ವಿಜಿಲ್‌ಗೆ ಅಪ್‌ಡೇಟ್‌ ಸಮಸ್ಯೆ

ವಿಳಂಬಕ್ಕೆ ತನಿಖೆ ನೆಪ ಫ‌ಲಾನುಭವಿಗಳಿಗೆ ಸಂಕಷ್ಟ

Team Udayavani, Feb 29, 2020, 6:15 AM IST

vijil-update

ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌ ವರ್ಷನ್‌ಗಳು ಬದಲಾಗುತ್ತಲೇ ಇರುವುದರಿಂದ ತನಿಖೆ ಪೂರ್ಣಗೊಳ್ಳದೆ ಫ‌ಲಾನುಭವಿಗಳು ಸಂಕಷ್ಟ ಎದುರಿಸುವಂತಾಗಿದೆ.

ಹಿಂದಿನ ಸರಕಾರದ ಅವಧಿಯಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಳೆದ ನವೆಂಬರ್‌ನಲ್ಲಿ ವಸತಿ ಸಚಿವ ವಿ. ಸೋಮಣ್ಣ ತನಿಖೆಗೆ ಆದೇಶಿಸಿದ್ದರು. ಮೊದಲ ಹಂತದಲ್ಲಿ 53,435 ಮನೆಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು. ಅಕ್ರಮ ಪತ್ತೆಗಾಗಿ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದಲೇ ವಿಜಿಲ್‌ ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಎಲ್ಲ ಜಿಲ್ಲಾಧಿ ಕಾರಿಗಳಿಗೆ ಸರಕಾರ ಸೂಚನೆ ನೀಡಿತ್ತು.

ಬದಲಾಗುತ್ತಿರುವ ವರ್ಷನ್‌
ಆರಂಭದಲ್ಲಿ ವಿಜಿಲ್‌ ಮೊಬೈಲ್‌ ಆ್ಯಪ್‌-1.0 ಅಭಿವೃದ್ಧಿ ಪಡಿಸಲಾಗಿತ್ತು. ಲೋಪಗಳಿದ್ದ ಕಾರಣ ಅದನ್ನು ಬದಲಾಯಿಸಿ ಆ್ಯಪ್‌ 1.1 ಎಂದು ಅಪ್‌ಡೇಟ್‌ ಮಾಡಲಾಯಿತು. ಈ ವರ್ಷನ್‌ನಲ್ಲಿಯೂ ಅಕ್ರಮ ಮನೆಗಳ ಸಂಪೂರ್ಣ ಮಾಹಿತಿ ದೊರೆಯುತ್ತಿಲ್ಲ ಎಂದು 1.3 ವರ್ಷನ್‌ ಬಿಡುಗಡೆ ಮಾಡಲಾಯಿತು. ಅದರಲ್ಲಿಯೂ ಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗದೆ 1.5 ವರ್ಷನ್‌ಗೆ ಅಪ್‌ಡೇಟ್‌ ಮಾಡಿ ತನಿಖೆ ನಡೆಸಲು ಇಲಾಖೆ ನಿರ್ಧರಿಸಿದೆ.

ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್‌ಕುಮಾರ್‌ ಮೀನಾ ಎಲ್ಲ ಜಿಲ್ಲೆಗಳ ವಸತಿ ಇಲಾಖೆಯ ಮುಖಸ್ಥರಿಗೆ ಪತ್ರ ಬರೆದಿದ್ದು, ಆದಷ್ಟು ಬೇಗ ವಿಜಿಲ್‌ ಮೊಬೈಲ್‌ ಆ್ಯಪ್‌ ಮೂಲಕ ಫ‌ಲಾನುಭವಿಗಳ ಮಾಹಿತಿಯನ್ನು ನಿಗಮಕ್ಕೆ ಅಪ್‌ಲೋಡ್‌ ಮಾಡುವಂತೆ ಮತ್ತು ಎರಡನೇ ಹಂತದಲ್ಲಿ ಇನ್ನೂ 1.71 ಲಕ್ಷ ಮನೆಗಳನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಅನುದಾನ ಬಿಡುಗಡೆಗೆ ವಿಳಂಬ
ಅಕ್ರಮ ಪತ್ತೆಹಚ್ಚಲು ಇಲಾಖೆ ಸರಳ ಮಾರ್ಗ ಅನುಸರಿಸುವುದರ ಬದಲು ಆ್ಯಪ್‌ ಅಪ್‌ಡೇಟ್‌ ನಲ್ಲಿಯೇ ಸಮಯ ವ್ಯಯಿಸುತ್ತಿರುವುದರಿಂದ ಫ‌ಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಅನುದಾನ ಬಿಡುಗಡೆಯಾಗದೆ ಸಂಕಷ್ಟದಲ್ಲಿ ಸಿಲುಕುವಂತಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.