ಮಗ ಕವನ ಹೇಳಿದ ದಿನವೇ ರೈತ ಆತ್ಮಹತ್ಯೆ!
Team Udayavani, Feb 29, 2020, 11:48 PM IST
ಪುಣೆ: ಸಾಲದ ಬಾಧೆ ತಾಳಲಾರದೆ ಮಹಾರಾಷ್ಟ್ರದ ಅಹ್ಮದ್ನಗರದ ಪಠಾರ್ದಿ ತಾಲೂಕಿನ ಮಲ್ಹಾರಿ ಬತುಳೆ ಎಂಬ ರೈತ ಆತ್ಮಹತ್ಯೆಗೆ ಶರಣಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಪರ್ಯಾಸವೆಂದರೆ, ಆತನ ಪುತ್ರ, ಅದೇ ದಿನ ತನ್ನ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಧೈರ್ಯದಿಂದ ಬಾಳಬೇಕು ಎಂದು ಕವನವೊಂದವನ್ನು ವಾಚಿಸಿದ್ದ. ಅದಾಗಿ ಕೆಲವೇ ಗಂಟೆಗಳಲ್ಲಿ ಮನೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಜಾರ್ವಾಡಿಯಲ್ಲಿ ವಾಸವಾಗಿದ್ದ ಪಠಾರ್ದಿ ತನ್ನ ತಂಗಿಯ ಮದುವೆಗಾಗಿ ಸಾಲ ಮಾಡಿದ್ದ. ಸಾಲ ತೀರಿಸಲಾಗದ ಆತ ಗುರುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿಸಿದ್ದಾರೆ.
ಅದೇ ದಿನ ಆತನ ಪುತ್ರ ಪ್ರಶಾಂತ್ ಬತುಲೆ, ತನ್ನ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮರಾಠಿ ಭಾಷಾ ದಿನಾಚರಣೆಯಲ್ಲಿ ರೈತರ ಆತ್ಮಸ್ಥೈರ್ಯ ಹೆಚ್ಚಿಸುವಂಥ ಕವಿತೆ ವಾಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್