ಮಣಿಪಾಲ: ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ
ಮಣಿಪಾಲದ ಸ್ಕೂಲ್ ಆಫ್ ಲೈಫ್ ಸೈನ್ಸ್: ವಿಜ್ಞಾನ ದಿನ
Team Udayavani, Feb 28, 2020, 5:47 AM IST
ಮಣಿಪಾಲ: ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಮಣಿಪಾಲದ ಸ್ಕೂಲ್ ಆಫ್ ಲೈಫ್ ಸೈನ್ಸ್ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಮಾಹೆ ಕುಲಪತಿ ಡಾ| ಎಚ್. ವಿನೋದ ಭಟ್ ಚಾಲನೆ ನೀಡಿದರು.
ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ತರಬೇತಿಗೆ ಆಗಮಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳು ರಚಿಸಿದ ಸುಮಾರು 50 ವಿಜ್ಞಾನ ಮಾದರಿಗಳ ವಸ್ತುಪ್ರದರ್ಶನ ಆರಂಭವಾಗಿದ್ದು, ಫೆ. 28ರಂದು ಜಿಲ್ಲೆಯ ವಿವಿಧೆಡೆಗಳ ವಿದ್ಯಾರ್ಥಿಗಳು ರಚಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ನಡೆಯಲಿದೆ. ಸಿ.ವಿ. ರಾಮನ್ ಅವರ ಭಾವಚಿತ್ರವಿರುವ ಫಲಕವನ್ನು ಅನಾವರಣಗೊಳಿಸಿ ಪ್ರದರ್ಶನವನ್ನು ಉದ್ಘಾಟಿಸಲಾಯಿತು.
ಗಮನದ ಸೆಳೆದ ಕರೋನಾ
ಪ್ರಸ್ತುತ ಜಾಗತೀಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕರೋನ ವೈರಸ್ ತುತ್ತಾದ ವ್ಯಕ್ತಿಯಲ್ಲಿ ಕಾಣಿಸಿವ ಲಕ್ಷಣ ಹಾಗೂ ಮುಂಜಾಗೃತ ಕ್ರಮಗಳ ಕುರಿತು ಮಾದರಿಗಳು ನೋಡುಗರ ಗಮನ ಸೆಳೆಯಿತು. ಸೂಕ್ಷ್ಮಾಣು ಜೀವಿಗಳು, ಅವುಗಳಿಂದ ಉಂಟಾಗುವ ಕಾಯಿಲೆ, ಕಿಣ್ವಗಳು, ಪ್ಲಾಸ್ಮಾ, ಆಮ್ಲಜನಕ ಉತ್ಪಾದನೆ, ಸೈಕ್ಲೋಸಿಸ್, ಮಿದುಳು, ಹೈಡ್ರಾಲಿಕ್ಸ್, ಜೆನೆಟಿಕ್ಸ್, ಭೌತ ಮತ್ತು ರಸಾಯನಶಾಸ್ತ್ರಕ್ಕೆ ಸಂಬಂಧಿಸಿದ ಮಾದರಿಗಳು ಪ್ರದರ್ಶನದಲ್ಲಿದ್ದವು. ತರಬೇತಿ ಕಾರ್ಯಾಗಾರ ವಿಜ್ಞಾನ ದಿನದ ಅಂಗವಾಗಿ ಸಂಸ್ಥೆಯಲ್ಲಿ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 5 ದಿನಗಳ ವಿಜ್ಞಾನ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಅವರಿಗೆ ವಿಜ್ಞಾನದ ಕೌತುಕ, ಲ್ಯಾಬೋರೇಟರಿ ಸಂಶೋಧನೆ, ಜೆನೆಟಿಕ್ಸ್ ಇತ್ಯಾದಿಗಳ ಮಾಹಿತಿ, ಪ್ರಾತ್ಯಕ್ಷಿಕೆ ನೀಡಲಾಯಿತು.
ಚೀನ ಮಾದರಿ ಅಂತಸ್ತು ಕೃಷಿ
ನೀರಿನ ಮಿತವ್ಯಯದೊಂದಿಗೆ ವಿಶಿಷ್ಟ ಕ್ರಮದಲ್ಲಿ ಮಾಡಲಾಗುವ ಚೀನ ಮಾದರಿಯ ಅಂತಸ್ತು ಕೃಷಿಯ ಮಾದರಿ ಪ್ರದರ್ಶನದಲ್ಲಿ ಹೆಚ್ಚು ಆಕರ್ಷಣೀಯವಾಗಿತ್ತು. ಬಾಟಲ್ಗಳನ್ನು ಉಪಯೋಗಿಸಿ ಇಲ್ಲಿ ಅಂತಸ್ತು ಕೃಷಿಯನ್ನು ಬಿಂಬಿಸಲಾಗಿದ್ದು, ಮೇಲೆ ಹಾಕಿದ ನೀರನ್ನು ಗಿಡಗಳು ಬೇಕಾದಷ್ಟು ಬಳಸಿ ಕೆಳ ಅಂತಸ್ತಿನ ಗಿಡಗಳಿಗೆ ಬಿಟ್ಟುಕೊಡುವ ರೀತಿ ಇದರಲ್ಲಿ ತತ್ವವನ್ನು ಬಿತ್ತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ