ಶಿಷ್ಟಾಚಾರ ಪಾಲನೆ ಕಂದಾಯ ಇಲಾಖೆ ಜವಾಬ್ದಾರಿ


Team Udayavani, Mar 3, 2020, 3:00 AM IST

shishtachara

ಚಿಕ್ಕಬಳ್ಳಾಪುರ: ಶಿಷ್ಟಾಚಾರ ಪಾಲನೆ ಕಂದಾಯ ಇಲಾಖೆಯ ಕರ್ತವ್ಯಗಳಲ್ಲಿ ಪ್ರಮುಖ ಜವಾಬ್ದಾರಿ ಆಗಿದ್ದು, ಕಳೆದ ಎರಡು ವರ್ಷಗಳಿಂದ ಚಿಕ್ಕಬಳ್ಳಾಪುರ ತಾಲೂಕು ತಹಶೀಲ್ದಾರ್‌ ಆಗಿ ಕಾರ್ಯ ನಿರ್ವಹಿಸಿದ ಕೆ.ನರಸಿಂಹಮೂರ್ತಿ, ಶಿಷ್ಟಾಚಾರ ಪಾಲನೆಯಲ್ಲಿ ಜಿಲ್ಲೆಗೆ ಮಾದರಿ ಆಗಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಎ.ಎನ್‌.ರಘುನಂದ್‌ ತಿಳಿಸಿದರು.

ನಗರದ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ 5 ಗಂಟೆ ಸಮಯದಲ್ಲಿ ನೂತನ ತಹಶೀಲ್ದಾರ್‌ ನಾಗಪ್ರಶಾಂತ್‌ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಮಾತನಾಡಿದರು.

ಸಾರ್ವಜನಿಕರಿಗೆ ಸ್ಪಂದಿಸಲಿ: ಸರ್ಕಾರಿ ನೌಕರರಿಗೆ, ಅಧಿಕಾರಿಗಳಿಗೆ ಕೆಲಸ ಮಾಡಲು ನಿರ್ದಿಷ್ಟ ಸ್ಥಳ ಇರುವುದಿಲ್ಲ. ಸರ್ಕಾರ ವರ್ಗಾವಣೆ ಮಾಡಿದ ಸ್ಥಳಕ್ಕೆ ಹೋಗಿ ಜನರ ಸೇವೆ ಮಾಡಬೇಕು. ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಕಾರ್ಯವೈಖರಿ, ಶಿಷ್ಟಾಚಾರ ಪಾಲನೆ ಇತರೆ ಅಧಿಕಾರಿಗಳಿಗೆ ಮಾದರಿ ಆಗಿತ್ತು. ನೂತನ ತಹಶೀಲ್ದಾರ್‌ ಸಹ ಅದೇ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಕಷ್ಟಸುಖಗಳಿಗೆ ಸ್ಪಂದಿಸಲಿ ಎಂದು ಶುಭ ಹಾರೈಸಿದರು.

ಪ್ರಾಮಾಣಿಕ ಕೆಲಸ: ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಮಾತನಾಡಿ, ತಾಲೂಕಿನಲ್ಲಿ ಮಾಡಿರುವ ಕೆಲಸ ಒಳ್ಳೆಯ ಅನುಭವ ನೀಡಿದೆ. ಕೆಲಸದ ವೇಳೆ ಯಾರಿಗಾದರೂ ನೋವಾಗುವ ರೀತಿಯಲ್ಲಿ ಮಾತನಾಡಿದ್ದರೆ ಕ್ಷಮೆ ಇರಲಿ ಎಂದು ಹೇಳಿ ಕೆಲಸದ ವಿಚಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ ಎಂದರು.

ಚಿಕ್ಕಬಳ್ಳಾಪುರ ತಾಲೂಕು ನೂತನ ತಹಶೀಲ್ದಾರ್‌ ಆಗಿ ಅಧಿಕಾರ ಸ್ವೀಕರಿಸಿದ ನಾಗಪ್ರಶಾಂತ್‌, ತಾಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿ ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ರೈತರಿಗೆ ಆಗಬೇಕಾದ ಕಾರ್ಯಗಳ ಅನುಷ್ಠಾನಕ್ಕೆ ತಾವು ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿ, ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ ಬಯಸಿದರು.

ನೂತನ ತಹಶೀಲ್ದಾರ್‌ಗೆ ಸ್ವಾಗತ: ಗ್ರೇಡ್‌-2 ತಹಶೀಲ್ದಾರ್‌ ಆಗಿ ಸ್ಥಳದ ನಿರೀಕ್ಷೆಯಲ್ಲಿದ್ದ ನಾಗಾಪ್ರಶಾಂತ್‌ರನ್ನು ಸರ್ಕಾರ ಚಿಕ್ಕಬಳ್ಳಾಪುರ ತಾಲೂಕಿಗೆ ನೂತನ ತಹಶೀಲ್ದಾರ್‌ ಆಗಿ ವರ್ಗಾಯಿಸಿದ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ವೇಳೆ ನೂತನ ತಹಶೀಲ್ದಾರ್‌ಗೆ ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಸೇರಿದಂತೆ ತಾಲೂಕು ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು ಸ್ವಾಗತ ಕೋರಿದರು.

ನಿರ್ಗಮಿತ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿರನ್ನು ತಾಲೂಕು ಕಚೇರಿ ಸಿಬ್ಬಂದಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ವಿವಿಧ ಶಾಖೆಗಳ ಮುಖ್ಯಸ್ಥರು, ಕಚೇರಿ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.