ಅತ್ಯಾಚಾರ ಪ್ರಕರಣ : ಜೈಲು ಶಿಕ್ಷೆಗೊಳಗಾಗಿರುವ ಕ್ರೈಸ್ತ ಧರ್ಮಗುರು ಉಚ್ಛಾಟನೆ
Team Udayavani, Mar 1, 2020, 4:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರಂ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತಾಗಿ ತನ್ನ ಶೂನ್ಯ ಸಹನೆಯನ್ನು ಪ್ರದರ್ಶಿಸಿರುವ ವ್ಯಾಟಿಕನ್ ಅತ್ಯಾಚಾರ ಆರೋಪ ಸಾಬೀತುಗೊಂಡು ಇದೀಗ ಜೈಲುಶಿಕ್ಷೆಯನ್ನು ಅನುಭವಿಸುತ್ತಿರುವ ಕೇರಳದ ಧರ್ಮಗುರುವೊಬ್ಬರನ್ನು ಅವರ ಎಲ್ಲಾ ಧಾರ್ಮಿಕ ಕರ್ತವ್ಯ ಹಾಗೂ ಹಕ್ಕುಗಳಿಂದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಅವರು ಉಚ್ಛಾಟಿಸಿದ್ದಾರೆ. ಈ ಮಾಹಿತಿಯನ್ನು ಚರ್ಚ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಇಲ್ಲಿನ ಮನಾಂತವಾದಿ ಡಯೋಸಿಸ್ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತುಗೊಂಡು ಇದೀಗ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಿರಿಯೋ-ಮಲಬಾರ್ ಚರ್ಚ್ ಧರ್ಮಗುರು ರಾಬಿನ್ ವಡಕ್ಕುಂಶ್ಯೇರಿ ಅವರೇ ವ್ಯಾಟಿಕನ್ ನಿಂದ ಉಚ್ಛಾಟನೆಗೊಳಗಾದವರಾಗಿದ್ದಾರೆ.
2017ರಲ್ಲಿ ಈ ಪ್ರಕರಣ ಬೆಳಕಿಗೆ ಬಂದ ದಿನದಂದೇ ರಾಬಿನ್ ಅವರನ್ನು ಧರ್ಮಗುರು ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ತಲಶ್ಯೇರಿಯ ಪೋಕ್ಸೋ ನ್ಯಾಯಾಲಯವು ಕಳೆದ ವರ್ಷವಷ್ಟೇ ರಾಬಿನ್ ವಡಕ್ಕುಂಶ್ಯೇರಿ ಅವರಿಗೆ 20 ವರ್ಷದ ಕಠಿಣ ಸೆರೆವಾಸ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ