ಮಾರುಕಟ್ಟೆಗಳಲ್ಲಿ ಮೀನಿನ ಕೊರತೆ; ಗಗನಕ್ಕೇರುತ್ತಿದೆ ದರ

ಕಡಲಿಗಿಳಿದರೂ ಬರಿಗೈಯಲ್ಲಿ ಬರುತ್ತಿವೆ ಬೋಟುಗಳು

Team Udayavani, Mar 2, 2020, 5:47 AM IST

fish-in-markets

ಗಂಗೊಳ್ಳಿ ಮ್ಯಾಂಗನೀಸ್‌ ವಾರ್ಫ್‌ನಲ್ಲಿ ಅನೇಕ ಬೋಟ್‌ಗಳು ಲಂಗರು ಹಾಕಿರುವುದು.

ಗಂಗೊಳ್ಳಿ: ಉತ್ತಮ ಮೀನಿನ ನಿರೀಕ್ಷೆಯಲ್ಲಿ ಕಡಲಿಗಿಳಿಯುವ ಮೀನುಗಾರರು ಬರಿಗೈಯಲ್ಲಿ ವಾಪಾಸಾಗುತ್ತಿರುವುದು ಒಂದೆಡೆಯಾದರೆ, ಮಾರುಕಟ್ಟೆಗಳಲ್ಲಿ ಬೇಡಿಕೆಯಷ್ಟು ಮೀನು ಸಿಗುತ್ತಿಲ್ಲ, ಇದ್ದ ಮೀನಿಗೆ ದುಬಾರಿ ಬೆಲೆ ಇನ್ನೊಂದೆಡೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಮೀನುಗಾರಿಕೆಯನ್ನೇ ನೆಚ್ಚಿಕೊಂಡಿರುವ ಗಂಗೊಳ್ಳಿ ಪೇಟೆಯಲ್ಲಿ ವ್ಯಾಪಾರ – ವಹಿವಾಟಿಗೆ ಮತ್ಸ್ಯಕ್ಷಾಮದ ಬಿಸಿ ತುಸು ಜೋರಾಗಿಯೇ ತಟ್ಟುತ್ತಿದೆ.

ಈ ಮೀನುಗಾರಿಕಾ ಋತುವಿನ ಆರಂಭದಿಂದಲೇ ಒಂದಿಲ್ಲೊಂದು ಪ್ರತಿಕೂಲ ಪರಿಸ್ಥಿತಿಯನ್ನೇ ಎದುರಿಸಿ ಕೊಂಡು ಬರುತ್ತಿರುವ ಮೀನುಗಾರರಿಗೆ ಈಗ ಮತ್ತಷ್ಟು ಸಂಕಷ್ಟಕ್ಕೀಡು ಮಾಡುವಂತಾಗಿದೆ.

ಮೀನುಗಾರಿಕೆಗೆ ತೆರಳಿದರೂ ಖರ್ಚು ಮಾಡಿದಷ್ಟು ಕೂಡ ಮೀನು ಸಿಗದಂತಾಗಿದೆ. ಕೆಲ ಬೋಟು, ದೋಣಿಗಳಂತೂ ಕೆಲ ಸಂದರ್ಭಗಳಲ್ಲಿ ಬರಿಗೈಯಲ್ಲಿ ಬಂದ ನಿದರ್ಶನಗಳು ಇದೆ.

ದರ ಏರಿಕೆ
ಮಾರುಕಟ್ಟೆಗಳಲ್ಲಿ ಅಗತ್ಯದಷ್ಟು ಮೀನು ಸಿಗುತ್ತಿಲ್ಲ. ಇದರಿಂದ ಮೀನಿನ ದರ ಗಗನಕ್ಕೇರಿದೆ. ಗಂಗೊಳ್ಳಿಯಲ್ಲಿ 1 ಕೆ.ಜಿ. ಬಂಗುಡೆಗೆ 150 ರಿಂದ 160 ರೂ. ಇದ್ದರೆ, ಕುಂದಾಪುರ ಮತ್ತಿತರ ಮಾರುಕಟ್ಟೆಗಳಲ್ಲಿ 20-30 ರೂ. ಹೆಚ್ಚಿರುತ್ತದೆ. ಬೂತಾಯಿ (ಬೈಗೆ) 120 ರಿಂದ 130 ರೂ. ಇದ್ದರೆ, ಬೇರೆಡೆ 150 ರೂ.ವರೆಗೆ ಮಾರಾಟವಾಗುತ್ತಿದೆ. ಆದರೆ ಈ ಬಾರಿ ಮಾರುಕಟ್ಟೆಗಳಲ್ಲಿ ಬೈಗೆ ಕಾಣಲು ಸಿಗುವುದೇ ಅಪರೂಪ ಎನ್ನುವಂತಾಗಿದೆ. ಇನ್ನು ಅಂಜಲ್‌ 560-600 ರೂ. ಇದ್ದರೆ, ಬೇರೆ ಕಡೆಗಳಲ್ಲಿ ಇದಕ್ಕಿಂತ 50 ರೂ. ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿದೆ.

ಖಾದ್ಯವೂ ದುಬಾರಿ
ಮತ್ಸ್ಯ ಪ್ರಿಯರಿಗಂತೂ ಈ ವರ್ಷ ಕಹಿಯಾಗಿದೆ. ಮೀನಿನ ದರದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಹೋಟೆಲ್‌ಗ‌ಳಲ್ಲಿಯೂ ಮೀನಿನ ಖಾದ್ಯಗಳ ಬೆಲೆಯೂ ಸಿಕ್ಕಾಪಟ್ಟೆ ಹೆಚ್ಚಳವಾಗಿದೆ. ಕೆಲವೆಡೆಗಳಲ್ಲಿ ಈಗ ಕೆಲವೇ ಕೆಲವು ಮೀನಿನ ಖಾದ್ಯವನ್ನು ಮಾತ್ರ ತಯಾರಿಸಲಾಗುತ್ತಿದೆ. ಈಗ ಮೀನಿಗಿಂತ ಕೋಳಿ ಖಾದ್ಯವೇ ವಾಸಿ ಎನ್ನುತ್ತಿದ್ದಾರೆ ಜನ.

ಸಂಕಷ್ಟದಲ್ಲಿ ಸಾವಿರಾರು ಕುಟುಂಬ
ಗಂಗೊಳ್ಳಿಯಲ್ಲಿ ಪರ್ಸಿನ್‌, ಟ್ರಾಲ್‌ ಬೋಟ್‌, ಪಾತಿ, ಗಿಲ್‌ನೆಟ್‌, ನಾಡದೋಣಿಗಳೆಲ್ಲ ಸೇರಿ ಸುಮಾರು 3,500 ಕ್ಕೂ ಮಿಕ್ಕಿ ಬೋಟುಗಳಿವೆ. ಇನ್ನು ಇಲ್ಲಿ ಈ ಮೀನುಗಾರಿಕೆ ವೃತ್ತಿಯನ್ನೇ ಮಾಡುತ್ತಿರುವವರು 10 ಸಾವಿರಕ್ಕೂ ಅಧಿಕ ಮಂದಿಯಿದ್ದರೆ, ಇದನ್ನೆ ನಂಬಿಕೊಂಡ ಸಾವಿರಾರು ಕುಟುಂಬಗಳು ಇವೆ. ಎಲ್ಲರೂ ಮೀನುಗಾರಿಕೆಯಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.

ಸಾಲ ಪಾವತಿಗೂ ಕುತ್ತು
ಮಾರ್ಚ್‌ ಈ ಆರ್ಥಿಕ ವರ್ಷದ ಕೊನೆಯ ತಿಂಗಳಾಗಿದ್ದು, ಬ್ಯಾಂಕ್‌ಗಳಿಂದ, ಸಹಕಾರಿ ಸಂಘಗಳಿಂದ ಮೀನುಗಾರರು ಮೀನುಗಾರಿಕೆಯನ್ನೇ ನಂಬಿಕೊಂಡು ಸಾಲ ಪಡೆದವರು ಅನೇಕ ಮಂದಿಯಿದ್ದಾರೆ. ಆದರೆ ಈ ಋತುವಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮೀನುಗಾರಿಕೆ ಇಲ್ಲದ ಕಾರಣ, ಸಾಲ ಮರು ಪಾವತಿ ಮಾಡುವುದು ಹೇಗೆ ಎನ್ನುವ ಚಿಂತೆಯಲ್ಲಿ ಮೀನುಗಾರರಿದ್ದಾರೆ.

ಅವಧಿಗೆ ಮುನ್ನವೇ
ಸ್ಥಗಿತ ಸಂಭವ
ಯಾಂತ್ರೀಕೃತ ಮೀನುಗಾರಿಕೆಯು ಆಗಸ್ಟ್‌ನಿಂದ ಆರಂಭಗೊಂಡು ಮೇವರೆಗೆ ಕಾಲಾವಕಾಶವಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಮೀನಿಲ್ಲದೆ, ಗಂಗೊಳ್ಳಿಯಲ್ಲಿ ಅವಧಿಗಿಂತ ಮೊದಲೇ ಮೀನುಗಾರಿಕೆಯನ್ನು ಸ್ಥಗಿತಗೊಳಿಸುವ ಸಂಭವ ಕಂಡು ಬರುತ್ತಿದೆ. ಇಲ್ಲಿರುವ ನೂರಾರು ಬೋಟುಗಳ ಪೈಕಿ ಪ್ರಸ್ತುತ ಮೀನುಗಾರಿಕೆಗೆ ತೆರಳುವುದು ದಿನವೊಂದಕ್ಕೆ ಕನಿಷ್ಠ 10 ಕೂಡ ಇಲ್ಲ. ಹೆಚ್ಚಿನ ಬೋಟು ಮಾಲಕರು ತೆರಳಿದರೂ ಲಾಭಕ್ಕಿಂತ ನಷ್ಟವೇ ಹೆಚ್ಚು ಆಗುವುದಿರಿಂದ ತೆರಳದೇ ಇರುವುದೇ ವಾಸಿ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.

ಶೇ.80 ರಷ್ಟು ಕುಸಿತ
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಗಂಗೊಳ್ಳಿಯ ದಿನಸಿ ಸಾಮಗ್ರಿ, ಇನ್ನಿತರ ವಸ್ತುಗಳ ಅಂಗಡಿಗಳಲ್ಲಿ ಶೇ. 80ರಷ್ಟು ವ್ಯಾಪಾರ – ವಹಿವಾಟು ಕುಸಿತಗೊಂಡಿದೆ. ಈಗ ಇಲ್ಲಿನ ಜನರಲ್ಲಿ ಸಂಪಾದನೆಯೇ ಕಷ್ಟ ಅನ್ನುವಂತಹ ಸ್ಥಿತಿಯಿದೆ. ಮೊದಲೆಲ್ಲ ಒಮ್ಮೆಗೆ 50 ಕೆ.ಜಿ. ಅಕ್ಕಿ ತೆಗೆದುಕೊಳ್ಳುವವರು ಈಗ ಇವತ್ತಿಗೆ ಸಾಕು ಎನ್ನುವಂತೆ ಬರೀ 5 ಕೆ.ಜಿ.ಯಷ್ಟೇ ಖರೀದಿಸಿಕೊಳ್ಳುತ್ತಿದ್ದಾರೆ. ಮೀನುಗಾರರಿಗೆ ಮಾತ್ರವಲ್ಲ ಇಲ್ಲಿನ ವರ್ತಕರಿಗೂ ಇದರ ಬಿಸಿ ಎದುರಾಗಿದೆ.
– ವಿಟಲ ಶೆಣೈ ಗಂಗೊಳ್ಳಿ, ವ್ಯಾಪಾರಿಗಳು – ಸದಸ್ಯರು, ಉಡುಪಿ ಜಿಲ್ಲಾ ವರ್ತಕರ ಸಂಘ

ಎಲ್ಲರಿಗೂ ಸಮಸ್ಯೆ
ಜನರ ಬೇಡಿಕೆಯಷ್ಟು ಮೀನು ಸಿಗುತ್ತಿಲ್ಲ. ಇದ್ದ ಮೀನಿನ ಬೆಲೆ ದುಬಾರಿಯಾಗಿದೆ. ಇದರಿಂದ ಮೀನು ಖರೀದಿಯ ಪ್ರಮಾಣವೂ ಕುಂಠಿತಗೊಂಡಿದೆ. ಮತ್ಸ್ಯಕ್ಷಾಮದಿಂದಾಗಿ ಮೀನುಗಾರರಿಗೆ, ಮೀನು ವ್ಯಾಪಾರಸ್ಥರು, ಅಂಗಡಿ ವ್ಯಾಪಾರಸ್ಥರು, ಐಸ್‌ ಪ್ಲಾಂಟ್‌ನವರು, ವಾಹನ ಚಾಲಕ- ಮಾಲಕರ ಸಹಿತ ಎಲ್ಲರಿಗೂ ಸಮಸ್ಯೆಯಾಗಿದೆ.
– ವಾಸುದೇವ ಖಾರ್ವಿ, ಅಧ್ಯಕ್ಷರು, ಹಸಿ ಮೀನು ವ್ಯಾಪಾರಸ್ಥರ ಸಂಘ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.