ಹೈನುಗಾರಿಕೆ ಮೂಲಕ ಸ್ವಾವಲಂಬನೆ ದಾರಿ ತೋರಿಸಿದ ಸಂಸ್ಥೆ

ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 29, 2020, 6:00 AM IST

kavadi-milk

ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಈ ಊರಿನ ನೂರಾರು ಮಂದಿಗೆ ಹೈನುಗಾರಿಕೆಯ ಪಾಠ ಹೇಳಿಕೊಟ್ಟ ಸಂಸ್ಥೆ. ಹೀಗಾಗಿ ಇದೀಗ ಈ ಪರಿಸರದಲ್ಲಿ ಅನೇಕರು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿದ್ದಾರೆ.

ಕೋಟ: ಊರಿನ ಜನರು ಹೈನುಗಾರಿಕೆಯನ್ನು ಉಪಕಸುಬಾಗಿ ಸ್ವೀಕರಿಸಿ ಸ್ವಾವಲಂಬಿಗಳಾಗಬೇಕು ಎನ್ನುವ ಉದ್ದೇಶ ದಿಂದ ಹುಟ್ಟಿಕೊಂಡ ಕಾವಡಿ ಹಾಲು ಉತ್ಪಾದಕರ ಸಂಘ ಇದೀಗ ಈ ಭಾಗದಲ್ಲಿ ನೂರಾರು ಹೈನುಗಾರರನ್ನು ಸೃಷ್ಟಿಸಿದೆ.

1981ರಲ್ಲಿ ಸ್ಥಾಪನೆ
ಹಿಂದೆ ಈ ಊರಿನ ಆರೇಳು ಕಿ.ಮೀ. ವ್ಯಾಪ್ತಿಯಲ್ಲಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಹೊರತುಪಡಿಸಿ ಬೇರೆ ಸಂಘಗಳು ಇರಲಿಲ್ಲ. ಹೀಗಾಗಿ ಇಲ್ಲಿನ ರೈತರಿಗೆ ಹಾಲು ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಈ ಕುರಿತು ಚರ್ಚಿಸಿದ ಊರಿನ ಹಿರಿಯರು ಜನರು ಹೈನುಗಾರಿಕೆಯನ್ನು ಉಪಕಸುಬಾಗಿ ಸ್ವೀಕರಿಸಬೇಕು, ಸ್ವಾವಲಂಬನೆಯ ಜೀವನ ಸಾಗಿಸಬೇಕು ಎನ್ನುವ ಸಂಕಲ್ಪದೊಂದಿಗೆ 1981ರಲ್ಲಿ ಕೆನರಾ ಮಿಲ್ಕ್ ಯೂನಿಯನ್‌ನ ಅಧೀನದಲ್ಲಿ ಸಂಘ ಸ್ಥಾಪಿಸಿದರು.

ಸ್ಥಳೀಯ ಮುಂದಾಳು ಕೆ. ಭುಜಂಗ ಹೆಗ್ಡೆ ಈ ಸಂಸ್ಥೆಯ ಸ್ಥಾಪಕಾಧ್ಯಕ್ಷರು. ಇಲ್ಲಿನ ಕೆ.ಪಿ.ಹೊಳ್ಳರ ಚಿಕ್ಕ ಕಟ್ಟಡದಲ್ಲಿ 50-60 ಸದಸ್ಯರು ಹಾಗೂ 40ಲೀಟರ್‌ ಹಾಲಿನೊಂದಿಗೆ ಸಂಸ್ಥೆ ಆರಂಭಗೊಂಡಿತ್ತು. ಅನಂತರ 1986ರಲ್ಲಿ ಸರಕಾರದಿಂದ 20ಸೆಂಟ್ಸ್‌ ಜಾಗವನ್ನು ಪಡೆದು ಕಟ್ಟಡ ರಚಿಸಲಾಗಿತ್ತು.

ಹೈನುಗಾರಿಕೆಯ ಪಾಠ
ಸಂಘ ಸ್ಥಾಪನೆಯಾಗುವ ಮೊದಲು ಇಲ್ಲಿನ ಬೆರಳೆಣಿಕೆಯ ರೈತರು ಹಾಲು ಹಾಕುತ್ತಿದ್ದರು. ಸಂಘ ಸ್ಥಾಪನೆಯಾದ ಮೇಲೆ ನೂರಾರು ಮಂದಿ ಹೊಸ ಜಾನುವಾರುಗಳನ್ನು ಖರೀದಿಸಿ ಸಂಘಕ್ಕೆ ಹಾಲು ಪೂರೈಸತೊಡಗಿದರು. ಇದರಿಂದಾಗಿ ಕೇವಲ ಗೃಹಬಳಕೆಗಾಗಿ ನಡೆಯುತ್ತಿದ್ದ ದನ ಸಾಕಾಣಿಕೆ ಉಪ ಉದ್ಯಮವಾಗಿ ಬೆಳೆಯಿತು ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಯಿತು.

ಪ್ರಸ್ತುತ ಸ್ಥಿತಿಗತಿ
ಪ್ರಸ್ತುತ ಸಂಘದಲ್ಲಿ 268 ಮಂದಿ ಸದಸ್ಯರಿದ್ದು, ಸುಮಾರು 700-800 ಲೀ. ಹಾಲು ಸಂಗ್ರಹಣೆಯಾಗುತ್ತಿದೆ. ಹಾಲಿ ಅಧ್ಯಕ್ಷರಾಗಿ ಕೆ.ಉಲ್ಲಾಸ್‌ ಕುಮಾರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕೆ. ನಾರಾಯಣ ಪೂಜಾರಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ಸದಸ್ಯರಾದ ನವೀನ್‌ ಬಾಂಜೆ ಮಿನಿಡೈರಿ ಹೊಂದಿದ್ದಾರೆ ಹಾಗೂ ಮಹಾಬಲ ಪೂಜಾರಿ, ಸಂತೋಷ್‌ ಅತೀ ಹೆಚ್ಚು ಹಾಲು ಪೂರೈಕೆ ಮಾಡುತ್ತಿದ್ದಾರೆ. ಸಂಸ್ಥೆಯು ಆಡಳಿತ ಕಚೇರಿ, ಹಾಲು ಸಂಗ್ರಹಣೆ, ಪಶು ಆಹಾರ ಮಾರಾಟಕ್ಕೆ ಪ್ರತ್ಯೇಕ ಸ್ವಂತ ಕಟ್ಟಡವನ್ನು ಹೊಂದಿದೆ.

ಸಂಘದ ಮೂಲಕ ಜಾನು ವಾರುಗಳಿಗೆ ಕೃತಕ ಗರ್ಭಧಾ ರಣೆ ಸೌಲಭ್ಯ ಹಾಗೂ ಒಕ್ಕೂಟದ ವೈದ್ಯರಿಂದ ಜಾನುವಾರುಗಳ ತಪಾಸಣೆ, ಚಿಕಿತ್ಸೆ, ಸದಸ್ಯರಿಗೆ ಹೈನುಗಾರಿಕೆಯ ಕುರಿತು ನಿರಂತರ ಮಾಹಿತಿ ಶಿಬಿರಗಳು, ಗುಣಮಟ್ಟದ ಹಾಲು ಉತ್ಪಾದನೆ ಬಗ್ಗೆ ಮಾಹಿತಿ ಮತ್ತು ಹೈನುಗಾರಿಕೆಗೆ ಪೂರಕವಾದ ಸಂಪನ್ಮೂಲದ ಕುರಿತು ಮಾಹಿತಿ, ಹೆಚ್ಚು ಹಾಲು ಪೂರೈಸುವವರಿಗೆ ಬಹುಮಾನ, ವಿದ್ಯಾರ್ಥಿವೇತನ ಮುಂತಾದ ಸೌಕರ್ಯಗಳನ್ನು ನೀಡ ಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಹಾಲು ಉತ್ಪಾದನೆ ಪ್ರಮಾಣ ಏರಿಕೆಯಾಗಿದೆ.

ಪ್ರಶಸ್ತಿ ಪುರಸ್ಕಾರ
2011ನೇ ಸಾಲಿನಲ್ಲಿ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಅತ್ಯುತ್ತಮ ಸಂಘವೆಂಬ ಪ್ರಶಸ್ತಿ ಹಾಗೂ ಕೆ.ಗೋಪಾಲ ಹೊಳ್ಳರಿಗೆ ಒಕ್ಕೂಟ ವ್ಯಾಪ್ತಿಯ ಅತ್ಯುತ್ತಮ ಕಾರ್ಯನಿರ್ವಹಣಾಧಿಕಾರಿ ಪ್ರಶಸ್ತಿ ದೊರೆತಿದೆ.

ಸಂಘವು ಆರಂಭದಿಂದ ಹೈನುಗಾರರ ಬೆಳವಣಿಗೆಗೆ ಮಹತ್ವವನ್ನು ನೀಡುತ್ತ ಬಂದಿದೆ. ಹೀಗಾಗಿ 2018-19ನೇ ಸಾಲಿನಲ್ಲಿ ಶೇ.65ಬೋನಸ್‌, ಶೇ.20ಡಿವಿಡೆಂಡ್‌ ನೀಡಲಾಗಿದೆ ಹಾಗೂ ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
-ಕೆ.ಉಲ್ಲಾಸ್‌ ಶೆಟ್ಟಿ, ಅಧ್ಯಕ್ಷರು

ಅಧ್ಯಕ್ಷರು
ಕೆ. ಭುಜಂಗ ಹೆಗ್ಡೆ, ಕೆ.ಪ್ರಭಾಕರ ಶೆಟ್ಟಿ, ಕೆ. ಶಿವರಾಮ್‌ ಶೆಟ್ಟಿ, ಎಚ್‌.ಅಣ್ಣಯ್ಯ ಹೆಗ್ಡೆ, ವೆಂಕಟರಮಣ ಹೊಳ್ಳ, ಉದಯಚಂದ್ರ ಶೆಟ್ಟಿ, ಮಂಜುನಾಥ ಹೆಬ್ಟಾರ್‌, ಕೆ. ಉಲ್ಲಾಸ್‌ ಕುಮಾರ್‌ ಶೆಟ್ಟಿ (ಹಾಲಿ )
ಕಾಯದರ್ಶಿ:
ಕೆ.ಪದ್ಮಶೇಖರ ಹೊಳ್ಳ, ಕೆ.ಗೋಪಾಲ ಹೊಳ್ಳ, ಕೆ. ನಾರಾಯಣ ಪೂಜಾರಿ (ಹಾಲಿ)

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.