ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ: ನಡಹಳ್ಳಿ


Team Udayavani, Mar 1, 2020, 4:27 PM IST

1-March-26

ತಾಳಿಕೋಟೆ: ಅಭಿವೃದ್ಧಿ ದೃಷ್ಟಿಯಿಂದ ಕಳೆದ 25 ವರ್ಷಗಳಿಂದ ಹಿಂದುಳಿದಂತ ಹರನಾಳ ಗ್ರಾಮ ಇದಾಗಿದೆ. ಈ ಗ್ರಾಮದ ರಸ್ತೆಗಳು ಅಭಿವೃದ್ಧಿಯಾಗಬೇಕೆಂಬ ಬಯಕೆ ಗ್ರಾಮಸ್ಥರದ್ದಾಗಿತ್ತು. ಅವರ ಆಶಯದಂತೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗಳೆಲ್ಲವನ್ನು ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆಂದು ಶಾಸಕ ಎ.ಎಸ್‌. ಪಾಟೀಲ(ನಡಹಳ್ಳಿ) ಹೇಳಿದರು.

ಹರನಾಳ ಗ್ರಾಮದಿಂದ ಕಲ್ಲದೇವನಹಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ವತಿಯಿಂದ 1.8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಹರನಾಳ ಗ್ರಾಮದಿಂದ ತಾಳಿಕೋಟೆ ಸಂಪರ್ಕಿಸುವ ಡೋಣಿ ನದಿಗೆ ಅಡ್ಡಲಾದ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದೇನೆ. ಈಗ ಟೆಂಡರ್‌ ಪ್ರೋಗ್ರೆಸ್‌ ಮುಗಿದಿದೆ. ಇನ್ನೂ ಕೆಲ ದಿನಗಳಲ್ಲಿ ಈ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದೇನೆಂದ ಅವರು, ಹರನಾಳ ಗ್ರಾಮದಿಂದ ನಾಗೂರ ಗ್ರಾಮಕ್ಕೆ ರಸ್ತೆ ಸುಧಾರಣೆ ಆಗಬೇಕೆಂಬ ಬೇಡಿಕೆಯಿದೆ. ಆ ರಸ್ತೆ ಸುಧಾರಣೆಗೆ ಎಸ್ಟಿಮೇಟ್‌ ಕಾರ್ಯ ನಡೆದಿದೆ. ಅದನ್ನು ಕೂಡಾ ಕೆಲ ದಿನಗಳಲ್ಲಿ ಸುಧಾರಣೆ ಮಾಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.

ಹರನಾಳ ಗ್ರಾಮದಲ್ಲಿಯೂ ಸಿಸಿ ರಸ್ತೆಯನ್ನು ಮಾಡಿಸುವ ಸಲುವಾಗಿ ಮುಖಂಡರಾದ ನಿಂಗಪ್ಪಗೌಡ ಬಪ್ಪರಗಿ ಅವರು ನನಗೆ ತಿಳಿಸಿದ್ದಾರೆ. ಸಿಸಿ ರಸ್ತೆ ಸುಧಾರಣೆಗೆ 1 ಕೋಟಿ ರೂ. ಸರ್ಕಾರದಿಂದ ಬಿಡುಗಡೆಗೊಳಿಸಿ ಆ ಕಾರ್ಯವನ್ನು ಯಶಸ್ವಿ ಮಾಡಿ ಕೊಡುತ್ತೇನೆಂದ ಅವರು, ಈ ಗ್ರಾಮಕ್ಕೆ ಅವಶ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು.

ಡೋಣಿ ನದಿ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವಂತಹ ಎಲ್ಲ ರೈತರಿಗೆ ಶೀಘ್ರ ಗತಿಯಲ್ಲಿ ಸರ್ಕಾರದಿಂದ 30 ದಿನದಲ್ಲಿ ಪರಿಹಾರ ಕೊಡಿಸುವಂತಹ ಕೆಲಸ ಮಾಡಿದ್ದು ಎಲ್ಲ ರೈತರು ಪಡೆದುಕೊಂಡಿದ್ದಾರೆ. ರೈತ ಪರ ಸರ್ಕಾರವಾಗಿರುವ ಕೇಂದ್ರ ಸರ್ಕಾರವು ರೈತರಿಗೆ ಬೀಜ ಗೊಬ್ಬರ ಕೊಂಡುಕೊಳ್ಳುವುದಕ್ಕೆ ಪ್ರತಿ ವರ್ಷ 10 ಸಾವಿರ ರೂ.ಯನ್ನು ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ರೈತರ ಅಕೌಂಟ್‌ಗಳಿಗೆ ನೇರವಾಗಿ ಒದಗಿಸಿ ಕಷ್ಟಕ್ಕೆ ನೇರವಾಗಿದ್ದಾರೆಂದರು.

ಮುಂದಿನ ದಿನಗಳಲ್ಲಿ ಮತಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡುವುದರ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಎಲ್ಲ ರೀತಿಯಿಂದಲೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು. ಜಿಪಂ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಪಾಟೀಲ, ತಾಪಂ ಸದಸ್ಯ ಬಸವರಾಜ ಗುಳಬಾಳ, ಸಾಹೇಬಗೌಡ ಮಕಾಶಿ, ನಿಂಗಪ್ಪಗೌಡ ನಾಗೂರ, ಈರಣ್ಣ ಹೋಕ್ರಾಣಿ, ಮಾನಪ್ಪಗೌಡ ಬಿರಾದಾರ, ಚನ್ನಪ್ಪ ಪೂಜಾರಿ, ನಿಂಗಪ್ಪ ನಾಗೂರ, ಅಯ್ಯಪ್ಪ ತುಂಬಗಿ, ಧನರಾಜ ಯಡಹಳ್ಳಿ, ದೇವಣ್ಣ ಪೂಜಾರಿ, ಸಂಗಪ್ಪ ಚಳ್ಳಗಿ, ಬಸನಗೌಡ ಪೂಜಾರಿ, ಮಲಕಪ್ಪ ಬೊಮ್ಮನಹಳ್ಳಿ, ಲೋಕೋಪಯೋಗಿ ಇಲಾಖೆ ಅಭಿಯಂತರ ಜಿ.ಎಸ್‌. ಪಾಟೀಲ, ಕಿರಿಯ ಅಭಿಯಂತರ ಅಶೋಕ ಬಿರಾದಾರ, ಜೆಇ ಸೋಮನಾಥ ಕುಳಗೇರಿ ಇದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.