ಹೋಲಿಕೆ ಯಾತಕೆ?

ಕೈ ತಪ್ಪಿ ಹೋದದ್ದಕ್ಕೆ ಚಿಂತಿಸಿ ಫ‌ಲವಿಲ್ಲ...

Team Udayavani, Mar 4, 2020, 4:57 AM IST

anttaragange

ಹರೆಯದ ವಯಸ್ಸಿನಲ್ಲಿ, ದಿವ್ಯಾಗೆ ಜೀವದ ಗೆಳೆಯರೊಬ್ಬರಿದ್ದರು. ಮದುವೆಯಾಗಲು, ಗೆಳೆಯನ ತಂಗಿಯರ ಮದುವೆ ಆಗುವವರೆಗೂ ದಿವ್ಯಾ ಕಾಯಬೇಕಿತ್ತು. ದಿವ್ಯಾಳನ್ನು ಮದುವೆಯಾಗುತ್ತೇನೆಂದು ಹತ್ತು ವರ್ಷ ಕಾಲ ಕಾಯಿಸಿದ ಆತ, ಇದ್ದಕ್ಕಿದ್ದಂತೆ, ಅರ್ಥಪೂರ್ಣ ವಿದಾಯವನ್ನೂ ಹೇಳದೆ, ಬೇರೊಂದು ಹುಡುಗಿಯನ್ನು ಮದುವೆಯಾಗಿಬಿಟ್ಟರು.

ಎರಡು ತಿಂಗಳ ಹಿಂದೆ ದೆಹಲಿಯಲ್ಲಿ ಸ್ನೇಹಿತೆಯ ಮಗಳ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ಸು ಬಂದ ಮೇಲೆ, ದಿವ್ಯಾಗೆ ಮನಸ್ಸು ವಿಹ್ವಲಗೊಂಡಿದೆ. ಮದುವೆಯಲ್ಲಿ ತಿಂದದ್ದು ವ್ಯತ್ಯಾಸವಾಯಿತೋ ಏನೋ, ಅಲ್ಲಿಂದ ಬಂದಾಗಿನಿಂದ ಹೊಟ್ಟೆಯಲ್ಲಿ ಬುಗುಬುಗು ಉರಿ. ಎರಡು ತಿಂಗಳಿನಿಂದ ವೈದ್ಯರಿಗೆ ತೋರಿಸುತ್ತಲೇ ಇದ್ದರೂ, ಹೊಟ್ಟೆಯುರಿ ಕಡಿಮೆಯಾಗಿಲ್ಲ. ಜೊತೆಗೆ ತಲೆನೋವೂ ಸೇರಿಕೊಂಡು, ಎದೆಬಡಿತ ಜಾಸ್ತಿಯಾಗಿದೆ.

ದಿವ್ಯಾಗೆ ಐವತ್ತೆರಡು ವರ್ಷ. ಮುಟ್ಟು ನಿಲ್ಲುವ ಸಮಯದಲ್ಲಿ ಆಗುವ ವ್ಯತ್ಯಾಸಗಳಿಂದ ಮಾನಸಿಕ ಒತ್ತಡವಾಗಿರಬಹುದೆಂದು ವೈದ್ಯರು, ಆಕೆಯನ್ನು ನನ್ನ ಬಳಿ ಕಳಿಸಿದ್ದರು. ಮೊದಲ ಬಾರಿ ದಿವ್ಯಾ ನನ್ನನ್ನು ಭೇಟಿ ಮಾಡಲು ಬಂದಾಗ, ಅವರಿಗೆ ಮಿತಿಮೀರಿದ ಉದ್ವಿಗ್ನತೆ (ಠಿಛಿnsಜಿಟn/ಚnxಜಿಛಿಠಿy) ಉಂಟಾಗಿರುವುದು ಸ್ಪಷ್ಟವಾಗಿತ್ತು. ಕೌನ್ಸೆಲಿಂಗ್‌ ಜೊತೆಗೆ ಮನೋವೈದ್ಯರ ನೆರವು ಬೇಕಾಗಿತ್ತು.

ದಿವ್ಯಾ ಚಿಕ್ಕವರಿದ್ದಾಗಲೇ ಅವರ ತಂದೆ ತೀರಿಕೊಂಡಿದ್ದರು. ಐದೂ ಹೆಣ್ಣುಮಕ್ಕಳನ್ನು ತಾಯಿಯೇ ಧೃತಿಗೆಡದೆ ಬೆಳೆಸಿದ್ದರು. ಮದುವೆಯಾಗದ ದಿವ್ಯಾಗೆ ತಾಯಿಯೇ ಸರ್ವಸ್ವ. ಒಂದೂವರೆ ವರ್ಷದ ಹಿಂದೆ ತಾಯಿ ವಿಧಿವಶರಾದ ನಂತರ, ಅವರಲ್ಲಿ ಶೂನ್ಯಭಾವ ಆವರಿಸಿಕೊಂಡಿತ್ತು. ಅದರಿಂದ ಹೊರ ಬರಲೆಂದೇ ದಿವ್ಯಾ, ದೆಹಲಿಯ ಮದುವೆಗೆ ಹೋದದ್ದು.

ಅಲ್ಲಿಗೆ ಹೋದಾಗ, ಗೆಳತಿಯ ಜೀವನದ ಜೊತೆಗೆ ತನ್ನ ಜೀವನದ ಹೋಲಿಕೆಯೊಂದು ಮನದಲ್ಲಿ ಮೂಡಿದೆ. ತನಗೂ ಮದುವೆಯಾಗಿ, ಮಕ್ಕಳಾಗಿದ್ದರೆ, ಯಾವ ರೀತಿಯ ಮಕ್ಕಳು ಹುಟ್ಟುತ್ತಿದ್ದರು? ಎಂಬ ಪ್ರಶ್ನೆ ಮನಸ್ಸೆಲ್ಲಾ ತುಂಬಿಕೊಂಡು, ಗಂಡ-ಮಕ್ಕಳಿದ್ದರೆ ಬದುಕು ಚೆನ್ನ ಎನಿಸಿಬಿಟ್ಟಿದೆ. ಮರೆತಿದ್ದ ಗೆಳೆಯನ ಮಧುರ ನೆನಪು, ಜೊತೆಗೆ ಆತ ಮಾಡಿದ ಮೋಸ, ಎಲ್ಲವೂ ಆಕೆಯನ್ನು ಒಮ್ಮೆಲೆ ಹಿಂಡಿಹಿಪ್ಪೇಕಾಯಿ ಮಾಡಿದೆ. ತಾನು ಮದುವೆಯಾಗದೇ ಉಳಿದ ಬಗ್ಗೆ ದಿವ್ಯಾಗೆ ವಿಷಾದ ಕಾಡಿದೆ. ಯಾವಾಗಲೂ ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದ ತಾಯಿಯೂ ಈಗ ಬದುಕಿಲ್ಲ.

ಹರೆಯದ ವಯಸ್ಸಿನಲ್ಲಿ, ದಿವ್ಯಾಗೆ ಜೀವದ ಗೆಳೆಯರೊಬ್ಬರಿದ್ದರು. ಮದುವೆಯಾಗಲು, ಗೆಳೆಯನ ತಂಗಿಯರ ಮದುವೆ ಆಗುವವರೆಗೂ ದಿವ್ಯಾ ಕಾಯಬೇಕಿತ್ತು. ದಿವ್ಯಾಳನ್ನು ಮದುವೆಯಾಗುತ್ತೇನೆಂದು ಹತ್ತು ವರ್ಷ ಕಾಲ ಕಾಯಿಸಿದ ಆತ, ಇದ್ದಕ್ಕಿದ್ದಂತೆ, ಅರ್ಥಪೂರ್ಣ ವಿದಾಯವನ್ನೂ ಹೇಳದೆ, ಬೇರೊಂದು ಹುಡುಗಿಯನ್ನು ಮದುವೆಯಾಗಿಬಿಟ್ಟರು. ಆತನ ಮೇಲೆ ದಿವ್ಯಾ ಇಟ್ಟಿದ್ದ ಅದಮ್ಯ ನಂಬಿಕೆ ಸುಳ್ಳಾಗಿತ್ತು. ದಿವ್ಯಾರ ತಾಯಿ, ಆಗಿ ಹೋಗಿದ್ದನ್ನು ಲೆಕ್ಕಕ್ಕಿಡಬಾರದೆಂದು, ನೈತಿಕ ಬೆಂಬಲಕ್ಕೆ ನಿಂತಿದ್ದರು.

ದೆಹಲಿಗೆ ಹೋಗಿ ಬಂದ ನಂತರ, ಜೀವನದಲ್ಲಿ ಹುದುಗಿದ್ದ ನೋವು ಮರುಕಳಿಸಿದೆ. ಪ್ರೇಮದಲ್ಲಿ ಮೋಸವಾಯಿತಲ್ಲ ಎಂಬ ಮನೋಕ್ಲೇಷೆಯಿಂದ ದಿವ್ಯಾ ನರಳತೊಡಗಿದರು. ಆ ಆರದ ಗಾಯದಿಂದ ಉದ್ವಿಗ್ನತೆ ಹೆಚ್ಚಾಗಿ, ಶಾರೀರಿಕ ಸಮಸ್ಯೆ ಕಾಡತೊಡಗಿತು. ಜೊತೆಗೆ, ಮೆನೋಪಾಸ್‌ ಸಮಯದಲ್ಲಿ ದೇಹದಲ್ಲಾಗುವ ರಾಸಾಯನಿಕ ಬದಲಾವಣೆಯಿಂದ ಒಟ್ಟಾರೆ ಆರೋಗ್ಯವೂ ಹದಗೆಟ್ಟಿತು.

ಮನೋಕ್ಲೇಷೆಯಿಂದ ಈ ರೀತಿ ಆಗಬಹುದೆಂದು ಅರ್ಥವಾದಮೇಲೆ, ದಿವ್ಯಾಗೆ ಕೊಂಚ ಸಮಾಧಾನವಾಯಿತು. ತಾಯಿಯೊಡನೆಯೂ ಹೇಳದ ಕೆಲವು ಸಂಗತಿಗಳನ್ನು ನನ್ನೊಡನೆ ಹಂಚಿಕೊಂಡ ಮೇಲೆ, ತೀವ್ರ ಪ್ರತಿಕ್ರಿಯೆ ಕಡಿಮೆಯಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಗೆಳೆಯನ ಬದುಕಿನ ಆಗುಹೋಗುಗಳು ತಿಳಿಯದ ಹಾಗೆ, ಅವರನ್ನು ಬ್ಲಾಕ್‌ ಮಾಡಲಾಯ್ತು. ಕ್ರಮೇಣ ದಿವ್ಯಾ ಅವರು ಚೇತರಿಸಿಕೊಳ್ಳತೊಡಗಿದರು.

ಡಾ. ಶುಭಾ ಮಧುಸೂದನ್‌
ಚಿಕಿತ್ಸಾ ಮನೋವಿಜ್ಞಾನಿ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.