ಅಂತರ್ಜಲ ವೃದ್ಧಿಗೆ ಯೋಜನೆ ಸಹಕಾರಿ: ಸುನಿಲ್
108 ಕೋ.ರೂ. ವೆಚ್ಚದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಗುದ್ದಲಿ ಪೂಜೆ
Team Udayavani, Mar 2, 2020, 6:06 AM IST
ಅಜೆಕಾರು: ಅಜೆಕಾರು ಎಣ್ಣೆಹೊಳೆ ಸ್ವರ್ಣಾನದಿ ಏತ ನೀರಾವರಿ ಯೋಜನೆಯು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಬೃಹತ್ ಏತ ನೀರಾವರಿ ಯೋಜನೆಯಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಅವರು 108 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಾವರಿ ಯೋಜನೆಯ ಅಣೆಕಟ್ಟುವಿಗೆ ರವಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಎಣ್ಣೆಹೊಳೆಯಲ್ಲಿ 125 ಮೀ. ಉದ್ದದ 3ಮಿ. ಎತ್ತರದ ಬ್ಯಾರೇಜ್ ಕಟ್ಟಿ ನೀರು ಸಂಗ್ರಹಿಸಿ ಬೃಹತ್ ಪಂಪುಗಳ ಮೂಲಕ ಚೆಕ್ ಡ್ಯಾಂಗಳಿಗೆ ನೀರು ಹಾಯಿಸಿ ಕೃಷಿಕರ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ ಇದಾಗಿದ್ದು ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಕಾರ್ಕಳ ಪುರಸಭೆ ವ್ಯಾಪ್ತಿಯ ರಾಮಸಮುದ್ರ, ಆನೆಕೆರೆಗಳಿಗೂ ಜಲ ಮರುಪೂರಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳಿದರು.
ನೀರಾವರಿ ಯೋಜನೆ ಜತೆಗೆ ಎಣ್ಣೆಹೊಳೆಯಲ್ಲಿ ಉದ್ಯಾನವನ ನಿರ್ಮಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಮರ್ಣೆ ಗ್ರಾ. ಪಂ. ಅಧ್ಯಕ್ಷ ದಿನೇಶ್ ಕುಮಾರ್, ಹಿರ್ಗಾನ ಗ್ರಾ. ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಉಪಾಧ್ಯಕ್ಷ ಹರೀಶ್ ನಾಯಕ್, ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ಜ್ಯೋತಿ ಹರೀಶ್, ರೇಷ್ಮಾ, ವಾರಾಹಿ ಯೋಜನೆಯ ಕಾರ್ಯ ಪಾಲಕ ಎಂಜಿನಿಯರ್ ಪ್ರವೀಣ್, ಎಂಜಿನಿಯರ್ ಪ್ರಸನ್ನ, ಉದ್ಯಮಿ ಶಿವರಾಮ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ತೊಟ್ಟಂ ಬೀಚ್ನಲ್ಲಿ ಮುಳುಗುತ್ತಿದ್ದವರ ರಕ್ಷಣೆ
Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ