ಫ‌ುಟ್‌ಪಾತ್‌ಗೆ ಸ್ಥಳಾವಕಾಶದ ಕೊರತೆ; ರಸ್ತೆಯಲ್ಲೇ ಪಾರ್ಕಿಂಗ್‌

ಪಿವಿಎಸ್‌-ಬಂಟ್ಸ್‌ ಹಾಸ್ಟೆಲ್‌ ರಸ್ತೆ ವಿಸ್ತರಣೆ

Team Udayavani, Mar 3, 2020, 4:40 AM IST

road

ಮಹಾನಗರ: ಜನ ಮತ್ತು ವಾಹನ ನಿಬಿಡವಾಗಿರುವ ಪಿವಿಎಸ್‌-ಬಂಟ್ಸ್‌ ಹಾಸ್ಟೆಲ್‌ ರಸ್ತೆಯನ್ನು ಅಗಲಗೊಳಿಸಲಾಗುತ್ತಿದೆ. ಆದರೆ ಈ ರಸ್ತೆಯ ಹೆಚ್ಚಿನ ಕಡೆಗಳಲ್ಲಿ ಫ‌ುಟ್‌ಪಾತ್‌ಗೆ ಅವಕಾಶವೇ ಇಲ್ಲದ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ರಸ್ತೆ ವಿಸ್ತರಣೆಗೊಂಡರೂ ವಾಹನಗಳ ಸುಗಮ ಓಡಾಟ, ಪಾದಚಾರಿಗಳ ಸುರಕ್ಷಿತ ಸಂಚಾರ ಅನುಮಾನ ಎನ್ನುವಂತಾಗಿದೆ.

ಕಿರಿದಾದ ರಸ್ತೆ, ರಸ್ತೆಯಲ್ಲಿಯೇ ವಾಹನಗಳ ಪಾರ್ಕಿಂಗ್‌, ಜನರು ಕೂಡ ರಸ್ತೆಯಲ್ಲಿಯೇ ನಡೆದುಕೊಂಡು ಹೋಗುತ್ತಾ ಇದ್ದುದರಿಂದ ಇಲ್ಲಿ ಸಂಚಾರ ಸಮಸ್ಯೆ ಇತ್ತು. ಸಂಚಾರ ಸರಿಪಡಿಸುವ ಉದ್ದೇಶದಿಂದ ಟ್ರಾಫಿಕ್‌ ಕೋನ್‌ಗಳನ್ನು ಕೂಡ ಅಳವಡಿಸಲಾಗಿತ್ತು. ಆದರೂ ಈ ರಸ್ತೆಯ ಸಮಸ್ಯೆ ಬಗೆಹರಿಯಲಿಲ್ಲ. ಇದೀಗ ಸ್ಥಳಾವವಕಾಶ ಇರುವಲ್ಲಿ ಕಾಂಕ್ರೀಟ್‌ ಹಾಕಿ ರಸ್ತೆಯ ವಿಸ್ತರಣೆ ಮಾಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಮಳೆನೀರು ಹರಿಯುವ ಚರಂ ಡಿಯೂ ನಿರ್ಮಾಣವಾಗುತ್ತಿದೆ. ಆದರೆ ಇದು ಯೋಜನಾಬದ್ಧವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ರಸ್ತೆಯೇ ಫ‌ುಟ್‌ಪಾತ್‌!
ಈಗ ವಿಸ್ತರಣೆಗೊಂಡಿರುವ ಜಾಗ ರಸ್ತೆಗೆ ಸಮತಟ್ಟಾಗಿಯೇ ಇದೆ. ಇದಕ್ಕೆ ಫ‌ುಟ್‌ಪಾತ್‌ನ ಸ್ವರೂಪವೇ ಇಲ್ಲ! ಇದು ರಸ್ತೆಯ ಮಟ್ಟಕ್ಕಿಂತ ಸ್ವಲ್ಪವಾದರೂ ಮೇಲ್ಮಟ್ಟದಲ್ಲಿದ್ದರೆ ಮಾತ್ರ ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಬಹುದಾಗಿದೆ. ಒಂದು ವೇಳೆ ಈಗ ವಿಸ್ತರಣೆಗೊಂಡಿರುವ ಸ್ಥಳವನ್ನು ಫ‌ುಟ್‌ಪಾತ್‌ಗೆಂದು ಮೀಸಲಿಟ್ಟರೂ ಅದರಲ್ಲಿ ನಡೆದಾಡುವುದು ಕೂಡ ಅಪಾಯ ಕಾರಿಯಾಗಲಿದೆ. ಇನ್ನು ಕೆಲವು ಕಡೆ ಫ‌ುಟ್‌ಪಾತ್‌ಗೆ ಸ್ವಲ್ಪ ಸ್ಥಳವೂ ಉಳಿದಿಲ್ಲ. ಹಾಗಾಗಿ ರಸ್ತೆಯ ನಡುವೆಯೇ ನಡೆದಾಡುವ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.

ಈಗಲೇ ವಾಹನ ನಿಲುಗಡೆ
ವಿಸ್ತರಣೆ ಕಾಮಗಾರಿ ಭಾಗಶಃ ಪೂರ್ಣಗೊಂಡ ಸ್ಥಳಗಳಲ್ಲಿ ಈಗಲೇ ವಾಹನಗಳ ನಿಲುಗಡೆ ಆರಂಭವಾಗಿದೆ. ಕಾಮಗಾರಿ ಪೂರ್ಣಗೊಂಡ ಅನಂತರವೂ ವಾಹನ ಪಾರ್ಕಿಂಗ್‌ ಮುಂದುವರಿದರೆ ರಸ್ತೆ ವಿಸ್ತರಣೆಯಿಂದ ಮುಕ್ತ ವಾಹನ ಸಂಚಾರ ಸಾಧ್ಯವಾಗದು. ಈಗಲೇ ಎಚ್ಚೆತ್ತುಕೊಂಡು ವಿಸ್ತರಣೆ ಗೊಂಡಿರುವ ರಸ್ತೆಯ ಉದ್ದಕ್ಕೂ ಫ‌ುಟ್‌ಪಾತ್‌ ನಿರ್ಮಿಸಬೇಕು. ಅಲ್ಲದೆ ಇನ್ನು ನಡೆಯಲಿರುವ ಕಾಮಗಾರಿಯಲ್ಲಿಯೂ ಫ‌ುಟ್‌ಪಾತ್‌ಗೆ ಆದ್ಯತೆ ನೀಡುವುದು ಅವಶ್ಯ.ಅಂತೆಯೇ ಬಸ್‌ ನಿಲುಗಡೆಗೆ (ಬಸ್‌ಬೇ) ಸ್ಥಳಾವಕಾಶ ಒದಗಿಸುವ ಜತೆಗೆ ರಸ್ತೆಯಲ್ಲಿಯೇ ವಾಹನಗಳ ಪಾರ್ಕಿಂಗ್‌ನ್ನು ನಿರ್ಬಂಧಿಸಿದರೆ ಸುಗಮ ಸಂಚಾರ ಸಾಧ್ಯವಾದೀತು.

ಪಾರ್ಕಿಂಗ್‌ಗೆ ಅವಕಾಶವಿಲ್ಲ
ವಿಸ್ತರಣೆಗೊಳ್ಳುತ್ತಿರುವ ರಸ್ತೆಯಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡುವುದಿಲ್ಲ. ಇದು ವಾಹನ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ರಸ್ತೆಯಾಗಿರುವುದರಿಂದ ಫ‌ುಟ್‌ಪಾತ್‌ನ್ನು ಕೂಡ ವ್ಯವಸ್ಥಿತವಾಗಿ ನಿರ್ಮಿಸಲು ಗಮನ ಹರಿಸುತ್ತೇವೆ. ಈ ಬಗ್ಗೆ ಕೂಡಲೇ ಕಾಮಗಾರಿಯ ಪರಿಶೀಲನೆ ನಡೆಸಿ ಎಂಜಿನಿ ಯರ್‌ಗಳಿಗೆ ನಿರ್ದೇ ಶನ ನೀಡಲಾಗುವುದು.
 - ಅಜಿತ್‌ ಕುಮಾರ್‌ ಹೆಗ್ಡೆ , ಶಾನಾಡಿ,ಆಯುಕ್ತರು, ಮಹಾನಗರ ಪಾಲಿಕೆ

ಪಾದಚಾರಿಗಳ ಸುರಕ್ಷತೆ ಒತ್ತು ನೀಡಿ
ವಿದ್ಯಾರ್ಥಿಗಳು ಸಹಿತ ನಿತ್ಯ ನೂರಾರು ಮಂದಿ ನಡೆದಾಡುವ ರಸ್ತೆ ಇದು. ಇಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ, ವೇಗವೂ ಹೆಚ್ಚು. ಈ ಹಿಂದೆ ಇಲ್ಲಿ ಕೆಲವು ಕಡೆ ಫ‌ುಟ್‌ಪಾತ್‌ ಇತ್ತು. ಕೆಲವು ಕಡೆ ಇರಲಿಲ್ಲ. ಮಹಿಳೆಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರು ಅಪಾಯ ಕಾರಿಯಾಗಿಯೇ ನಡೆದುಕೊಂಡು ಹೋಗುವ ಸ್ಥಿತಿ ಇದೆ. ಈಗ ಕೆಲವು ಕಡೆ ರಸ್ತೆಯನ್ನು ವಿಸ್ತರಿಸಲಾಗುತ್ತಿದೆ. ಇದರ ಪ್ರಯೋಜನ ಪಾದಚಾರಿಗಳಿಗೂ ಸಿಗಬೇಕು. ಪಾದಚಾರಿಗಳ ಸುರಕ್ಷತೆಗೂ ಗಮನ ಕೊಡಬೇಕು.
 - ಯಶೋದಾ,ಪಾದಚಾರಿ

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.