ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಲು ಆರಂಭವಾದ ಸಂಸ್ಥೆ

ಅಚಾÉಡಿ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Mar 2, 2020, 5:00 AM IST

Achalady

ಊರಿನ ರೈತರು ಅದರಲ್ಲೂ ಮಹಿಳೆಯರ ಸ್ವಾವಲಂಬನೆ, ಉಪ ಉದ್ಯೋಗ ಸೃಷ್ಟಿಯ ಉದ್ದೇಶದೊಂದಿಗೆ ಹುಟ್ಟಿಕೊಂಡ ಸಂಸ್ಥೆ. ಇದರಿಂದಾಗಿ ಅನೇಕ ಹೈನುಗಾರರು ರೂಪುಗೊಂಡಿದ್ದು ಸಂಘವೂ ಸಾಧನೆಯ ಹಾದಿಯಲ್ಲಿದೆ.

ಕೋಟ: ಊರಿನ ರೈತ ಮಹಿಳೆಯರು ಸೇರಿದಂತೆ ಒಂದಷ್ಟು ಮಂದಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎನ್ನುವ ಆಶಯದೊಂದಿಗೆ ಹುಟ್ಟಿಕೊಂಡ ಅಚ್ಲಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ವರ್ಷಗಳ ಬಳಿಕ ಅತ್ಯುತ್ತಮ ಸಂಘವಾಗಿ ರೂಪು ಪಡೆದಿದೆ.

1991ರಲ್ಲಿ ಸ್ಥಾಪನೆ
1990ಕ್ಕೆ ಮೊದಲು ಊರಿನ ಐದಾರು ಕಿ.ಮೀ. ವ್ಯಾಪ್ತಿಯಲ್ಲಿ ಸಾೖಬ್ರಕಟ್ಟೆ, ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಹೊರತುಪಡಿಸಿ ಬೇರೆ ಹಾಲು ಸಂಘಗಳು ಇರಲಿಲ್ಲ ಮತ್ತು ಜನರಿಗೂ ಹೈನುಗಾರಿಕೆಯ ಕುರಿತು ಹೆಚ್ಚಿನ ಮಾಹಿತಿ ಇರಲಿಲ್ಲ. ಆಗ ಊರಿನ ಒಂದಷ್ಟು ಮಂದಿ ಯುವಕರು ಜತೆಯಾಗಿ ಹಾಲು ಉತ್ಪಾದಕರ ಸಂಘ ಸ್ಥಾಪಿಸುವ ನಿರ್ಧಾರ ಮಾಡಿದರು. ಅನಂತರ ಸಾೖಬ್ರಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಕೇಂದ್ರವೊಂದನ್ನು ಮಧುವನದಲ್ಲಿ ಸ್ಥಾಪಿಸಿದರು. ಒಂದು ವರ್ಷದ ಅನಂತರ ತಮ್ಮದೇ ಸ್ವಂತ ಡೈರಿಯೊಂದನ್ನು ಸ್ಥಾಪಿಸಬೇಕು ಎನ್ನುವ ಆಸೆಯೊಂದಿಗೆ 1991 ಜೂ.7ರಂದು ಕೆನರಾ ಮಿಲ್ಕ್ ಯೂನಿಯನ್‌ ಅಧೀನದಲ್ಲಿ 35 ಸದಸ್ಯರು ಹಾಗೂ 40 ಲೀ. ಹಾಲಿನೊಂದಿಗೆ ಅಚಾÉಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಉದಯವಾಯಿತು.

ಸಂಘ ಸ್ಥಾಪನೆಗೆ ಶ್ರಮ
ಸ್ಥಳೀಯರಾದ ಕೆ.ಕುಶಲ ಶೆಟ್ಟಿ ಇದರ ಸ್ಥಾಪಕಾಧ್ಯಕರು ಹಾಗೂ ಮಂಜು ಮರಕಾಲ ಸ್ಥಾಪಕ ಕಾರ್ಯದರ್ಶಿ. ಸ್ಥಳೀಯರಾದ ಸತ್ಯನಾರಾಯಣ ಅಡಿಗ, ಮಧುವನ ಮಾಧವ ಹೆಗ್ಡೆ, ರಂಗನಾಥ ಅಡಿಗ, ರಾಮ ದಾಸ ಕಿಣಿ, ಬಿ.ಭೋಜ ಶೆಟ್ಟಿ, ಸುರೇಂದ್ರ ಶೆಟ್ಟಿ, ಸಂಸ್ಥೆಯ ಸ್ಥಾಪನೆಗೆ ಶ್ರಮಿಸಿದ್ದರು. 2006ರಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಯಿತು.
ಕೆಲವೇ ವರ್ಷದಲ್ಲಿ ಗ್ರಾಮೀಣ ಮಹಿಳೆಯರ ಸ್ವಾವಲಂಬನೆ ಹಾಗೂ ಉಪವೃತ್ತಿ ಸೃಷ್ಟಿಸಲು ಸಂಘಟನೆ ಯಶಸ್ವಿಯಾಗಿತ್ತು. ಸಂಘದ ಸದಸ್ಯರ ಸಂಖ್ಯೆ, ಹಾಲಿನ ಪ್ರಮಾಣದಲ್ಲೂ ಏರಿಕೆಯಾಗಿತ್ತು. ಮಹಿಳಾ ಸದಸ್ಯರೇ ಹೆಚ್ಚಿದ್ದು, ಹಣ ನೇರವಾಗಿ ಕೈ ಸೇರುತ್ತಿತ್ತು. ಈ ಮೂಲಕ ಇಲ್ಲಿನ ಮಹಿಳೆಯರಿಗೆ ಸ್ವಾವಲಂಬನೆಯ ದಾರಿ ತೋರಿತ್ತು.
ಸದ್ಯ 264ಮಂದಿ ಸದಸ್ಯರಿದ್ದು ದಿನಂಪ್ರತಿ 750 ಲೀ. ಹಾಲು ಸಂಗ್ರಹವಾಗುತ್ತಿದೆ. ಸಂಘದ ಪ್ರಸ್ತುತ ಅಧ್ಯಕ್ಷರಾಗಿ ಕೆ. ಸುರೇಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸಂತೋಷ ಪೂಜಾರಿ ಸೇವೆ ಸಲ್ಲಿಸುತ್ತಿದ್ದಾರೆ.

ಯೋಜನೆಗಳು
ಹಾಲು ಕರೆಯುವ ರಾಸು ಮರಣ ಹೊಂದಿದಾಗ ಸಾಂತ್ವನ ನಿಧಿಯಾಗಿ ಧಪನ ಸಂದರ್ಭ 2 ಸಾವಿರ ರೂ. ಸಂಘದ ವತಿಯಿಂದ ನೀಡಲಾಗುತ್ತಿದೆ. ಶೇ. 70ರಷ್ಟು ರಾಸುಗಳಿಗೆ ಜೀವವಿಮೆ ಮಾಡಿಸುವ ಮೂಲಕ ಉಡುಪಿ ತಾಲೂಕಿನಲ್ಲೇ ಅತೀ ಹೆಚ್ಚು ಜೀವ ವಿಮೆ ಹೊಂದಿದ ಸಂಘ ಎಂಬ ಕೀರ್ತಿಗೆ ಪಾತ್ರವಾಗಿದೆ. ಸರಕಾರದಿಂದ ಸಿಗುವ ಸಬ್ಸಿಡಿ ಹಣ ಶೇ.100ರಷ್ಟು ಹೈನುಗಾರರಿಗೆ ಕರಾರುವಕ್ಕಾಗಿ ಸೇರುವ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ವಿದ್ಯಾರ್ಥಿ ವೇತನ, ಶೈಕ್ಷಣಿಕ ಪ್ರೋತ್ಸಾಹ ಬಹುಮಾನಗಳನ್ನು ನೀಡಲಾಗುತ್ತಿದೆ.

ಪ್ರಶಸ್ತಿ
2015ನೇ ಸಾಲಿನಲ್ಲಿ ತಾಲೂಕು ಮಟ್ಟದ ಉತ್ತಮ ಸಂಘ ಎಂಬ ಪ್ರಶಸ್ತಿ, 2016ನೇ ಸಾಲಿನಲ್ಲಿ ತಾಲೂಕು ಮಟ್ಟದಲ್ಲಿ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವ ಸಂಸ್ಥೆ ಪ್ರಶಸ್ತಿ ದೊರೆತಿದೆ. ಜಿಲ್ಲಾ ಮಟ್ಟದ ಜಾನುವಾರು ಮೇಳಗಳಲ್ಲಿ ಸಂಘದ ಹೈನುಗಾರರ ಹಸುಗಳಿಗೆ ಬಹುಮಾನ ದೊರೆತಿದೆ.

ಹೈನುಗಾರರ ಶ್ರೇಯೋಭಿವೃದ್ಧಿಯ ದೃಷ್ಟಿಯಿಂದ ಸಂಘ ಕಾರ್ಯನಿರ್ವಹಿಸುತ್ತಿದೆ ಹಾಗೂ ಗುಣಮಟ್ಟ, ಸ್ವತ್ಛತೆಯ ಹಾಲು ಉತ್ಪಾದನೆಯಲ್ಲಿ ಯಾವುದೇ ರೀತಿಯ ರಾಜಿ ಇಲ್ಲದೆ ವ್ಯವಹರಿಸುತ್ತಿದೆ. ಸಂಘದ ಅಭಿವೃದ್ಧಿಯನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.
ಕೆ.ಸುರೇಂದ್ರ ಶೆಟ್ಟಿ, ಅಚ್ಲಾಡಿ
ಅಧ್ಯಕ್ಷರು

ಅಧ್ಯಕ್ಷರು
ಕೆ.ಕುಶಲ ಶೆಟ್ಟಿ, ಬಿ. ಭೋಜ ಶೆಟ್ಟಿ, ಗೋಪಾಲಕೃಷ್ಣ ಹೆಗ್ಡೆ, ಎ. ಚಂದ್ರಶೇಖರ್‌ ಶೆಟ್ಟಿ, ಸುರೇಂದ್ರ ಶೆಟ್ಟಿ (ಹಾ)
ಕಾರ್ಯದರ್ಶಿ
ಮಂಜು ಮರಕಾಲ, ಸಂತೋಷ ಪೂಜಾರಿ (ಹಾಲಿ )

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.