ಜಿಲ್ಲೆಯಲ್ಲಿ ಎಚ್‌1ಎನ್‌1 ಪ್ರಕರಣ ಇಳಿಕೆ


Team Udayavani, Feb 29, 2020, 6:38 PM IST

tk-tdy-1

ಸಾಂದರ್ಭಿಕ ಚಿತ್ರ

ತುಮಕೂರು: ಎಚ್‌1ಎನ್‌1 ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು, ಕಳೆದ ವರ್ಷ 4 ಜನ ಮೃತಪಟ್ಟಿದ್ದರು. ಪ್ರಸ್ತುತ ವರ್ಷ ಸಂಶಯಾಸ್ಪದವಾಗಿ ಒಬ್ಬರು ಮೃತಪಟ್ಟಿದ್ದು, 10 ಜನರಿಗೆ ಸೋಂಕು ಇರುವ ಅನುಮಾನದಿಂದ ರಕ್ತಪರೀಕ್ಷೆ ಮಾಡಲಾಗಿದೆ. ಇದರಲ್ಲಿ ಒಬ್ಬರಿಗೆ ಎಚ್‌ 1ಎನ್‌1 ತಗುಲಿರುವುದು ದೃಢಪಟ್ಟಿದೆ.

2009ರಲ್ಲಿ ವಿಶ್ವದಾದ್ಯಂತ ವ್ಯಾಪಕವಾಗಿ ಹರಡಿ ಭಾರತಕ್ಕೂ ಕಾಲಿಟ್ಟು ಕರ್ನಾಟಕದ ಜನರನ್ನು ಬೆಚ್ಚಿ ಬೀಳಿಸಿದ್ದ ಎಚ್‌1ಎನ್‌1 ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದು ಪ್ರಾರಂಭದಲ್ಲಿಯೇ 59 ಜನರಲ್ಲಿ ರೋಗದ ಲಕ್ಷಣ ಕಂಡುಬಂದಿತ್ತು. ಅದರಲ್ಲಿ ಒಂದೇ ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದರು. ಪ್ರತಿ ವರ್ಷವೂ ಅಲ್ಲೊಂದು ಇಲ್ಲೊಂದು ಹಂದಿಜ್ವರದ ಪ್ರಕರಣ ಪತ್ತೆಯಾಗುತ್ತಿದ್ದವು. ಉಸಿರಾಟದ ತೊಂದರೆ, ಜ್ವರ, ತಲೆನೋವು, ಮೈ,ಕೈ, ನೋವಿನಿಂದ ಬಳಲಿ ಕೊನೆಗೆ ರೋಗ ಗುಣಮುಖವಾಗದೆ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತಿತ್ತು. ಜನರಲ್ಲಿ ಹೆಚ್ಚು ಅರಿವು ಮೂಡಿದಂತೆ ಇಂತಹ ಮಾರಕರೋಗ ಹತೋಟಿಗೆ ಬರುತ್ತಿದೆ.

ಜಿಲ್ಲೆಯಲ್ಲಿ 2014ರಲ್ಲಿ ಹೆಚ್ಚು ರೋಗದ ಲಕ್ಷಣ ಕಂಡು ಬಂದಿತ್ತು. 47 ಜನರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿ 7 ಜನರಿಗೆ ಹಂದಿಜ್ವರ ದೃಢವಾಗಿತ್ತು. ಅದರಲ್ಲಿ ಇಬ್ಬರು ಮೃತಪಟ್ಟಿದ್ದರು. 2015ರಲ್ಲಿ 5 ಜನರಿಗೆ ರೋಗ ಲಕ್ಷಣಗಳು ಕಂಡು ಬಂದಿತ್ತು. ಅದರಲ್ಲಿ 3 ಜನ ಮೃತಪಟ್ಟಿದ್ದರು. 2016ರಲ್ಲಿ ಜಿಲ್ಲೆಯಲ್ಲಿ 98 ರಕ್ತ ಪರೀಕ್ಷೆ ಮಾಡಿಸಲಾಗಿತ್ತು. 9 ಜನರಲ್ಲಿ ರೋಗದ ಲಕ್ಷಣ ಕಂಡುಬಂದು ಮೂವರು ಮೃತಪಟ್ಟಿದ್ದರು.

2017ರಲ್ಲಿ 187 ಜನರ ರಕ್ತಮಾದರಿ ಪರೀಕ್ಷಿಸಲಾಗಿತ್ತು. ಅದರಲ್ಲಿ 36 ಜನರಿಗೆ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು. 2018ರಲ್ಲಿ 130 ಜನರ ರಕ್ತ ಪರೀಕ್ಷಿಸಿದಾಗ 25 ಜನರಲ್ಲಿ ಹಂದಿಜ್ವರ ಕಾಣಿಸಿಕೊಂಡು, 12 ಜನ ಮೃತಪಟ್ಟಿದ್ದರು. 2019ರಲ್ಲಿ 144 ರಕ್ತ ಪರೀಕ್ಷೆ ಮಾಡಲಾಗಿ 22 ಜನರಿಗೆ ರೋಗಲಕ್ಷಣ ಕಂಡು ಬಂದು ನಾಲ್ವರು ಮೃತಪಟ್ಟಿದ್ದರು. ಪ್ರಸ್ತುತ ವರ್ಷ 2020ರ ಫೆಬ್ರವರಿ 28ರ ವೇಳೆಗೆ 10 ಜನರ ರಕ್ತ ಮಾದರಿ ಪರೀಕ್ಷಿಸಿದ್ದು, ಅದರಲ್ಲಿ ಒಬ್ಬರಿಗೆ ಎಚ್‌1ಎನ್‌1 ಇರುವುದರ ಬಗ್ಗೆ ದೃಢಪಟ್ಟಿದ್ದು, ಒಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ.

ಈ ಅವಧಿಯಲ್ಲಿ ತೀವ್ರತೆ ಪಡೆದುಕೊಳ್ಳುತ್ತಿದ್ದ ಹಂದಿಜ್ವರ ಜನರ ಜಾಗೃತಿ ಮತ್ತು ರೋಗ ಲಕ್ಷಣ ಕಂಡು ಬಂದ ತಕ್ಷಣ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ರೋಗದಿಂದ ಮೃತಪಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ.

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.