ಪಾಕ್ ಪರ ಘೋಷಣೆ ಕೂಗಿದ್ರೆ ಸರಕಾರ ಸುಮ್ಮನಿರಲ್ಲ : ಕೋಟ
Team Udayavani, Mar 1, 2020, 8:27 PM IST
ಶಿರಸಿ: ಪಾಕಿಸ್ತಾನ ಪರ ಘೋಷಣೆ, ಭಾರತಕ್ಕೆ ವಿರೋಧದ ಜಯಕಾರ ಕೂಗಿದವರ ವಿರುದ್ಧ ಸರಕಾರ ಸುಮ್ಮನಿರಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಲದ ಹೆಗ್ಗಣ, ಹಾವುಗಳು ಹೊರಬರುತ್ತಿವೆ. ಇಲ್ಲಿನ ಗಾಳಿ-ನೀರು ಕುಡಿದು ಭಾರತದ ವಿರುದ್ಧ ಮಾತನಾಡಿದರೆ ಜೈಲಿಗೆ ಕಳಿಸುತ್ತೇವೆ ಎಂದರು. ದೊರೆಸ್ವಾಮಿ ಹಾಗೂ ಯತ್ನಾಳರ ಮಾತುಗಳನ್ನು ಕೇಳಿದ್ದೇವೆ. ಈ ಗೊಂದಲ ಇತ್ಯರ್ಥ ಆಗಬಹುದೆಂಬ ನಂಬಿಕೆ ಇದೆ ಎಂದರು.
ಸಿಎಂ ಪರಮಾಧಿಕಾರ:
ಉಸ್ತುವಾರಿ, ನಿಗಮ-ಮಂಡಳಿ ನೇಮಕ, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಸಂಬಂಧ ಸ್ವಲ್ಪ ವಿಳಂಬ ಆಗಿದ್ದರೂ ಸಿಎಂ ಆಯಾ ಕಾಲಕ್ಕೆ ರಾಜ್ಯದ ಅಧ್ಯಕ್ಷರ, ಕೇಂದ್ರದ ನಾಯಕರ ಸಹಮತ ಪಡೆದು ಸಮರ್ಪಕವಾದ ತೀರ್ಮಾನ ಕೈಗೊಳ್ಳುತ್ತಾರೆ. ಸ್ವಾಭಾವಿಕವಾಗಿ ಆಯಾ ಜಿಲ್ಲೆಯವರಿಗೆ ಉಸ್ತುವಾರಿ ಸಿಗುತ್ತದೆ. ಆದರೆ, ಕೆಲವೊಮ್ಮೆ ಆಚೀಚೆ ಆಗಬಹುದು. ಉಸ್ತುವಾರಿಗಳು ಎಂದರೆ ಆಯಾ ಜಿಲ್ಲೆಗಳ ಅಭಿವೃದ್ಧಿ, ಆಗುಹೋಗುಗಳನ್ನು ನೋಡಿಕೊಳ್ಳಬೇಕಾದವರು ಎಂದರ್ಥ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ