಟಿದ್ದಾರೆ. ಅಂದಹಾಗೆ ಸೂರಜ್‌ ಗೌಡ, ತಾವೇ ಬಯಸಿ ನಿರ್ದೇಶಕನ ಸ್ಥಾನ ಅಲಂಕರಿಸಿದ್ದಲ್ಲ. ಬದಲಾಗಿ ತಾನೇ ಹುಡುಕಿಕೊಂಡು ಬಂದ ಅನಿವಾರ್ಯ ಸನ್ನಿವೇಶವೊಂದು ಅವರನ್ನು ನಿರ್ದೇಶಕನನ್ನಾಗಿ ಮಾಡಿದೆ. ಸೂರಜ್‌ ಗೌಡ ತಾನೇ ಬರೆದು ನಾಯಕನಾಗಿ ಅಭಿನಯಿಸಬೇಕಿದ್ದ “ನಿನ್ನ ಸನಿಹಕೆ’ ಚಿತ್ರಕ್ಕೆ ಆರಂಭದಲ್ಲಿ ಸುಮನ್‌ ಜಾದೂಗರ್‌ ನಿರ್ದೇಶನ ಮಾಡಬೇಕಿತ್ತು. ಆದರೆ ಚಿತ್ರ ಶುರುವಾಗುವ ಹೊತ್ತಿಗೆ ಸುಮನ್‌ ಜಾದೂಗರ್‌ ಅಪಘಾತಕ್ಕಿಡಾಗಿ ಕೆಲ ತಿಂಗಳು ವಿಶ್ರಾಂತಿ ಪಡೆಯಬೇಕಾಗಿದ್ದರಿಂದ, ನಿರ್ದೇಶನದ ಜವಾಬ್ದಾರಿ ಸೂರಜ್‌ ಗೌಡ ಹೆಗಲಿಗೇರಿತು. ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ನಿನ್ನ ಸನಿಹಕೆ’ ಚಿತ್ರ ಸಾಗಿಬಂದ ಈ ಎಲ್ಲ ವೃತ್ತಾಂತಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿತು.

ನಾಯಕನಾಗಿ ಮತ್ತು ನಿರ್ದೇಶಕನಾಗಿ ಚಿತ್ರದ ಬಗ್ಗೆ ಮಾತನಾಡಿದ ಸೂರಜ್‌ ಗೌಡ, “ನಾನು ಇಲ್ಲಿಯವರೆಗೆ ಐದು ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಈ ವೇಳೆ ನಟನೆ ಜೊತೆ ಜೊತೆಗೆ ನಿರ್ದೇಶನ ಸೇರಿದಂತೆ ಸಿನಿಮಾದ ಬೇರೆ ಬೇರೆ ಕೆಲಸಗಳನ್ನೂ ಕಲಿತುಕೊಳ್ಳುತ್ತಿದ್ದೆ. ನಾನೇ ಬರೆದ ಈ ಕಥೆಗೆ ನಾನೇ ನಿರ್ದೇಶಕನಾಗುತ್ತೇನೆ ಅಂದುಕೊಂಡಿರಲಿಲ್ಲ. ಅನಿರೀಕ್ಷಿತವಾಗಿ ಬಂದ ಅವಕಾಶ ಮತ್ತು ಸನ್ನಿವೇಶ ಈ ಸಿನಿಮಾದಲ್ಲಿ ನನ್ನನ್ನು ನಟನೆ ಜೊತೆಗೆ ನಿರ್ದೇಶಕನನ್ನಾಗಿಯೂ ಮಾಡಿತು. ನಟನೆ ಮತ್ತು ನಿರ್ದೇಶನ ಎರಡರಲ್ಲೂ ನನ್ನ ಕೈಲಾದ ಮಟ್ಟಿಗೆ ಬೆಸ್ಟ್‌ ಎನಿಸುವಂಥ ಪರ್ಫಾರ್ಮೆನ್ಸ್‌ ಕೊಡುವ ಪ್ರಯತ್ನ ಮಾಡಿದ್ದೇನೆ ‘ ಎಂದು ಭರವಸೆಯ ಮಾತುಗಳನ್ನಾಡಿದರು ಸೂರಜ್‌.

ಇನ್ನು “ನಿನ್ನ ಸನಿಹಕೆ’ ಚಿತ್ರದ ಮೂಲಕ ನಟ ರಾಮ್‌ಕುಮಾರ್‌ ಪುತ್ರಿ ಧನ್ಯಾ ರಾಮ್‌ಕುಮಾರ್‌ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ. ಚಿತ್ರದ ಬಗ್ಗೆ ಮತ್ತು ತಮ್ಮ ಪಾತ್ರದ ಬಗ್ಗೆ ಮಾತಿಗಿಳಿದ ಧನ್ಯಾ ರಾಮ್‌ಕುಮಾರ್‌, “ಇಂಥದ್ದೊಂದು ಒಳ್ಳೆಯ ಟೀಮ್‌ ಸಿಕ್ಕಿದ್ದರಿಂದ, ನನ್ನ ಮೊದಲ ಸಿನಿಮಾದಲ್ಲಿಯೇ ಸಾಕಷ್ಟು ಕಲಿತುಕೊಳ್ಳಲು ಸಾಧ್ಯವಾಯ್ತು. ಈ ಸಿನಿಮಾ ಮತ್ತು ನನ್ನ ಪಾತ್ರ ಸಾಕಷ್ಟು ಕಲಿಸಿದೆ. ನಮ್ಮ ನಡುವೆಯೇ ನಡೆಯುವ ಕಥೆಯೊಂದು, ಎಲ್ಲರಿಗೂ ಇಷ್ಟವಾಗುವಂತೆ ತೆರೆ ಮೇಲೆ ಬರುತ್ತಿದೆ. ಎಲ್ಲರಿಗೂ ಇಷ್ಟವಾಗುವುದೆಂಬ ನಂಬಿಕೆ ಇದೆ’ ಎಂದರು ಧನ್ಯಾ.

“ವೈಟ್‌ ಆಂಡ್‌ ಗ್ರೇ ಪಿಕ್ಚರ್’ ಬ್ಯಾನರ್‌ ಮೂಲಕ ಅಕ್ಷಯ ರಾಜಶೇಖರ್‌, ರಂಗನಾಥ ಕೂಡ್ಲಿ ಈ ಚಿತ್ರಕ್ಕೆ ನಿರ್ಮಾಪಕರು. ಚಿತ್ರಕ್ಕೆ ಅಭಿಲಾಶ್‌ ಕಳತ್ತಿ ಛಾಯಾಗ್ರಹಣವಿದೆ. ಸುರೇಶ ಆರ್ಮುಗಂ ಸಂಕಲನವಿದೆ. ರಘು ದೀಕ್ಷಿತ್‌ ಸಂಗೀತ ಸಂಯೋಜಿಸಿದ್ದಾರೆ. ಪ್ರವೀಣ ಕುಮಾರ್‌ ಜೆ ಸಂಭಾಷಣೆ, ವಾಸುಕಿ ವೈಭವ್‌ ಸಾಹಿತ್ಯವಿದೆ.

“ನಿನ್ನ ಸನಿಹಕೆ’ ಚಿತ್ರದ ರೊಮ್ಯಾಂಟಿಕ್‌ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದ್ದು, ಚಿತ್ರದಲ್ಲಿ 2 ಭರ್ಜರಿ ಫೈಟ್ಸ್, 4 ಮೆಲೋಡಿ ಸಾಂಗ್‌ ಇದೆ. ಬೆಂಗಳೂರು, ಕೊಡಗು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.