ಗಮಕ ಕಲೆ ಪ್ರವರ್ಧಮಾನಕ್ಕೆ ತರುವ ಕೆಲಸವಾಗಲಿ: ಚಂದ್ರಶೇಖರ ಕೆದ್ಲಾಯ

 ಜಿಲ್ಲಾ ಮಟ್ಟದ ಗಮಕ ಸಮ್ಮೇಳನ ಉದ್ಘಾಟನೆ

Team Udayavani, Mar 1, 2020, 5:44 AM IST

GAMAKA-min

ಉಡುಪಿ: ಕರಾವಳಿ ಭಾಗದಲ್ಲಿ ಹಿಂದೆ ಇದ್ದ ಗಮಕ ಕಲೆಯನ್ನು ಪ್ರವರ್ಧಮಾನಕ್ಕೆ ತರುವ ಕೆಲಸ ಆಗಲಿ ಎಂದು ಗಮಕಿ ಚಂದ್ರಶೇಖರ ಕೆದ್ಲಾಯ ತಿಳಿಸಿದರು.

ಬೆಂಗಳೂರು ಕರ್ನಾಟಕ ಗಮಕ ಕಲಾ ಪರಿಷತ್‌, ಉಡುಪಿ ಜಿಲ್ಲಾ ಘಟಕ ಮತ್ತು ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶನಿವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಗಮಕ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಯಕ ತಾನು ಅರ್ಥ ಮಾಡಿಕೊಂಡು ಭಾವವನ್ನು ಹಾಡಿದರೆ ಕೇಳುಗರಿಗೆ ಮುದ ನೀಡುತ್ತದೆ. ತಾಳ ಬದ್ಧ, ಛಂದೋಬದ್ಧವಾಗಿಯೂ ಹಾಡಬಹುದು. ಆದರೆ ಪದವಿಂಗಡಣೆ ಮಾಡುವಾಗ ಅನರ್ಥವಾಗದಂತೆ ಎಚ್ಚರ ವಹಿಸಬೇಕು. ಗಾಯನ ಹಾವ -ಭಾವ ಮಿತ ಆಗಿರಬೇಕು. ಭಾವವಿಲ್ಲದೆ ಹಾಡಿದಾಗ ಗಾಯನ ಮನ ಮುಟ್ಟುವುದಿಲ್ಲ. ಗಮಕ ಗಾಯನದ ಜತೆ ವ್ಯಾಖ್ಯಾನವು ಇರುತ್ತದೆ. ಕತೆ ಹೇಳುವುದು, ಅರ್ಥವಿವರಣೆ ನೀಡುವುದು ಇಷ್ಟಕ್ಕೆ ಸೀಮಿತವಾಗದೆ ಕಾವ್ಯ ಸೌಂದರ್ಯವನ್ನು ಧ್ವನಿಯಲ್ಲಿ ಬಿಂಬಿಸಬೇಕೆಂದು ಅವರು ಅಭಿಪ್ರಾಯಿಸಿದರು.

ಬೆಂಗಳೂರು ಕರ್ನಾಟಕ ಗಮಕ ಪರಿಷತ್‌ನ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ, ಡಾ| ವಾಸುದೇವ ಎಚ್‌. ಆರ್‌. ಹೊಸಹಳ್ಳಿ ಮಾತನಾಡಿದರು.ಸಾಹಿತಿ ಬೆಳಗೋಡು ರಮೇಶ್‌ ಭಟ್‌ ಹಾಗೂ ಚಂದ್ರಶೇಖರ ಕೆದ್ಲಾಯ ಅವರನ್ನು ಸಮ್ಮಾನಿಸಲಾಯಿತು.

ದ.ಕ ಜಿಲ್ಲಾ ಅಧ್ಯಕ್ಷ ಪ್ರೊ| ಮಧೂರು ಮೋಹನ ಕಲ್ಲೂರಾಯ, ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಸತೀಶ್‌ ಕುಮಾರ ಕೆಮ್ಮಣ್ಣು, ತಾ| ಘಟಕದ ಗೌರವಾಧ್ಯಕ್ಷ ಮಧೂರು ಬಾಲಸುಬ್ರಹ್ಮಣ್ಯಂ, ತಾ| ಘಟಕದ ಅಧ್ಯಕ್ಷೆ ಯಾಮಿನಿ ಪಿ.ಭಟ್‌, ಕಾರ್ಕಳ ತಾ| ಘಟಕದ ಅಧ್ಯಕ್ಷ ಪ್ರೋ| ನಾರಾಯಣ ಶೇಡಿಕಜೆ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ ಕುಮಾರ್‌ ಕಲ್ಕೂರ, ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಪಿ.ಪಿ.ಸಿ ಕಾಲೇಜಿನ ಗೌರವ ಕಾರ್ಯದರ್ಶಿ ಡಾ| ಜಿ.ಎಸ್‌.ಚಂದ್ರಶೇಖರ್‌, ಕೋಶಾಧಿಕಾರಿ ಪ್ರದೀಪ್‌ ಕುಮಾರ್‌, ಪ್ರಾಂಶುಪಾಲ ಡಾ| ರಾಘವೇಂದ್ರ, ಸಮ್ಮೇಳನದ ಜತೆ ಕಾರ್ಯದರ್ಶಿ ಎ. ಶ್ರೀಕಾಂತ ಉಪಸ್ಥಿತರಿದ್ದರು.

ಸಮ್ಮೇಳನದ ಕಾರ್ಯದರ್ಶಿ ಪ್ರೊ| ಎಂ.ಎಲ್‌. ಸಾಮಗ ಸ್ವಾಗತಿಸಿ, ಪಡುಬಿದ್ರಿಯ ಡಾ| ರಾಘವೇಂದ್ರ ರಾವ್‌ ವಂದಿಸಿದರು. ಸುಜಯೀಂದ್ರ ಹಂದೆ ಎಚ್‌. ನಿರೂಪಿಸಿದರು.

ಗಮಕದಲ್ಲಿ ಹಲವು ಪ್ರಭೇದಗಳು: ಸ್ವಾಮೀಜಿ
ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಗಮಕವನ್ನು ಬಯಲಾಟ ತಾಳಮದ್ದಳೆ, ಹರಿಕತೆ, ವಾಚನ-ಪ್ರವಚನ ಮೊದಲಾದ ವಿಧಗಳಲ್ಲಿ ಗುರುತಿಸಬಹುದಾಗಿದೆ. ಆಚಾರ್ಯ ಮಧ್ವರ ಕಾಲದಿಂದಲೂ ಗುರುತಿ ಸಿಕೊಂಡಿರುವ ಈ ಗಮಕದ ಮೂಲವನ್ನು ಕಾಪಾಡಿಕೊಂಡು ಹೋಗುವಂತೆ ಅವರು ತಿಳಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.