ದಿಂಗಾಲೇಶ್ವರ ಶ್ರೀ ಬೆಂಬಲಿಸಿ ಭಕ್ತರ ಸಭೆ


Team Udayavani, Mar 2, 2020, 11:24 AM IST

huballi-tdy-4

ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರಿಯನ್ನಾಗಿ ಬಾಲೆಹೊಸೂರ ದಿಂಗಾಲೇಶ್ವರ ಸ್ವಾಮೀಜಿ ಮಾಡುವ ಕುರಿತು ರವಿವಾರ ಘಂಟಿಕೇರಿ ಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಕ್ತರ ಸಭೆ ನಡೆಸಿ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು.

ಕಳಸಾ-ಬಂಡೂರಿ ಹೋರಾಟ ಸಮಿತಿಯ ವೀರೇಶ ಸೊಬರದಮಠ ಮಾತನಾಡಿ, ಈ ಹಿಂದೆ ಉತ್ತರಾಧಿಕಾರಿ ನೇಮಕದ ವಿಷಯ ಕುರಿತು ಸಹಿ ಹಾಕಿದ 51 ಜನರನ್ನು ಭೇಟಿ ಮಾಡಿ ಅವರೆಲ್ಲರನ್ನು ಒಂದುಗೂಡಿಸುವ ಕೆಲಸ ಮಾಡೋಣ. ಅವರು ಬರದೇ ಇದ್ದಲ್ಲಿ ಅವರ ಮನೆ ಮುಂದೆ ಕುಳಿತು ಈ ಕುರಿತು ಸ್ಪಷ್ಟ ನಿರ್ಧಾರ ತಿಳಿಸಲು ಒತ್ತಾಯಿಸೋಣ ಎಂದ ಅವರು ಈ ಮೂಲಕ ಭಕ್ತರಲ್ಲಿರುವ ಗೊಂದಲ ನಿವಾರಿಸಬೇಕು ಎಂದರು.

ಪಾಲಿಕೆ ಮಾಜಿ ಸದಸ್ಯ ಅಜ್ಜಪ್ಪ ಹೊರಕೇರಿ ಮಾತನಾಡಿ, ಮೂರುಸಾವಿರಮಠ ಹಿತಾಭಿವೃದ್ಧಿ ವೇದಿಕೆ ಸ್ಥಾಪಿಸುವ ಮೂಲಕ ಒಂದು ಸಂಘಟನೆ ಮಾಡಬೇಕು. ಅದರಲ್ಲಿ ಶೇ.75 ಯುವಕರೇ ಇರಲಿ, ಇನ್ನುಳಿದವರು ಹಿರಿಯರಿರಲಿ ಎಂದು ಸಲಹೆ ನೀಡಿದರು. ಕೆಲವರ ಒತ್ತಡದಿಂದ ಮೂರುಸಾವಿರಮಠದ ಸ್ವಾಮೀಜಿಯವರು ಬಾಯಿ ಬಿಡುತ್ತಿಲ್ಲ. ದಿಂಗಾಲೇಶ್ವರ ಸ್ವಾಮೀಜಿ ಕುರಿತು ಅವರಿಗೂ ಒಳ್ಳೆಯ ಅಭಿಪ್ರಾಯವಿದೆ. ಮಠದ ಕಾರ್ಯಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದು, ಮಠದ ಅಭಿವೃದ್ಧಿಗೆ ದಿಂಗಾಲೇಶ್ವರ ಸ್ವಾಮೀಜಿ ಸೂಕ್ತ ಎಂದರು.

ಈ ಭೂಮಿಯ ಮೇಲಿರುವ ಪ್ರತಿಯೊಬ್ಬರ ಮೇಲೆ ಅಪವಾದಗಳೂ ಇದ್ದೇ ಇವೆ. ಆ ಅಪವಾದಗಳಿಗೆ ನಾಂದಿ ಹಾಡಬೇಕಿದೆ ಎಂದು ಹೇಳಿದರು. ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಮಾತನಾಡಿ, ಹಿತಾಭಿವೃದ್ಧಿ ವೇದಿಕೆ ಮಾಡುವ ಮೂಲಕ ಎಲ್ಲರನ್ನೂ ಒಗ್ಗೂಡಿಸಬೇಕು. ಕೇವಲ ಒಂದೇ ಭಾಗದಲ್ಲಿ ಸಭೆ ನಡೆಸದೆ, ಎಲ್ಲೆಡೆ ಸಭೆ ನಡೆಯುವಂತಾಗಬೇಕು. ಇದರಿಂದ ಎಲ್ಲರೂ ಎಚ್ಚರಗೊಂಡಂತಾಗುತ್ತದೆ ಎಂದರಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದು, ಈ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದರು.

ಪ್ರಕಾಶ ಬೆಂಡಿಗೇರಿ ಮಾತನಾಡಿ, ಬಾಲೆಹೊಸೂರ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಮೂರುಸಾವಿರಮಠದ ಉತ್ತರಾಧಿಕಾರಿ ನೇಮಕ ಮಾಡುವ ಕುರಿತು ಫೇಸ್‌ಬುಕ್‌ನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಸುಮಾರು 62 ಸಾವಿರ ಲೈಕ್‌ಗಳು ಬಂದಿವೆ. ಉತ್ತಮ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ ಎಂದರು.

ಉತ್ತರಾಧಿಕಾರಿ ವಿಚಾರದಲ್ಲಿ ಬೇಕು-ಬೇಡ ಎನ್ನುವ ವಿಚಾರವನ್ನು ಫೆ.23ರ ರಾತ್ರಿವರೆಗೆ ಅವಕಾಶ ನೀಡಲಾಗಿತ್ತು. ಆದರೆ ಅಲ್ಲಿಂದ ಯಾವುದೇ ಸ್ಪಂದನೆ ಸಿಗದೇ ಇದ್ದು, ಇನ್ನು ಉತ್ತರಾಧಿಕಾರಿಯೇ ಅಂತಿಮ ಎಂದರು. ಇನ್ನು ಎಲ್ಲೆಡೆ ಸಭೆ ಮಾಡುವ ಕುರಿತು ತೀರ್ಮಾನಿಸಲಾಗುವುದು. ಜತೆಗೆ ಒಂದು ಬಾರಿ ಕೇವಲ ಮಹಿಳಾ ಸಭೆ, ಒಂದು ಬಾರಿ ಸಂತರ-ಶರಣರ ಸಭೆ, ಒಂದು ಬಾರಿ ಜನಪ್ರತಿನಿಧಿಗಳ ಸಭೆ ಮಾಡಲಾಗುವುದು ಎಂದರು.  ಮಂಟೂರು ಶ್ರೀ ಅಡವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮಹಾದೇವ ಹುಡೇದ, ಎಂ.ಎಂ. ಗೌಡರ, ಬಸವರಾಜ ತೇರದಾಳ ಇನ್ನಿತರರು ಮಾತನಾಡಿದರು. ಬಸವರಾಜ ಚನ್ನೋಜಿ, ಚನ್ನಪ್ಪ ಜಾಬಿನ್‌, ಬಿ.ಸಿ. ಪಾಟೀಲ, ಜಗದೀಶ ಸೊಂಡೂರ, ಎ.ಎಲ್‌. ಹಿರೇಮಠ, ಮಹಾಂತೇಶ ಗಿರಿಮಠ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.