ರಾಜ್ಯದ ಕೆಲವೆಡೆ ಮಳೆ ಸಂಭವ
Team Udayavani, Mar 2, 2020, 3:02 AM IST
ಬೆಂಗಳೂರು/ಮಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಕೆ.ಆರ್.ನಗರ ದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 4 ಸೆಂ.ಮೀ.ಮಳೆ ಸುರಿಯಿತು. ಹೊನ್ನಾವರ ಮತ್ತು ಎಚ್.ಡಿ.ಕೋಟೆಯಲ್ಲಿ ತಲಾ 1 ಸೆಂ.ಮೀ.ಮಳೆಯಾಯಿತು. ರಾಜ್ಯದೆಲ್ಲೆಡೆ ಗರಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ.
ಇನ್ನು ಕರಾವಳಿ ಮತ್ತು ಉತ್ತರ ಒಳನಾಡಿನಾದ್ಯಂತ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಕನಿಷ್ಠ ತಾಪಮಾನ ದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿತ್ತು. ಪಣಂಬೂರಿನಲ್ಲಿ ರಾಜ್ಯದಲ್ಲಿಯೇ ಗರಿಷ್ಠ 35 ಡಿ.ಸೆ.ಮತ್ತು ಬೀದರ್ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 17 ಡಿ.ಸೆ.ತಾಪಮಾನ ದಾಖಲಾಯಿತು.
ಮಂಗಳವಾರ ಮುಂಜಾನೆ ವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದರೆ, ಉತ್ತರ ಒಳನಾಡಿ ನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.