ರಬಾಡ ಗಾಯಾಳು; ಭಾರತ ಪ್ರವಾಸಕ್ಕಿಲ್ಲ
Team Udayavani, Mar 1, 2020, 6:11 AM IST
ಜೊಹಾನ್ಸ್ಬರ್ಗ್: ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗಾಗಿ ಮಾರ್ಚ್ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾಕ್ಕೆ ಭಾರೀ ಆಘಾತವೊಂದು ಎದುರಾಗಿದೆ.
ಪ್ರಮುಖ ವೇಗಿ ಕಾಗಿಸೊ ರಬಾಡ ಗಾಯಾಳಾಗಿ ಈ ಸರಣಿಯಿಂದ ಹೊರಗುಳಿಯಲಿದ್ದಾರೆ. ಅಷ್ಟೇ ಅಲ್ಲ, ಈಗ ನಡೆಯುತ್ತಿರುವ ಆಸ್ಟ್ರೇಲಿಯ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ.
ಆಸ್ಟ್ರೇಲಿಯ ವಿರುದ್ಧದ ಅಂತಿಮ ಟಿ20 ಪಂದ್ಯದ ವೇಳೆ ರಬಾಡ ತೊಡೆಯ ಸ್ನಾಯು ಸೆಳೆತಕ್ಕೆ ಸಿಲುಕಿದ್ದು, ಮುಂದಿನ 4 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ತಂಡದ ವೈದ್ಯ ಶುಯೆಬ್ ಮಂಜ್ರಾ ಹೇಳಿದ್ದಾರೆ.
ಐಪಿಎಲ್ ವೇಳೆ ಅವರು ಕ್ರಿಕೆಟಿಗೆ ಮರಳುವ ಸಾಧ್ಯತೆ ಇದೆ. ರಬಾಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ