ಕುಂದಾಪುರದಲ್ಲೂ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ: ಓರ್ವನ ಬಂಧನ
Team Udayavani, Mar 2, 2020, 12:48 PM IST
ಕುಂದಾಪುರ: ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ವ್ಯಕ್ತಿಯೋರ್ವ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಸೋಮವಾರ ನಡೆದಿದೆ. ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕೋಡಿ ಬಿವಾಸಿ ರಾಘವೇಂದ್ರ ಗಾಣಿಗ (43) ಘೋಷಣೆ ಕೂಗಿದ ವ್ಯಕ್ತಿ.
ಇಂದು ಬೆಳಿಗ್ಗೆ ಈತ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದ. ಈ ಬಗ್ಗೆ ತಹಶೀಲ್ದಾರ್ ದೂರು ನೀಡಿದ್ದು, ಎಸ್ ಐ ಹರೀಶ್ ಆರ್ ನಾಯ್ಕ್ ತಕ್ಷಣ ಆರೋಪಿಯನ್ನು ಬಂಧಿಸಿದ್ದು, ದೇಶದ್ರೋಹ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದು, ವಿಷಯ ತಿಳಿದ ಜನರು ಠಾಣೆಯತ್ತ ಧಾವಿಸುತ್ತಿದ್ದು, ಪೊಲೀಸರು ಜನರನ್ನು ಚದುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!