“ತಂತ್ರಜ್ಞಾನ ಜನರಿಗೆ ತಲುಪಬೇಕು’


Team Udayavani, Feb 28, 2020, 5:01 AM IST

27KSDE8

ಕಾಸರಗೋಡು: ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಭಾರತ ದೇಶ ವಿಜ್ಞಾನ ಮತ್ತು ತಾಂತ್ರಿಕತೆಯಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿ ಕೊಂಡಿದ್ದು, ಇದರ ಹಿಂದೆ ವಿಜ್ಞಾನಿಗಳ ಮತ್ತು ಸಂಶೋಧಕರ ನಿರಂತರ ಪ್ರಯತ್ನ ಹಾಗೂ ತ್ಯಾಗ ಇದೆ. ಇದರ ಪ್ರಯೋಜನ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರ ಸಚಿವ ವಿ.ಮುರಳೀಧರನ್‌ ಹೇಳಿದರು.

ಸ್ವದೇಶಿ ಸಯನ್ಸ್‌ ಮೂವ್‌ಮೆಂಟ್‌(ವಿಜ್ಞಾನ ಭಾರತಿ) ಕೇರಳ ಘಟಕ ಮತ್ತು ಐಸಿಎಆರ್‌-ಸಿಪಿಸಿಆರ್‌ಐ, ಕೇಂದ್ರೀಯ ವಿದ್ಯಾಲಯ ಕೇರಳ ಸಂಯುಕ್ತ ನೇತೃತ್ವ ದಲ್ಲಿ ಕೇಂದ್ರ ತೋಟಗಾರಿಕೆ ಬೆಳೆ ಸಂಶೋ ಧನೆ ಕೇಂದ್ರ (ಸಿಪಿಸಿಆರ್‌ಐ) ದಲ್ಲಿ ಆಯೋಜಿಸಿದ ಸ್ವದೇಶಿ ಸಯನ್ಸ್‌ ಕಾಂಗ್ರೆಸ್‌ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಾಂತ್ರಿಕತೆ ಅಭಿವೃದ್ಧಿ ಒಂದು ಪ್ರದೇಶಕ್ಕೆ ಮಾತ್ರ ಸೀಮಿತವಲ್ಲ. ಅದು ವಿಶ್ವಕ್ಕೆ ಸಹಕಾರಿಯಾಗಲಿದೆ. ಭಾರತೀಯ ಪಾರಂಪರಿಕ ವಿಜ್ಞಾನದ ಬಗ್ಗೆ ಎಲ್ಲೆಡೆ ಶಂಕೆ ಇತ್ತು. ಆದರೆ ಇಂದು ಭಾರತೀಯ ಪಾರಂಪರಿಕ ವಿಜ್ಞಾನದ ಬಗ್ಗೆ ವಿಶ್ವವೇ ಗುರುತಿಸಿದೆ. ಈ ಬಗ್ಗೆ ಸಂಶೋಧನೆಗಳನ್ನೂ ನಡೆಸುತ್ತಿದೆ.

ಕೇರಳದಲ್ಲಿ ಕಳೆದ ಎರಡು ವರ್ಷ ಪ್ರಳಯ, ಭೂಕುಸಿತ ಮೊದಲಾದವುಗ ಳಿಂದ ಸಂಭವಿಸಿದ ಜೀವ ಹಾನಿ, ನಾಶನಷ್ಟ ಅಷ್ಟಿಷ್ಟಲ್ಲ. ಇಂತಹ ಪ್ರಕೃತಿ ದುರಂತಕ್ಕೆ ಕಾರಣಗಳೇನು? ಮತ್ತು ಅವುಗಳಿಗೆ ಪರಿಹಾರಗಳೇನು? ಎಂಬ ಬಗ್ಗೆ ಕೇರಳದ ಜನತೆ ಚಿಂತಿಸದಿರುವುದು ವಿಷಾದನೀಯ ಎಂದರು.

ವಿಶ್ವದಾದ್ಯಂತ ವಿದ್ಯುತ್‌ ಸಮಸ್ಯೆ ತಲೆದೋರಿದೆ. ಈ ಸಮಸ್ಯೆಗೆ ಪರಿಹಾರ ಸೌರ ವಿದ್ಯುತ್‌ ಎಂಬುದು ಭಾರತದ ಸಂದೇಶವಾಗಿದೆ. ಈ ಸಂದೇಶದಿಂದ ಪ್ರಚೋದನೆಗೊಂಡ ವಿಶ್ವದ ಹಲವು ದೇಶಗಳು ಸೌರ ವಿದ್ಯುತ್‌ ಸ್ಥಾಪಿಸಲು ಭಾರತದ ಮತ್ತು ಇಲ್ಲಿನ ವಿಜ್ಞಾನಿಗಳ ನೆರವು ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದ ಸಚಿವರು ಸೌರ ವಿದ್ಯುತ್‌ನಿಂದ ನೀರಾವರಿ ಯೋಜನೆಗೂ ಸಹಾಯಕವಾಗಿದೆ. ಇಂದು ತೆಂಗು, ಅಡಿಕೆ ಮೊದಲಾದ ಕೃಷಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕೆ ಸಾಕಷ್ಟು ಸಂಶೋಧನೆಗಳಾಗಿವೆ. ಆದರೆ ಶಾಶ್ವತ ಪರಿಹಾರ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ವಿಜ್ಞಾನಿಗಳು ಮತ್ತು ಸಂಶೋಧಕರು ಪ್ರಯತ್ನಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ|ಕೆ.ಮುರಳೀಧರನ್‌ ಅಧ್ಯಕ್ಷತೆ ವಹಿಸಿದರು. ಕೇರಳ ಫಿಶರೀಸ್‌ ಆ್ಯಂಡ್‌ ಓಶನ್‌ ಸ್ಟಡೀಸ್‌ ವಿ.ವಿ.ಯ ವೈಸ್‌ ಚಾನ್ಸಲರ್‌ ಪ್ರೊ| ಎ. ರಾಮಚಂದ್ರನ್‌, ಕೇಂದ್ರೀಯ ವಿದ್ಯಾಲಯ ಕೇರಳ ವೈಸ್‌ ಚಾನ್ಸಲರ್‌ ಪ್ರೊ| ಜಿ. ಗೋಪಕುಮಾರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ವಿಜ್ಞಾನ ಭಾರತೀಯ ವಿವೇಕಾನಂದ ಪೈ, ಪ್ರೊ| ಎಸ್‌.ಕೆ. ಜೆನ, ಭುವನೇಶ್ವರ್‌, ಎ.ಆರ್‌.ಎಸ್‌. ಮೆನೋನ್‌ ಮೊದಲಾದವರು ಉಪಸ್ಥಿತರಿದ್ದರು. ರಾಜೇಂದ್ರನ್‌ ಪ್ರಾಸ್ತಾವಿಕ ಮಾತನಾಡಿದರು. ಸಿಪಿಸಿಆರ್‌ಐ ನಿರ್ದೇಶಕಿ ಡಾ|ಅನಿತಾ ಕರುಣ್‌ ಸ್ವಾಗತಿಸಿದರು.

ಕ್ರಮ ಅಗತ್ಯ
ಕೇರಳದಲ್ಲಿ 44 ನದಿಗಳಿದ್ದರೂ ಇನ್ನೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಾಗಿಲ್ಲ. ಮಳೆ ಬಂದ ಕೆಲವೇ ಕ್ಷಣಗಳಲ್ಲಿ ನದಿಗಳ ನೀರು ಸಮುದ್ರ ಸೇರುತ್ತದೆ. ಆದರೆ ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಲು ಅಗತ್ಯದ ಕ್ರಮ ತೆಗೆದುಕೊಳ್ಳದಿರುವುದೇ ನೀರಿನ ಸಮಸ್ಯೆಗೆ ಪ್ರಮುಖ ಕಾರಣವೆಂದು ಸಚಿವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.