ಹಗರಿ ಕೆವಿಸಿಯಲ್ಲಿ ಪದವಿ ಕಾಲೇಜು ಸ್ಥಾಪನೆಗೆ ಒತ್ತಾಯ
Team Udayavani, Feb 28, 2020, 5:59 PM IST
ಬಳ್ಳಾರಿ: ತಾಲೂಕಿನ ಹಗರಿ ಕೃಷಿ ಸಂಶೋಧನಾ ಕೇಂದ್ರದಲ್ಲಿ ಪದವಿ ಅಧ್ಯಯನ ಕೇಂದ್ರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಮುಂದಿನ ಬಜೆಟ್ನಲ್ಲಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ(ಹೈಕ) ಹೋರಾಟ ಸಮಿತಿಯಿಂದ ಜಿ. ಸೋಮಶೇಖರ ರೆಡ್ಡಿಯವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
1906ರಲ್ಲಿ ಆರಂಭವಾದ ಈ ಕೇಂದ್ರ ಈಗಾಗಲೇ ಕೃಷಿ ವಿವಿ ಮಟ್ಟಕ್ಕೆ ಬೆಳೆಯಬೇಕಿತ್ತು. ಆದರೆ, ಇದುವರೆಗೆ ಕೇವಲ ಡಿಪೊÉಮೊ ಪದವಿ ಅಭ್ಯಾಸಕ್ಕೆ ಮಾತ್ರ ಸೀಮಿತವಾಗಿದೆ. ಈ ಬಾರಿಯ ಬಜೆಟ್ನಲ್ಲಿ ರಾಜ್ಯ ಸರ್ಕಾರ ತಕ್ಷಣ ಪದವಿ ಕಾಲೇಜು ಆರಂಭಕ್ಕೆ ಕ್ರಮ ವಹಿಸಬೇಕು. ಈ ಭಾಗದ ರೈತರಲ್ಲಿ ವೈಜ್ಞಾನಿಕ ಕೃಷಿ ಪದ್ಧತಿ ತಿಳಿಸಿಕೊಡುವ ಸಂಬಂಧ ಒಂದು ಪದವಿ ಕಾಲೇಜು ಬೇಕಿದೆ. ಹಗರಿ ಕೃಷಿ ಸಂಶೋಧನಾ ಕೇಂದ್ರ 300 ಎಕರೆ ವಿಶಾಲವಾದ ಜಮೀನು ಹೊಂದಿದೆ. ಜಿಲ್ಲೆಯ ಬಹುತೇಕ ಜನರು ಕೃಷಿ ಆಧಾರಿತ ಉದ್ಯೋಗಿಗಳು ಆಗಿರುವುದರಿಂದ ಈ ವಿಶಾಲವಾದ ಜಾಗ ಹೊಂದಿದ ಕೇಂದ್ರದಲ್ಲಿ ಕೃಷಿ ಪದವಿ ಕಾಲೇಜು ಆರಂಭಿಸುವುದು ಸೂಕ್ತ ಎಂಬುದನ್ನು ಈ ಹಿಂದೆ ಎಚ್.ಕೆ. ಪಾಟೀಲ್ ರು ಕೃಷಿಸಚಿವರಾಗಿದ್ದಾಗ ಬಜೆಟ್ ಪ್ರಸ್ತಾವನೆ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರ ಇದರ ಕಾರ್ಯರೂಪದ ಕಡೆ ಗಮನ ಹರಿಸಬೇಕು.ಕಲ್ಯಾಣ ಕರ್ನಾಟಕ (ಹೈಕ) ಪ್ರದೇಶಕ್ಕೆ ಸಂವಿಧಾನ ವಿಶೇಷ ಸ್ಥಾನಮಾನವನ್ನು ಕಲ್ಪಿಸಲಾಗಿದ್ದು ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಶೇ. 70ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗಿದ್ದು ಒಣಭೂಮಿ ಆಶ್ರಿತ ಪ್ರದೇಶದಲ್ಲಿ ರೈತರಿಗೆ, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಲು ಅನುಕೂಲವಾಗಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನಾರಾಜ್ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರ ಕೃಷಿ ತಜ್ಞರಾದ ಡಾ| ಬಿಸಿಲಯ್ಯ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿಯ ಶಿಫಾರಸ್ಸಿನಂತೆ ಒಟ್ಟು 8 ಜಿಲ್ಲೆಗಳಲ್ಲಿ ಸ್ಥಾಪಿಸಬೇಕಾಗಿದ್ದ ಕೃಷಿ ಕಾಲೇಜುಗಳನ್ನು ಈಗಾಗಲೇ 7 ಜಿಲ್ಲೆಗಳಲ್ಲಿ ಪದವಿ ಕಾಲೇಜು ಪ್ರಾರಂಭಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಹಗರಿ ಕೃಷಿ ಕಾಲೇಜು ಮಾತ್ರ ಮಲತಾಯಿ ಧೋರಣಿಗೆ ಒಳಗಾಗಿ ನನೆಗುದಿಗೆ ಬಿದ್ದಿದೆ. ಈ ಬಜೆಟ್ನಲ್ಲಿ ಸರ್ಕಾರ ತನ್ನ ಧೋರಣೆ ಬದಲಿಸಿಕೊಂಡು ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಸಮಿತಿಯ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ